Homeಚಳವಳಿನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

- Advertisement -
- Advertisement -

“ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ; ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರು ಹಾಗೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಾರಿದ್ದಾರೆ.

ಭಾರತ ಉಳಿಸಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು  ಹೇಳಿದ್ದಾರೆ.

ಭಾರತ ದೇಶದ ಶಕ್ತಿ, ಭಾರತ ಆತ್ಮ ಇಲ್ಲಿನ ಆರ್ಥಿಕ ವ್ಯವಸ್ಥೆಯಾಗಿತ್ತು. ಇಡೀ ವಿಶ್ವ ನಮ್ಮನ್ನು ನೋಡುತ್ತಿತ್ತು. ಹಲವು ಧರ್ಮ, ಜಾತಿ ಮತ್ತು ಹಲವಾರು ವಿಚಾರಧಾರೆಗಳು ಸೇರಿ 9% ಜಿಡಿಪಿ ತಂದಿದ್ದೆವು. ಚೀನಾ ಮತ್ತು ಇಂಡಿಯಾ ಸೇರಿ ಚಿಂಡಿಯಾ ಎಂದು ಕರೆಯುತ್ತಿದ್ದರು. ಚಿಂಡಿಯಾ ವಿಶ್ವದ ಭವಿಷ್ಯ ಎಂದು ಕರೆಯಲಾಗುತ್ತಿದೆ. ಆದರೆ ಈಗ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಭಾರತದ ಭವಿಷ್ಯವನ್ನು ನರೇಂದ್ರ ಮೋದಿ ತಮ್ಮ ಕೈಯ್ಯಾರೆ ಹಾಳು ಮಾಡಿದ್ದರೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

ಇನ್ನು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಪದ್ದತಿ ಜಾರಿಗೆ ತಂದು 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ನಿರುದ್ಯೋಗ ದರ ಮಾಡಿದರು. 9%ಇದ್ದ ಜಿಡಿಪಿಯನ್ನು 4%ಗೆ ತಂದು ನಿಲ್ಲಿಸಿದರು. ಭಾರತದ ಆರ್ಥಿಕತೆಯನ್ನು ಮಾಡಿದ್ದು ನಮ್ಮ ಅತ್ಯಂತ ದೊಡ್ಡ ಶತ್ರು ಅಲ್ಲ ಬದಲಿಗೆ ನಮ್ಮ ಪ್ರಧಾನಿಯಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಇದರಿಂದ ನಷ್ಟ ಅನುಭವಿಸಿದ್ದಾರೆ ಎಂದರು.

ಒಂದು ಲಕ್ಷಕ್ಕೂ ಹೆಚ್ಚಿನ ಕಾಂಟ್ರಾಕ್ಟ್‌ಅನ್ನು ಅದಾನಿಯೊಬ್ಬರಿಗೆ ಮೋದಿ ನೀಡಿದ್ದಾರೆ. ಏಕೆ? ಇದು ಭ್ರಷ್ಟಾಚಾರವಲ್ಲವೇ? ಒಂದು ಲಕ್ಷದ ನಲವತ್ತು ಲಕ್ಷ ಕೋಟಿ ರೂಪಾಯಿಗಳನ್ನು ಅತೀ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಸರ್ಕಾರ ಬಡಜನರು ಬಳಸುವ ಫೋನ್‌ ಕರೆಗಳ ದರವನ್ನು 15% ಹೆಚ್ಚಿಸಿದ್ದಾರೆ.

ಭಾರತದ ರೈತರು, ಕಾರ್ಮಿಕರು, ಯುವಜನರ ಜೇಬಿನಲ್ಲಿ ಹಣ ಎಲ್ಲಿಯವರೆಗೂ ಬರುವುದಿಲ್ಲ ಅಲ್ಲಿಯವರೆಗೆ ನಮ್ಮ ಅರ್ಥ ವ್ಯವಸ್ಥೆ ಸುಧಾರಿಸುವುದಿಲ್ಲ. ಮೊದಲು ಬಡವರ, ರೈತರ, ಕಾರ್ಮಿಕರ ಕೈಗೆ ಬರಬೇಕು. ಅವರು ಖರೀದಿಸುತ್ತಾರೆ. ಬೇಡಿಕೆ ಹೆಚ್ಚಾದಂತೆ ಫ್ಯಾಕ್ಟರಿಗಳು ಹೆಚ್ಚು ಉತ್ಪಾದನೆ ಮಾಡಲು ಜನರಿಗೆ ಉದ್ಯೋಗ ನೀಡುತ್ತಾರೆ. ಇದು ಒಂದು ವ್ಯವಸ್ಥೇ ಇದನ್ನು ನರೇಂದ್ರ ಮೋದಿ ಹಾಳು ಮಾಡಿದರು.

ಕಾಂಗ್ರೆಸ್‌ ಆಡಳಿತದ ಪಂಜಾಬ್‌, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೆಲವೆಡೆ ಎಂಎಸ್‌ಪಿ ಕೊಡುತ್ತಿದ್ದೇವೆ. ಮನರೇಗಾ ಯೋಜನೆ ಯಾಕೆ ಜಾರಿಗೆ ತಂದೆವು? ನಮಗೆ ಗೊತ್ತು ರೈತರು ಚೆನ್ನಾಗಿದ್ದರೆ ದೇಶ ಚೆನ್ನಾಗಿರುತ್ತದೆ ಎಂದು ಅವರು ಹೇಳಿದರು.

ಇಡೀ ದೇಶ ನರೇಂದ್ರ ಗಾಂಧಿಯವರನ್ನು ಆಯ್ಕೆ ಮಾಡಿತು. ಏಕೆಂದರೆ ದೇಶಕ್ಕೆ ಒಳ್ಳೆಯದು ಮಾಡಲಿ ಎಂದು. ಆದರೆ ಅವರು ಮಾಡಿದ್ದೇನು? ದೇಶವನ್ನು ಹಳ್ಳ ಹಿಡಿಸಿದರು ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಭಾರತದ ಟಿವಿಗಳಲ್ಲಿ ಕೇವಲ ನರೇಂದ್ರ ಮೋದಿಯವರು ಮಾತ್ರ ಕಾಣಿಸಿಕೊಳ್ಳುತ್ತಾರೆ. ಎಲ್ಲಾ ಜಾಹೀರಾತುಗಳಲ್ಲಿಯೂ ಅವರೇ ಕಾಣಿಸುತ್ತಾರೆ. ಮನಮೋಹನ್‌ ಸಿಂಗ್‌ ಕಾಣಿಸುವುದಿಲ್ಲ ಅಲ್ಲವೇ? ನರೇಂದ್ರ ಮೊದಿಯವರ ಜಾಹಿರಾತು ಕೊಡಲು ಅವರಿಗೆ ಹಣ ಎಲ್ಲಿಂದ ಬರುತ್ತದೆ? ಅದು ನಮ್ಮೆಲ್ಲರ ತೆರಿಗೆ ಹಣವಲ್ಲವೇ? ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...