Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...