Homeಮುಖಪುಟಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ...

ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ (ಸರ್ ನೇಮ್) ಇದೆ ಎಂದ ರಾಹುಲ್ ಹೇಳಿಕೆಯ ಪರಿಣಾಮ ಇಂದು ಪಾಟ್ನಾ ಕೋರ್ಟಿಗೆ ಹಾಜರು.

ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, "ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್" ಎಂದು ರಾಹುಲ್ ಟ್ವೀಟ್ ಮಾಡಿದ್ದರು.

- Advertisement -
- Advertisement -

ಆರ್‌ಎಸ್‌ಎಸ್ / ಬಿಜೆಪಿಯಲ್ಲಿನ ನನ್ನ ರಾಜಕೀಯ ವಿರೋಧಿಗಳು, ನನಗೆ ಕಿರುಕುಳ ಮತ್ತು ಬೆದರಿಕೆ ಒಡ್ಡಲು ನನ್ನ ವಿರುದ್ಧ ಸಲ್ಲಿಸಿದ ಮತ್ತೊಂದು ಪ್ರಕರಣವನ್ನು ಎದುರಿಸಲು ಇಂದು ಮಧ್ಯಾಹ್ನ 2 ಗಂಟೆಗೆ ಪಾಟ್ನಾದ ಸಿವಿಲ್ ಕೋರ್ಟ್‌ ಗೆ ಖುದ್ದಾಗಿ ಹಾಜರಾಗುತ್ತೇನೆ. ಸತ್ಯಮೇವ ಜಯತೆ, ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಯವರು ರಾಹುಲ್ ಗಾಂಧಿಯವರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಪಾಟ್ನಾದ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು “ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮವಿದೆ (ಸರ್ ನೇಮ್)” ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು, ಬ್ಯಾಂಕ್ ವಂಚನೆ ಆರೋಪಿ ನೀರವ್ ಮೋದಿ ಮತ್ತು ಭಾರತೀಯ ಪ್ರೀಮಿಯರ್ ಲೀಗ್ (ಐಪಿಎಲ್) ಮಾಜಿ ಆಯುಕ್ತ ಲಲಿತ್ ಮೋದಿ ಅವರನ್ನು ಉಲ್ಲೇಖಿಸಿ ವ್ಯಂಗ್ಯವಾಡಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿನಿ ಮೋದಿ ಎಂಬ ಸರ್ ನೇಮ್ ಇರುವ ತಮಗೂ ಮಾನ ಹಾನಿಯಾಗಿದೆ ಎಂದು  ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ಮುಖಂಡರು, ಬಿಹಾರದ ಉಪಮುಖ್ಯಮಂತ್ರಿಯಾದ ಸುಶೀಲ್ ಕುಮಾರ್ ಮೋದಿಯವರು ಏಪ್ರಿಲ್‌ನಲ್ಲಿ ಪಾಟ್ನಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯಕ್ಕೆ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆಗೆ ಇಂದು ರಾಹುಲ್ ಗಾಂಧಿ ಹಾಜರಾಗಲಿದ್ದಾರೆ.

ತಮ್ಮ ಪಕ್ಷದ ಲೋಕಸಭಾ ಚುನಾವಣಾ ಸೋಲಿನ ನೈತಿಕ ಹೊಣೆಗಾರಿಕೆಯನ್ನು ವಹಿಸಿಕೊಂಡು ಈ ವಾರದ ಆರಂಭದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿ ಅವರು ಮೇ ತಿಂಗಳಲ್ಲಿ ಕೊನೆಯದಾಗಿ ಬಿಹಾರದ ರಾಜಧಾನಿಗೆ ಭೇಟಿ ನೀಡಿದ್ದರು. ಮಾಧ್ಯಮ ವರದಿಯ ಪ್ರಕಾರ, ರಾಜ್ಯವ್ಯಾಪಿ ಮಿದುಳಿನ ಜ್ವರದಿಂದ ತೀವ್ರ ಬಾಧಿತವಾಗಿ 150 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಮುಜಾಫರ್ ಪುರಕ್ಕೆ ರಾಹುಲ್ ಗಾಂಧಿಯವರು ಭೇಟಿ ನೀಡಬಹುದು ಎನ್ನಲಾಗಿದೆ. ಇದು ಪಾಟ್ನಾದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ.

ಆದರೆ, ಬಿಹಾರ ಪ್ರದೇಶದ ಕಾಂಗ್ರೆಸ್ ಸಮಿತಿ (ಬಿಪಿಸಿಸಿ) ಕಾರ್ಯಕಾರಿ ಅಧ್ಯಕ್ಷ ಕೌಕಾಬ್ ಖಾದ್ರಿ ಪಿಟಿಐಗೆ ನೀಡಿದ ಮಾಹಿತಿಯಲ್ಲಿ, “ಮಾಜಿ ಪಕ್ಷದ ಮುಖ್ಯಸ್ಥರ ಭೇಟಿಯ ಸಂಪೂರ್ಣ ವಿವರ ಇನ್ನೂ ಲಭ್ಯವಾಗಿಲ್ಲ” ಎಂದು ಹೇಳಿದ್ದಾರೆ.

ನಿನ್ನೆ ತಾನೇ ಗೌರಿ ಲಂಕೇಶ್ ಹತ್ಯೆಯಲ್ಲಿ ಆರ್.ಎಸ್.ಎಸ್ ಪಾತ್ರವಿದೆ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಮುಂಬೈ ಕೋರ್ಟಿಗೆ ರಾಹುಲ್ ಗಾಂಧಿ ಹಾಜರಾಗಿದ್ದರು. ನಂತರ “ಅನ್ಯಾಯ, ದ್ವೇಷ ಮತ್ತು ಹಿಂಸಾಚಾರದ ಶಕ್ತಿಗಳ ವಿರುದ್ಧದ ನನ್ನ ಹೋರಾಟದಲ್ಲಿ, ನನ್ನನ್ನು ಬೆಂಬಲಿಸಲು ಮುಂಬೈನಲ್ಲಿ ಇಂದು ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಹೊರಬಂದ ಎಲ್ಲರಿಗೂ ಧನ್ಯವಾದಗಳು, ನಿಮ್ಮ ಪ್ರೀತಿ ಮತ್ತು ಬೆಂಬಲ ನನ್ನ ದೊಡ್ಡ ಶಕ್ತಿ, ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...