Homeಚಳವಳಿನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ: ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

- Advertisement -
- Advertisement -

“ನನ್ನ ಹೆಸರು ರಾಹುಲ್ ಗಾಂಧಿ, ರಾಹುಲ್ ಸಾವರ್ಕರ್ ಅಲ್ಲ; ಸತ್ಯವನ್ನು ಹೇಳಿದ್ದಕ್ಕಾಗಿ ನಾನು ಎಂದಿಗೂ ಕ್ಷಮೆಯಾಚಿಸುವುದಿಲ್ಲ ಮತ್ತು ಯಾವುದೇ ಕಾಂಗ್ರೆಸ್ಸಿಗರು ಹಾಗೆ ಮಾಡುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಾರಿದ್ದಾರೆ.

ಭಾರತ ಉಳಿಸಿ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು “ಭಾರತದ ಆರ್ಥಿಕತೆಯನ್ನು ನಾಶಪಡಿಸಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕಾಗಿರುವುದು ನರೇಂದ್ರ ಮೋದಿ ಮತ್ತು ಅವರ ಸಹಾಯಕ ಅಮಿತ್ ಶಾ” ಎಂದು  ಹೇಳಿದ್ದಾರೆ.

ಭಾರತ ದೇಶದ ಶಕ್ತಿ, ಭಾರತ ಆತ್ಮ ಇಲ್ಲಿನ ಆರ್ಥಿಕ ವ್ಯವಸ್ಥೆಯಾಗಿತ್ತು. ಇಡೀ ವಿಶ್ವ ನಮ್ಮನ್ನು ನೋಡುತ್ತಿತ್ತು. ಹಲವು ಧರ್ಮ, ಜಾತಿ ಮತ್ತು ಹಲವಾರು ವಿಚಾರಧಾರೆಗಳು ಸೇರಿ 9% ಜಿಡಿಪಿ ತಂದಿದ್ದೆವು. ಚೀನಾ ಮತ್ತು ಇಂಡಿಯಾ ಸೇರಿ ಚಿಂಡಿಯಾ ಎಂದು ಕರೆಯುತ್ತಿದ್ದರು. ಚಿಂಡಿಯಾ ವಿಶ್ವದ ಭವಿಷ್ಯ ಎಂದು ಕರೆಯಲಾಗುತ್ತಿದೆ. ಆದರೆ ಈಗ ಏನಾಗಿದೆ ಎಂದು ನೀವೇ ನೋಡುತ್ತಿದ್ದೀರಿ. ಭಾರತದ ಭವಿಷ್ಯವನ್ನು ನರೇಂದ್ರ ಮೋದಿ ತಮ್ಮ ಕೈಯ್ಯಾರೆ ಹಾಳು ಮಾಡಿದ್ದರೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ನೋಟು ರದ್ದತಿ ಮಾಡಿದರು. ಕಪ್ಪು ಹಣ ತರುತ್ತೇವೆ, ಭ್ರಷ್ಟಾಚಾರ ನಿಲ್ಲುಸುತ್ತೇವೆ ಎಂದು ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡಿ ಅಂಬಾನಿ ಮತ್ತು ಅದಾನಿಯವರ ಜೇಬು ತುಂಬಿಸಿದರು ಎಂದು ರಾಹುಲ್‌ ಆರೋಪಿಸಿದ್ದಾರೆ.

ಇನ್ನು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಪದ್ದತಿ ಜಾರಿಗೆ ತಂದು 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ನಿರುದ್ಯೋಗ ದರ ಮಾಡಿದರು. 9%ಇದ್ದ ಜಿಡಿಪಿಯನ್ನು 4%ಗೆ ತಂದು ನಿಲ್ಲಿಸಿದರು. ಭಾರತದ ಆರ್ಥಿಕತೆಯನ್ನು ಮಾಡಿದ್ದು ನಮ್ಮ ಅತ್ಯಂತ ದೊಡ್ಡ ಶತ್ರು ಅಲ್ಲ ಬದಲಿಗೆ ನಮ್ಮ ಪ್ರಧಾನಿಯಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು ಇದರಿಂದ ನಷ್ಟ ಅನುಭವಿಸಿದ್ದಾರೆ ಎಂದರು.

