Homeಮುಖಪುಟಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ...

ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ ಇಂದು ಪಾಟ್ನಾ ಕೋರ್ಟಿಗೆ ಹಾಜರು.

ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, "ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್" ಎಂದು ರಾಹುಲ್ ಟ್ವೀಟ್ ಮಾಡಿದ್ದರು.

- Advertisement -
- Advertisement -

ಆರ್‌ಎಸ್‌ಎಸ್ / ಬಿಜೆಪಿಯಲ್ಲಿನ ನನ್ನ ರಾಜಕೀಯ ವಿರೋಧಿಗಳು, ನನಗೆ ಕಿರುಕುಳ ಮತ್ತು ಬೆದರಿಕೆ ಒಡ್ಡಲು ನನ್ನ ವಿರುದ್ಧ ಸಲ್ಲಿಸಿದ ಮತ್ತೊಂದು ಪ್ರಕರಣವನ್ನು ಎದುರಿಸಲು ಇಂದು ಮಧ್ಯಾಹ್ನ 2 ಗಂಟೆಗೆ ಪಾಟ್ನಾದ ಸಿವಿಲ್ ಕೋರ್ಟ್‌ ಗೆ ಖುದ್ದಾಗಿ ಹಾಜರಾಗುತ್ತೇನೆ. ಸತ್ಯಮೇವ ಜಯತೆ, ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರು ರಾಹುಲ್ ಗಾಂಧಿಯವರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಪಾಟ್ನಾದ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು “ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮವಿದೆ (ಸರ್ ನೇಮ್)” ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು, ಬ್ಯಾಂಕ್ ವಂಚನೆ ಆರೋಪಿ ನೀರವ್ ಮೋದಿ ಮತ್ತು ಭಾರತೀಯ ಪ್ರೀಮಿಯರ್ ಲೀಗ್ (ಐಪಿಎಲ್) ಮಾಜಿ ಆಯುಕ್ತ ಲಲಿತ್ ಮೋದಿ ಅವರನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿನಿ ಮೋದಿ ಎಂಬ ಸರ್ ನೇಮ್ ಇರುವ ತಮಗೂ ಮಾನ ಹಾನಿಯಾಗಿದೆ ಎಂದು  ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡರು, ಬಿಹಾರದ ಉಪಮುಖ್ಯಮಂತ್ರಿಯಾದ ಸುಶೀಲ್ ಕುಮಾರ್ ಮೋದಿಯವರು ಏಪ್ರಿಲ್‌ನಲ್ಲಿ ಪಾಟ್ನಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.

ತಮ್ಮ ಪಕ್ಷದ ಲೋಕಸಭಾ ಚುನಾವಣಾ ಸೋಲಿನ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಂಡು ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಕೊನೆಯದಾಗಿ ಬಿಹಾರದ ರಾಜಧಾನಿಗೆ ಭೇಟಿ ನೀಡಿದ್ದರು. ಮಾಧ್ಯಮ ವರದಿಯ ಪ್ರಕಾರ, ರಾಜ್ಯವ್ಯಾಪಿ ಮಿದುಳಿನ ಜ್ವರದಿಂದ ತೀವ್ರ ಬಾಧಿತವಾಗಿ 150 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಮುಜಾಫರ್ ಪುರಕ್ಕೆ ರಾಹುಲ್ ಗಾಂಧಿಯವರು ಭೇಟಿ ನೀಡಬಹುದು ಎನ್ನಲಾಗಿದೆ. ಇದು ಪಾಟ್ನಾದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ.

ಆದರೆ, ಬಿಹಾರ ಪ್ರದೇಶದ ಕಾಂಗ್ರೆಸ್ ಸಮಿತಿ (ಬಿಪಿಸಿಸಿ) ಕಾರ್ಯಕಾರಿ ಅಧ್ಯಕ್ಷ ಕೌಕಾಬ್ ಖಾದ್ರಿ ಪಿಟಿಐಗೆ ನೀಡಿದ ಮಾಹಿತಿಯಲ್ಲಿ, “ಮಾಜಿ ಪಕ್ಷದ ಮುಖ್ಯಸ್ಥರ ಭೇಟಿಯ ಸಂಪೂರ್ಣ ವಿವರ ಇನ್ನೂ ಲಭ್ಯವಾಗಿಲ್ಲ” ಎಂದು ಹೇಳಿದ್ದಾರೆ.

ನಿನ್ನೆ ತಾನೇ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್.ಎಸ್.ಎಸ್ ಪಾತ್ರವಿದೆ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಕೋರ್ಟಿಗೆ ರಾಹುಲ್ ಗಾಂಧಿ ಹಾಜರಾಗಿದ್ದರು. ನಂತರ “ಅನ್ಯಾಯ, ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳ ವಿರುದ್ಧದ ನನ್ನ ಹೋರಾಟದಲ್ಲಿ, ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಇಂದು ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...