Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...