Homeಮುಖಪುಟಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ...

ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ ಇಂದು ಪಾಟ್ನಾ ಕೋರ್ಟಿಗೆ ಹಾಜರು.

ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, "ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್" ಎಂದು ರಾಹುಲ್ ಟ್ವೀಟ್ ಮಾಡಿದ್ದರು.

- Advertisement -
- Advertisement -

ಆರ್‌ಎಸ್‌ಎಸ್ / ಬಿಜೆಪಿಯಲ್ಲಿನ ನನ್ನ ರಾಜಕೀಯ ವಿರೋಧಿಗಳು, ನನಗೆ ಕಿರುಕುಳ ಮತ್ತು ಬೆದರಿಕೆ ಒಡ್ಡಲು ನನ್ನ ವಿರುದ್ಧ ಸಲ್ಲಿಸಿದ ಮತ್ತೊಂದು ಪ್ರಕರಣವನ್ನು ಎದುರಿಸಲು ಇಂದು ಮಧ್ಯಾಹ್ನ 2 ಗಂಟೆಗೆ ಪಾಟ್ನಾದ ಸಿವಿಲ್ ಕೋರ್ಟ್‌ ಗೆ ಖುದ್ದಾಗಿ ಹಾಜರಾಗುತ್ತೇನೆ. ಸತ್ಯಮೇವ ಜಯತೆ, ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರು ರಾಹುಲ್ ಗಾಂಧಿಯವರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಪಾಟ್ನಾದ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು “ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮವಿದೆ (ಸರ್ ನೇಮ್)” ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು, ಬ್ಯಾಂಕ್ ವಂಚನೆ ಆರೋಪಿ ನೀರವ್ ಮೋದಿ ಮತ್ತು ಭಾರತೀಯ ಪ್ರೀಮಿಯರ್ ಲೀಗ್ (ಐಪಿಎಲ್) ಮಾಜಿ ಆಯುಕ್ತ ಲಲಿತ್ ಮೋದಿ ಅವರನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿನಿ ಮೋದಿ ಎಂಬ ಸರ್ ನೇಮ್ ಇರುವ ತಮಗೂ ಮಾನ ಹಾನಿಯಾಗಿದೆ ಎಂದು  ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡರು, ಬಿಹಾರದ ಉಪಮುಖ್ಯಮಂತ್ರಿಯಾದ ಸುಶೀಲ್ ಕುಮಾರ್ ಮೋದಿಯವರು ಏಪ್ರಿಲ್‌ನಲ್ಲಿ ಪಾಟ್ನಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.

ತಮ್ಮ ಪಕ್ಷದ ಲೋಕಸಭಾ ಚುನಾವಣಾ ಸೋಲಿನ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಂಡು ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಕೊನೆಯದಾಗಿ ಬಿಹಾರದ ರಾಜಧಾನಿಗೆ ಭೇಟಿ ನೀಡಿದ್ದರು. ಮಾಧ್ಯಮ ವರದಿಯ ಪ್ರಕಾರ, ರಾಜ್ಯವ್ಯಾಪಿ ಮಿದುಳಿನ ಜ್ವರದಿಂದ ತೀವ್ರ ಬಾಧಿತವಾಗಿ 150 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಮುಜಾಫರ್ ಪುರಕ್ಕೆ ರಾಹುಲ್ ಗಾಂಧಿಯವರು ಭೇಟಿ ನೀಡಬಹುದು ಎನ್ನಲಾಗಿದೆ. ಇದು ಪಾಟ್ನಾದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ.

ಆದರೆ, ಬಿಹಾರ ಪ್ರದೇಶದ ಕಾಂಗ್ರೆಸ್ ಸಮಿತಿ (ಬಿಪಿಸಿಸಿ) ಕಾರ್ಯಕಾರಿ ಅಧ್ಯಕ್ಷ ಕೌಕಾಬ್ ಖಾದ್ರಿ ಪಿಟಿಐಗೆ ನೀಡಿದ ಮಾಹಿತಿಯಲ್ಲಿ, “ಮಾಜಿ ಪಕ್ಷದ ಮುಖ್ಯಸ್ಥರ ಭೇಟಿಯ ಸಂಪೂರ್ಣ ವಿವರ ಇನ್ನೂ ಲಭ್ಯವಾಗಿಲ್ಲ” ಎಂದು ಹೇಳಿದ್ದಾರೆ.

ನಿನ್ನೆ ತಾನೇ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್.ಎಸ್.ಎಸ್ ಪಾತ್ರವಿದೆ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಕೋರ್ಟಿಗೆ ರಾಹುಲ್ ಗಾಂಧಿ ಹಾಜರಾಗಿದ್ದರು. ನಂತರ “ಅನ್ಯಾಯ, ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳ ವಿರುದ್ಧದ ನನ್ನ ಹೋರಾಟದಲ್ಲಿ, ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಇಂದು ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...