Homeಚಳವಳಿನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

- Advertisement -
- Advertisement -

“ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ; ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರು ಹಾಗೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಾರಿದ್ದಾರೆ.

ಭಾರತ ಉಳಿಸಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು  ಹೇಳಿದ್ದಾರೆ.

ಭಾರತ ದೇಶದ ಶಕ್ತಿ, ಭಾರತ ಆತ್ಮ ಇಲ್ಲಿನ ಆರ್ಥಿಕ ವ್ಯವಸ್ಥೆಯಾಗಿತ್ತು. ಇಡೀ ವಿಶ್ವ ನಮ್ಮನ್ನು ನೋಡುತ್ತಿತ್ತು. ಹಲವು ಧರ್ಮ, ಜಾತಿ ಮತ್ತು ಹಲವಾರು ವಿಚಾರಧಾರೆಗಳು ಸೇರಿ 9% ಜಿಡಿಪಿ ತಂದಿದ್ದೆವು. ಚೀನಾ ಮತ್ತು ಇಂಡಿಯಾ ಸೇರಿ ಚಿಂಡಿಯಾ ಎಂದು ಕರೆಯುತ್ತಿದ್ದರು. ಚಿಂಡಿಯಾ ವಿಶ್ವದ ಭವಿಷ್ಯ ಎಂದು ಕರೆಯಲಾಗುತ್ತಿದೆ. ಆದರೆ ಈಗ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಭಾರತದ ಭವಿಷ್ಯವನ್ನು ನರೇಂದ್ರ ಮೋದಿ ತಮ್ಮ ಕೈಯ್ಯಾರೆ ಹಾಳು ಮಾಡಿದ್ದರೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

ಇನ್ನು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಪದ್ದತಿ ಜಾರಿಗೆ ತಂದು 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ನಿರುದ್ಯೋಗ ದರ ಮಾಡಿದರು. 9%ಇದ್ದ ಜಿಡಿಪಿಯನ್ನು 4%ಗೆ ತಂದು ನಿಲ್ಲಿಸಿದರು. ಭಾರತದ ಆರ್ಥಿಕತೆಯನ್ನು ಮಾಡಿದ್ದು ನಮ್ಮ ಅತ್ಯಂತ ದೊಡ್ಡ ಶತ್ರು ಅಲ್ಲ ಬದಲಿಗೆ ನಮ್ಮ ಪ್ರಧಾನಿಯಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಇದರಿಂದ ನಷ್ಟ ಅನುಭವಿಸಿದ್ದಾರೆ ಎಂದರು.

ಒಂದು ಲಕ್ಷಕ್ಕೂ ಹೆಚ್ಚಿನ ಕಾಂಟ್ರಾಕ್ಟ್‌ಅನ್ನು ಅದಾನಿಯೊಬ್ಬರಿಗೆ ಮೋದಿ ನೀಡಿದ್ದಾರೆ. ಏಕೆ? ಇದು ಭ್ರಷ್ಟಾಚಾರವಲ್ಲವೇ? ಒಂದು ಲಕ್ಷದ ನಲವತ್ತು ಲಕ್ಷ ಕೋಟಿ ರೂಪಾಯಿಗಳನ್ನು ಅತೀ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಸರ್ಕಾರ ಬಡಜನರು ಬಳಸುವ ಫೋನ್‌ ಕರೆಗಳ ದರವನ್ನು 15% ಹೆಚ್ಚಿಸಿದ್ದಾರೆ.

ಭಾರತದ ರೈತರು, ಕಾರ್ಮಿಕರು, ಯುವಜನರ ಜೇಬಿನಲ್ಲಿ ಹಣ ಎಲ್ಲಿಯವರೆಗೂ ಬರುವುದಿಲ್ಲ ಅಲ್ಲಿಯವರೆಗೆ ನಮ್ಮ ಅರ್ಥ ವ್ಯವಸ್ಥೆ ಸುಧಾರಿಸುವುದಿಲ್ಲ. ಮೊದಲು ಬಡವರ, ರೈತರ, ಕಾರ್ಮಿಕರ ಕೈಗೆ ಬರಬೇಕು. ಅವರು ಖರೀದಿಸುತ್ತಾರೆ. ಬೇಡಿಕೆ ಹೆಚ್ಚಾದಂತೆ ಫ್ಯಾಕ್ಟರಿಗಳು ಹೆಚ್ಚು ಉತ್ಪಾದನೆ ಮಾಡಲು ಜನರಿಗೆ ಉದ್ಯೋಗ ನೀಡುತ್ತಾರೆ. ಇದು ಒಂದು ವ್ಯವಸ್ಥೇ ಇದನ್ನು ನರೇಂದ್ರ ಮೋದಿ ಹಾಳು ಮಾಡಿದರು.

ಕಾಂಗ್ರೆಸ್‌ ಆಡಳಿತದ ಪಂಜಾಬ್‌, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೆಲವೆಡೆ ಎಂಎಸ್‌ಪಿ ಕೊಡುತ್ತಿದ್ದೇವೆ. ಮನರೇಗಾ ಯೋಜನೆ ಯಾಕೆ ಜಾರಿಗೆ ತಂದೆವು? ನಮಗೆ ಗೊತ್ತು ರೈತರು ಚೆನ್ನಾಗಿದ್ದರೆ ದೇಶ ಚೆನ್ನಾಗಿರುತ್ತದೆ ಎಂದು ಅವರು ಹೇಳಿದರು.

ಇಡೀ ದೇಶ ನರೇಂದ್ರ ಗಾಂಧಿಯವರನ್ನು ಆಯ್ಕೆ ಮಾಡಿತು. ಏಕೆಂದರೆ ದೇಶಕ್ಕೆ ಒಳ್ಳೆಯದು ಮಾಡಲಿ ಎಂದು. ಆದರೆ ಅವರು ಮಾಡಿದ್ದೇನು? ದೇಶವನ್ನು ಹಳ್ಳ ಹಿಡಿಸಿದರು ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಭಾರತದ ಟಿವಿಗಳಲ್ಲಿ ಕೇವಲ ನರೇಂದ್ರ ಮೋದಿಯವರು ಮಾತ್ರ ಕಾಣಿಸಿಕೊಳ್ಳುತ್ತಾರೆ. ಎಲ್ಲಾ ಜಾಹೀರಾತುಗಳಲ್ಲಿಯೂ ಅವರೇ ಕಾಣಿಸುತ್ತಾರೆ. ಮನಮೋಹನ್‌ ಸಿಂಗ್‌ ಕಾಣಿಸುವುದಿಲ್ಲ ಅಲ್ಲವೇ? ನರೇಂದ್ರ ಮೊದಿಯವರ ಜಾಹಿರಾತು ಕೊಡಲು ಅವರಿಗೆ ಹಣ ಎಲ್ಲಿಂದ ಬರುತ್ತದೆ? ಅದು ನಮ್ಮೆಲ್ಲರ ತೆರಿಗೆ ಹಣವಲ್ಲವೇ? ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...