Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...