Homeಮುಖಪುಟಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

ಸ್ಟಾಲಿನ್‌ಗಾಗಿ ಸಿಹಿ ಖರೀದಿಸಿದ ರಾಹುಲ್ ಗಾಂಧಿ; ಸಂತಸ ವ್ಯಕ್ತಪಡಿಸಿದ ತಮಿಳುನಾಡು ಸಿಎಂ

- Advertisement -
- Advertisement -

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ರಾತ್ರಿ ತಮಿಳುನಾಡಿನ ಸಿಂಗಾನಲ್ಲೂರಿನ ಅಂಗಡಿಯೊಂದರಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಸಿಹಿ ಖಾದ್ಯ ‘ಮೈಸೂರು ಪಾಕ್’ ಅನ್ನು ಖರೀದಿಸಿ, ಅದನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ನೀಡಿದರು.

ರಾಹುಲ್ ಗಾಂಧಿ ಬರಸ್ತೆ ಡಿವೈಡರ್ ದಾಟಿ, ಅಂಗಡಿಯಿಂದ ಮೈಸೂರು ಪಾಕ್ ಖರೀದಿಸಿರುವ ವಿಡಯೋವನ್ನು ಕಾಂಗ್ರೆಸ್ ಹಂಚಿಕೊಂಡಿದ್ದು, ಅವರು ಸಿಹಿತಿಂಡಿಗಳ ಅಂಗಡಿಗೆ ಕಾಲಿಡುತ್ತಿರುವುದನ್ನು ಮತ್ತು ಪಕ್ಷದ ಇತರ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ತಿನ್ನುತ್ತಿರುವುದನ್ನು ಕಾಣಬಹುದು. ಅವರು ಸಿಹಿ ಅಂಗಡಿಯ ಮಹಿಳಾ ಸಿಬ್ಬಂದಿಯೊಂದಿಗೆ ಹಸ್ತಲಾಘವ, ಸಂವಾದ ಮತ್ತು ಛಾಯಾಚಿತ್ರಗಳಿಗೆ ಪೋಸ್ ನೀಡುವುದನ್ನು ಸಹ ವಿಡಿಯೋದಲ್ಲಿ ಕಾಣಬಹುದು.

ವೀಡಿಯೊದ ಕೊನೆಯಲ್ಲಿ, ಗಾಂಧಿಯವರು ಕೊಯಮತ್ತೂರಿನಲ್ಲಿ ಎಂಕೆ ಸ್ಟಾಲಿನ್ ಅವರನ್ನು ಭೇಟಿಯಾಗಿ ಸಿಹಿತಿಂಡಿಗಳನ್ನು ನೀಡಿದ್ದಾರೆ. ಗಾಂಧಿಯವರು ಡಿಎಂಕೆ ನಾಯಕನನ್ನು ತಮ್ಮ “ಸಹೋದರ” ಎಂದು ಸಂಬೋಧಿಸಿದ್ದರಿಂದ ಉಭಯ ನಾಯಕರ ನಡುವಿನ ಬಾಂಧವ್ಯ ಮತ್ತಷ್ಟು ಸ್ಪಷ್ಟವಾಯಿತು.

“ತಮಿಳುನಾಡಿನ ಪ್ರಚಾರದ ಹಾದಿಗೆ ಸಿಹಿಯ ಸ್ಪರ್ಶವನ್ನು ಸೇರಿಸುವುದು, ನನ್ನ ಸಹೋದರ ತಿರು ಸ್ಟಾಲಿನ್‌ಗಾಗಿ ಸ್ವಲ್ಪ ಮೈಸೂರು ಪಾಕ್ ಖರೀದಿಸಿದೆ” ಎಂದು ರಾಹುಲ್ ಗಾಂಧಿ ವೀಡಿಯೋ ಶೇರ್ ಮಾಡಿದ್ದಾರೆ.

ರಾಹುಲ್ ಗಾಂದಿಗೆ ಪ್ರತಿಕ್ರಿಯಿಸಿದ ಸ್ಟಾಲಿನ್, ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು  ‘ಗೆಲುವಿನ ಸಿಹಿ” ನೀಡಲಿದೆ ಎಂದು ಶನಿವಾರ ಹೇಳಿದ್ದಾರೆ.

