Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...