Homeಚಳವಳಿನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

- Advertisement -
- Advertisement -

“ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ; ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರು ಹಾಗೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಾರಿದ್ದಾರೆ.

ಭಾರತ ಉಳಿಸಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು  ಹೇಳಿದ್ದಾರೆ.

ಭಾರತ ದೇಶದ ಶಕ್ತಿ, ಭಾರತ ಆತ್ಮ ಇಲ್ಲಿನ ಆರ್ಥಿಕ ವ್ಯವಸ್ಥೆಯಾಗಿತ್ತು. ಇಡೀ ವಿಶ್ವ ನಮ್ಮನ್ನು ನೋಡುತ್ತಿತ್ತು. ಹಲವು ಧರ್ಮ, ಜಾತಿ ಮತ್ತು ಹಲವಾರು ವಿಚಾರಧಾರೆಗಳು ಸೇರಿ 9% ಜಿಡಿಪಿ ತಂದಿದ್ದೆವು. ಚೀನಾ ಮತ್ತು ಇಂಡಿಯಾ ಸೇರಿ ಚಿಂಡಿಯಾ ಎಂದು ಕರೆಯುತ್ತಿದ್ದರು. ಚಿಂಡಿಯಾ ವಿಶ್ವದ ಭವಿಷ್ಯ ಎಂದು ಕರೆಯಲಾಗುತ್ತಿದೆ. ಆದರೆ ಈಗ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಭಾರತದ ಭವಿಷ್ಯವನ್ನು ನರೇಂದ್ರ ಮೋದಿ ತಮ್ಮ ಕೈಯ್ಯಾರೆ ಹಾಳು ಮಾಡಿದ್ದರೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

ಇನ್ನು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಪದ್ದತಿ ಜಾರಿಗೆ ತಂದು 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ನಿರುದ್ಯೋಗ ದರ ಮಾಡಿದರು. 9%ಇದ್ದ ಜಿಡಿಪಿಯನ್ನು 4%ಗೆ ತಂದು ನಿಲ್ಲಿಸಿದರು. ಭಾರತದ ಆರ್ಥಿಕತೆಯನ್ನು ಮಾಡಿದ್ದು ನಮ್ಮ ಅತ್ಯಂತ ದೊಡ್ಡ ಶತ್ರು ಅಲ್ಲ ಬದಲಿಗೆ ನಮ್ಮ ಪ್ರಧಾನಿಯಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಇದರಿಂದ ನಷ್ಟ ಅನುಭವಿಸಿದ್ದಾರೆ ಎಂದರು.

ಒಂದು ಲಕ್ಷಕ್ಕೂ ಹೆಚ್ಚಿನ ಕಾಂಟ್ರಾಕ್ಟ್‌ಅನ್ನು ಅದಾನಿಯೊಬ್ಬರಿಗೆ ಮೋದಿ ನೀಡಿದ್ದಾರೆ. ಏಕೆ? ಇದು ಭ್ರಷ್ಟಾಚಾರವಲ್ಲವೇ? ಒಂದು ಲಕ್ಷದ ನಲವತ್ತು ಲಕ್ಷ ಕೋಟಿ ರೂಪಾಯಿಗಳನ್ನು ಅತೀ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಸರ್ಕಾರ ಬಡಜನರು ಬಳಸುವ ಫೋನ್‌ ಕರೆಗಳ ದರವನ್ನು 15% ಹೆಚ್ಚಿಸಿದ್ದಾರೆ.

ಭಾರತದ ರೈತರು, ಕಾರ್ಮಿಕರು, ಯುವಜನರ ಜೇಬಿನಲ್ಲಿ ಹಣ ಎಲ್ಲಿಯವರೆಗೂ ಬರುವುದಿಲ್ಲ ಅಲ್ಲಿಯವರೆಗೆ ನಮ್ಮ ಅರ್ಥ ವ್ಯವಸ್ಥೆ ಸುಧಾರಿಸುವುದಿಲ್ಲ. ಮೊದಲು ಬಡವರ, ರೈತರ, ಕಾರ್ಮಿಕರ ಕೈಗೆ ಬರಬೇಕು. ಅವರು ಖರೀದಿಸುತ್ತಾರೆ. ಬೇಡಿಕೆ ಹೆಚ್ಚಾದಂತೆ ಫ್ಯಾಕ್ಟರಿಗಳು ಹೆಚ್ಚು ಉತ್ಪಾದನೆ ಮಾಡಲು ಜನರಿಗೆ ಉದ್ಯೋಗ ನೀಡುತ್ತಾರೆ. ಇದು ಒಂದು ವ್ಯವಸ್ಥೇ ಇದನ್ನು ನರೇಂದ್ರ ಮೋದಿ ಹಾಳು ಮಾಡಿದರು.

ಕಾಂಗ್ರೆಸ್‌ ಆಡಳಿತದ ಪಂಜಾಬ್‌, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೆಲವೆಡೆ ಎಂಎಸ್‌ಪಿ ಕೊಡುತ್ತಿದ್ದೇವೆ. ಮನರೇಗಾ ಯೋಜನೆ ಯಾಕೆ ಜಾರಿಗೆ ತಂದೆವು? ನಮಗೆ ಗೊತ್ತು ರೈತರು ಚೆನ್ನಾಗಿದ್ದರೆ ದೇಶ ಚೆನ್ನಾಗಿರುತ್ತದೆ ಎಂದು ಅವರು ಹೇಳಿದರು.

ಇಡೀ ದೇಶ ನರೇಂದ್ರ ಗಾಂಧಿಯವರನ್ನು ಆಯ್ಕೆ ಮಾಡಿತು. ಏಕೆಂದರೆ ದೇಶಕ್ಕೆ ಒಳ್ಳೆಯದು ಮಾಡಲಿ ಎಂದು. ಆದರೆ ಅವರು ಮಾಡಿದ್ದೇನು? ದೇಶವನ್ನು ಹಳ್ಳ ಹಿಡಿಸಿದರು ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಭಾರತದ ಟಿವಿಗಳಲ್ಲಿ ಕೇವಲ ನರೇಂದ್ರ ಮೋದಿಯವರು ಮಾತ್ರ ಕಾಣಿಸಿಕೊಳ್ಳುತ್ತಾರೆ. ಎಲ್ಲಾ ಜಾಹೀರಾತುಗಳಲ್ಲಿಯೂ ಅವರೇ ಕಾಣಿಸುತ್ತಾರೆ. ಮನಮೋಹನ್‌ ಸಿಂಗ್‌ ಕಾಣಿಸುವುದಿಲ್ಲ ಅಲ್ಲವೇ? ನರೇಂದ್ರ ಮೊದಿಯವರ ಜಾಹಿರಾತು ಕೊಡಲು ಅವರಿಗೆ ಹಣ ಎಲ್ಲಿಂದ ಬರುತ್ತದೆ? ಅದು ನಮ್ಮೆಲ್ಲರ ತೆರಿಗೆ ಹಣವಲ್ಲವೇ? ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...