Homeಚಳವಳಿನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

- Advertisement -
- Advertisement -

“ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ; ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರು ಹಾಗೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಾರಿದ್ದಾರೆ.

ಭಾರತ ಉಳಿಸಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು  ಹೇಳಿದ್ದಾರೆ.

ಭಾರತ ದೇಶದ ಶಕ್ತಿ, ಭಾರತ ಆತ್ಮ ಇಲ್ಲಿನ ಆರ್ಥಿಕ ವ್ಯವಸ್ಥೆಯಾಗಿತ್ತು. ಇಡೀ ವಿಶ್ವ ನಮ್ಮನ್ನು ನೋಡುತ್ತಿತ್ತು. ಹಲವು ಧರ್ಮ, ಜಾತಿ ಮತ್ತು ಹಲವಾರು ವಿಚಾರಧಾರೆಗಳು ಸೇರಿ 9% ಜಿಡಿಪಿ ತಂದಿದ್ದೆವು. ಚೀನಾ ಮತ್ತು ಇಂಡಿಯಾ ಸೇರಿ ಚಿಂಡಿಯಾ ಎಂದು ಕರೆಯುತ್ತಿದ್ದರು. ಚಿಂಡಿಯಾ ವಿಶ್ವದ ಭವಿಷ್ಯ ಎಂದು ಕರೆಯಲಾಗುತ್ತಿದೆ. ಆದರೆ ಈಗ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಭಾರತದ ಭವಿಷ್ಯವನ್ನು ನರೇಂದ್ರ ಮೋದಿ ತಮ್ಮ ಕೈಯ್ಯಾರೆ ಹಾಳು ಮಾಡಿದ್ದರೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

ಇನ್ನು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಪದ್ದತಿ ಜಾರಿಗೆ ತಂದು 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ನಿರುದ್ಯೋಗ ದರ ಮಾಡಿದರು. 9%ಇದ್ದ ಜಿಡಿಪಿಯನ್ನು 4%ಗೆ ತಂದು ನಿಲ್ಲಿಸಿದರು. ಭಾರತದ ಆರ್ಥಿಕತೆಯನ್ನು ಮಾಡಿದ್ದು ನಮ್ಮ ಅತ್ಯಂತ ದೊಡ್ಡ ಶತ್ರು ಅಲ್ಲ ಬದಲಿಗೆ ನಮ್ಮ ಪ್ರಧಾನಿಯಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಇದರಿಂದ ನಷ್ಟ ಅನುಭವಿಸಿದ್ದಾರೆ ಎಂದರು.

ಒಂದು ಲಕ್ಷಕ್ಕೂ ಹೆಚ್ಚಿನ ಕಾಂಟ್ರಾಕ್ಟ್‌ಅನ್ನು ಅದಾನಿಯೊಬ್ಬರಿಗೆ ಮೋದಿ ನೀಡಿದ್ದಾರೆ. ಏಕೆ? ಇದು ಭ್ರಷ್ಟಾಚಾರವಲ್ಲವೇ? ಒಂದು ಲಕ್ಷದ ನಲವತ್ತು ಲಕ್ಷ ಕೋಟಿ ರೂಪಾಯಿಗಳನ್ನು ಅತೀ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಸರ್ಕಾರ ಬಡಜನರು ಬಳಸುವ ಫೋನ್‌ ಕರೆಗಳ ದರವನ್ನು 15% ಹೆಚ್ಚಿಸಿದ್ದಾರೆ.

ಭಾರತದ ರೈತರು, ಕಾರ್ಮಿಕರು, ಯುವಜನರ ಜೇಬಿನಲ್ಲಿ ಹಣ ಎಲ್ಲಿಯವರೆಗೂ ಬರುವುದಿಲ್ಲ ಅಲ್ಲಿಯವರೆಗೆ ನಮ್ಮ ಅರ್ಥ ವ್ಯವಸ್ಥೆ ಸುಧಾರಿಸುವುದಿಲ್ಲ. ಮೊದಲು ಬಡವರ, ರೈತರ, ಕಾರ್ಮಿಕರ ಕೈಗೆ ಬರಬೇಕು. ಅವರು ಖರೀದಿಸುತ್ತಾರೆ. ಬೇಡಿಕೆ ಹೆಚ್ಚಾದಂತೆ ಫ್ಯಾಕ್ಟರಿಗಳು ಹೆಚ್ಚು ಉತ್ಪಾದನೆ ಮಾಡಲು ಜನರಿಗೆ ಉದ್ಯೋಗ ನೀಡುತ್ತಾರೆ. ಇದು ಒಂದು ವ್ಯವಸ್ಥೇ ಇದನ್ನು ನರೇಂದ್ರ ಮೋದಿ ಹಾಳು ಮಾಡಿದರು.

ಕಾಂಗ್ರೆಸ್‌ ಆಡಳಿತದ ಪಂಜಾಬ್‌, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೆಲವೆಡೆ ಎಂಎಸ್‌ಪಿ ಕೊಡುತ್ತಿದ್ದೇವೆ. ಮನರೇಗಾ ಯೋಜನೆ ಯಾಕೆ ಜಾರಿಗೆ ತಂದೆವು? ನಮಗೆ ಗೊತ್ತು ರೈತರು ಚೆನ್ನಾಗಿದ್ದರೆ ದೇಶ ಚೆನ್ನಾಗಿರುತ್ತದೆ ಎಂದು ಅವರು ಹೇಳಿದರು.

ಇಡೀ ದೇಶ ನರೇಂದ್ರ ಗಾಂಧಿಯವರನ್ನು ಆಯ್ಕೆ ಮಾಡಿತು. ಏಕೆಂದರೆ ದೇಶಕ್ಕೆ ಒಳ್ಳೆಯದು ಮಾಡಲಿ ಎಂದು. ಆದರೆ ಅವರು ಮಾಡಿದ್ದೇನು? ದೇಶವನ್ನು ಹಳ್ಳ ಹಿಡಿಸಿದರು ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಭಾರತದ ಟಿವಿಗಳಲ್ಲಿ ಕೇವಲ ನರೇಂದ್ರ ಮೋದಿಯವರು ಮಾತ್ರ ಕಾಣಿಸಿಕೊಳ್ಳುತ್ತಾರೆ. ಎಲ್ಲಾ ಜಾಹೀರಾತುಗಳಲ್ಲಿಯೂ ಅವರೇ ಕಾಣಿಸುತ್ತಾರೆ. ಮನಮೋಹನ್‌ ಸಿಂಗ್‌ ಕಾಣಿಸುವುದಿಲ್ಲ ಅಲ್ಲವೇ? ನರೇಂದ್ರ ಮೊದಿಯವರ ಜಾಹಿರಾತು ಕೊಡಲು ಅವರಿಗೆ ಹಣ ಎಲ್ಲಿಂದ ಬರುತ್ತದೆ? ಅದು ನಮ್ಮೆಲ್ಲರ ತೆರಿಗೆ ಹಣವಲ್ಲವೇ? ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...