Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...