ಇದೇ ವೇಳೆ, ಕಾಂಗ್ರೆಸ್ ಮುಖಂಡರ ದಿಢೀರ್ ಭೇಟಿಯಿಂದ ಆಶ್ಚರ್ಯವಾಯಿತು ಎಂದು ಅಂಗಡಿ ಮಾಲೀಕ ಬಾಬು ಹೇಳಿದ್ದಾರೆ.

“ಬಹುಶಃ ಅವರು ಕೊಯಮತ್ತೂರು ಸಭೆಗೆ ಭೇಟಿ ನೀಡುತ್ತಿದ್ದರು, ಆಗ ಅವರು ಮೈಸೂರು ಪಾಕ್ ಖರೀದಿಸಿದರು. ಅವರು ಪ್ರದರ್ಶನಕ್ಕೆ ಇಟ್ಟಿದ್ದ ಇತರ ಸಿಹಿತಿಂಡಿಗಳನ್ನು ಸಹ ರುಚಿ ನೋಡಿದರು. ಅವರು ಅಂಗಡಿಗೆ ಬಂದಿದ್ದಕ್ಕೆ ನನಗೆ ಸಂತೋಷವಾಯಿತು. ನಮ್ಮ ಸಿಬ್ಬಂದಿಯೂ ಅವನನ್ನು ನೋಡಿ ಸಂತೋಷಪಟ್ಟರು. ಅವರು 25-30 ನಿಮಿಷಗಳ ಕಾಲ ಇಲ್ಲಿದ್ದರು. ಅವರು ಇಲ್ಲಿ ವಾಹನ ನಿಲ್ಲಿಸುತ್ತಾರೆ ಎಂದು ನಮಗೆ ಯಾವುದೇ ಸುಳಿವು ಇರಲಿಲ್ಲ ಮತ್ತು ಎಲ್ಲರೂ ಆಶ್ಚರ್ಯಚಕಿತರಾದರು. ನಾವು ಹಣ ನೀಡಬೇಡಿ ಎಂದು ಕೇಳಿದೆವು. ಆದರೆ, ಅವರು ಒತ್ತಾಯಿಸಿ ಕೊಟ್ಟರು; ಸಂಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ’ ಎಂದು ಮಾಲೀಖರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ರಾಹುಲ್ ಗಾಂಧಿ ಶುಕ್ರವಾರ ತಮಿಳುನಾಡಿನಲ್ಲಿ ಚುನಾವಣಾ ರ್ಯಾಲಿಗಳೊಂದಿಗೆ ತಮ್ಮ ಮೊದಲ ಪ್ರಚಾರವನ್ನು ಪ್ರಾರಂಭಿಸಿದರು. ರಾಜ್ಯದ 39 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. 2019 ರ ಲೋಕಸಭೆ ಚುನಾವಣೆಯಲ್ಲಿ, ಕಾಂಗ್ರೆಸ್-ಡಿಎಂಕೆ ನೇತೃತ್ವದ ಮೈತ್ರಿ ರಾಜ್ಯದ 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆದ್ದರೆ, ಎಐಎಡಿಎಂಕೆ ಕೇವಲ ಏಕೈಕ ಸ್ಥಾನವನ್ನು ಮಾತ್ರ ಗೆಲ್ಲುಲು ಸಾಧ್ಯವಾಯಿತು.

ಇಂಡಿಯಾ ಗೆಲುವು ಸಿಹಿ ನೀಡಲಿದೆ: ಸಿಎಂ ಸ್ಟಾಲಿನ್

ರಾಹುಲ್ ಗಾಂಧಿ ಸಿಹಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್, ‘ಜೂನ್ 4 ರಂದು ಇಂಡಿಯಾ ಮೈತ್ರಿಕೂಟವು ಗೆಲುವಿನ ಸಿಹಿ ನೀಡಲಿದೆ’ ಎಂದು ಹೇಳಿದ್ದಾರೆ.

ಶುಕ್ರವಾರ ರಾಜ್ಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ಮೈಸೂರು ಪಾಕ್ ಸ್ವೀಕರಿಸಿದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ ಸ್ಟಾಲಿನ್, ‘ನನ್ನ ಸಹೋದರನ ಸಿಹಿ ಸನ್ನೆ ನನ್ನನ್ನು ಸ್ಪರ್ಶಿಸಿದೆ’ ಎಂದು ಹೇಳಿದರು.

ಇದನ್ನೂ ಓದಿ; ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...