ಒಂದು ಲಕ್ಷಕ್ಕೂ ಹೆಚ್ಚಿನ ಕಾಂಟ್ರಾಕ್ಟ್‌ಅನ್ನು ಅದಾನಿಯೊಬ್ಬರಿಗೆ ಮೋದಿ ನೀಡಿದ್ದಾರೆ. ಏಕೆ? ಇದು ಭ್ರಷ್ಟಾಚಾರವಲ್ಲವೇ? ಒಂದು ಲಕ್ಷದ ನಲವತ್ತು ಲಕ್ಷ ಕೋಟಿ ರೂಪಾಯಿಗಳನ್ನು ಅತೀ ಶ್ರೀಮಂತರ ಸಾಲವನ್ನು ಮನ್ನಾ ಮಾಡಿದ ಸರ್ಕಾರ ಬಡಜನರು ಬಳಸುವ ಫೋನ್‌ ಕರೆಗಳ ದರವನ್ನು 15% ಹೆಚ್ಚಿಸಿದ್ದಾರೆ.

ಭಾರತದ ರೈತರು, ಕಾರ್ಮಿಕರು, ಯುವಜನರ ಜೇಬಿನಲ್ಲಿ ಹಣ ಎಲ್ಲಿಯವರೆಗೂ ಬರುವುದಿಲ್ಲ ಅಲ್ಲಿಯವರೆಗೆ ನಮ್ಮ ಅರ್ಥ ವ್ಯವಸ್ಥೆ ಸುಧಾರಿಸುವುದಿಲ್ಲ. ಮೊದಲು ಬಡವರ, ರೈತರ, ಕಾರ್ಮಿಕರ ಕೈಗೆ ಬರಬೇಕು. ಅವರು ಖರೀದಿಸುತ್ತಾರೆ. ಬೇಡಿಕೆ ಹೆಚ್ಚಾದಂತೆ ಫ್ಯಾಕ್ಟರಿಗಳು ಹೆಚ್ಚು ಉತ್ಪಾದನೆ ಮಾಡಲು ಜನರಿಗೆ ಉದ್ಯೋಗ ನೀಡುತ್ತಾರೆ. ಇದು ಒಂದು ವ್ಯವಸ್ಥೇ ಇದನ್ನು ನರೇಂದ್ರ ಮೋದಿ ಹಾಳು ಮಾಡಿದರು.

ಕಾಂಗ್ರೆಸ್‌ ಆಡಳಿತದ ಪಂಜಾಬ್‌, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಸೇರಿದಂತೆ ಹಲವು ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. ಕೆಲವೆಡೆ ಎಂಎಸ್‌ಪಿ ಕೊಡುತ್ತಿದ್ದೇವೆ. ಮನರೇಗಾ ಯೋಜನೆ ಯಾಕೆ ಜಾರಿಗೆ ತಂದೆವು? ನಮಗೆ ಗೊತ್ತು ರೈತರು ಚೆನ್ನಾಗಿದ್ದರೆ ದೇಶ ಚೆನ್ನಾಗಿರುತ್ತದೆ ಎಂದು ಅವರು ಹೇಳಿದರು.

ಇಡೀ ದೇಶ ನರೇಂದ್ರ ಗಾಂಧಿಯವರನ್ನು ಆಯ್ಕೆ ಮಾಡಿತು. ಏಕೆಂದರೆ ದೇಶಕ್ಕೆ ಒಳ್ಳೆಯದು ಮಾಡಲಿ ಎಂದು. ಆದರೆ ಅವರು ಮಾಡಿದ್ದೇನು? ದೇಶವನ್ನು ಹಳ್ಳ ಹಿಡಿಸಿದರು ಎಂದು ರಾಹುಲ್‌ ಗಾಂಧಿ ಕಿಡಿಕಾರಿದ್ದಾರೆ.

ಭಾರತದ ಟಿವಿಗಳಲ್ಲಿ ಕೇವಲ ನರೇಂದ್ರ ಮೋದಿಯವರು ಮಾತ್ರ ಕಾಣಿಸಿಕೊಳ್ಳುತ್ತಾರೆ. ಎಲ್ಲಾ ಜಾಹೀರಾತುಗಳಲ್ಲಿಯೂ ಅವರೇ ಕಾಣಿಸುತ್ತಾರೆ. ಮನಮೋಹನ್‌ ಸಿಂಗ್‌ ಕಾಣಿಸುವುದಿಲ್ಲ ಅಲ್ಲವೇ? ನರೇಂದ್ರ ಮೊದಿಯವರ ಜಾಹಿರಾತು ಕೊಡಲು ಅವರಿಗೆ ಹಣ ಎಲ್ಲಿಂದ ಬರುತ್ತದೆ? ಅದು ನಮ್ಮೆಲ್ಲರ ತೆರಿಗೆ ಹಣವಲ್ಲವೇ? ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...