Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

- Advertisement -
- Advertisement -

ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಕ್ರಾಂತಿಕಾರಿ ಪ್ರಣಾಳಿಕೆಯನ್ನು ಓದಿದ ನಂತರ ಅವರು ಭಯಗೊಂಡಿದ್ದಾರೆ. ಬಿಜೆಪಿಯು 22-25 ದೊಡ್ಡ ಉದ್ಯಮಿಗಳಿಗೆ ಮಾಡಿದ ಸಾಲ ಮನ್ನಾದ 16 ಲಕ್ಷ ಕೋಟಿಯನ್ನು ಮರಳಿ ಪಡೆದು ಅದರ ಸಣ್ಣ ಭಾಗವನ್ನು 90ಶೇ.ಜನರಿಗೆ ಪರಿಹಾರ ನೀಡುವ ಗುರಿಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅನ್ಯಾಯ ಎದುರಿಸುತ್ತಿರುವ ದೇಶದ ಶೇ 90ರಷ್ಟು ಜನರಿಗೆ ನ್ಯಾಯ ದೊರಕಿಸುವುದು ನನ್ನ ಜೀವನದ ಉದ್ದೇಶ. ಜಾತಿ ಗಣತಿ ನನಗೆ ರಾಜಕೀಯವಲ್ಲ, ಅದು ನನ್ನ ಜೀವನದ ಧ್ಯೇಯವಾಗಿದೆ. ಜಾತಿ ಗಣತಿಯನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಆಯ್ಕೆಯಾದಾಗ ನಾವು ತೆಗೆದುಕೊಳ್ಳುವ ಮೊದಲ ಕೆಲಸವೆಂದರೆ ಜನಗಣತಿ. ಇದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಇನ್ನೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುವುದನ್ನು ಮೊದಲು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ. ಜಾತಿ ಗಣತಿಯು ಕೇವಲ ಜಾತಿ ಸಮೀಕ್ಷೆಯಾಗಿರದೆ “ಆರ್ಥಿಕ” ಮತ್ತು “ಸಾಂಸ್ಥಿಕ” ಅಂಶಗಳನ್ನು ಹೊಂದಿರುತ್ತದೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಇತಿಹಾಸವನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ನನಗೆ ಜಾತಿಯಲ್ಲಿ ಆಸಕ್ತಿ ಇಲ್ಲ ಆದರೆ ನ್ಯಾಯದಲ್ಲಿ ಆಸಕ್ತಿ ಇದೆ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ತಾನು ಒಬಿಸಿ ಎಂದು ಹೇಳುತ್ತಿದ್ದಾರೆ ಆದರೆ ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಜಾತಿ ಇಲ್ಲ ಎಂದು ಮೋದಿ ಹೇಳಿದರು. ಜಾತಿ ಇಲ್ಲದಿದ್ದರೆ ನೀವು ಒಬಿಸಿ ಆಗೋದು ಹೇಗೆ? ಭಾರತದಲ್ಲಿ ಬಡವರು ಮತ್ತು ಶ್ರೀಮಂತರು ಎಂಬ ಎರಡು ಜಾತಿಗಳು ಮಾತ್ರ ಇದೆ ಎಂದು ಮೋದಿ ಹೇಳುತ್ತಾರೆ. ಅಗಿದ್ದರೆ ಬಡವರು ಮತ್ತು ಶ್ರೀಮಂತರ ಪಟ್ಟಿಯನ್ನು ಹೊರತನ್ನಿ. ಒಬಿಸಿಗಳು, ದಲಿತರು, ಆದಿವಾಸಿಗಳನ್ನು ಬಡವರ ಪಟ್ಟಿಯಲ್ಲಿ ಕಾಣಬಹುದು ಆದರೆ ಅವರು ಶ್ರೀಮಂತರ ಪಟ್ಟಿಯಲ್ಲಿ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ರಾಮಮಂದಿರ ಮತ್ತು ಸಂಸತ್ತಿನ ಕಟ್ಟಡ ಉದ್ಘಾಟನೆಯಲ್ಲಿ ಒಬ್ಬ ದಲಿತ, ಬುಡಕಟ್ಟು ಜನಾಂಗದವರು ಕೂಡ ಕಾಣಿಸಿಕೊಂಡಿಲ್ಲ, 90% ಜನಸಂಖ್ಯೆಯು ಇದನ್ನು ಅರ್ಥಮಾಡಿಕೊಂಡಿದೆ. ಜನವರಿ 22ರಂದು ನಡೆದ ರಾಮಮಂದಿರ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ವಿರುದ್ಧ ಅವರು ಟೀಕಿಸಿದ್ದಾರೆ.

ಮಾಧ್ಯಮಗಳು ನನ್ನನ್ನು ಗಾಂಭೀರ್ಯವಿಲ್ಲದ ರಾಜಕಾರಣಿ ಎಂದು ಬಿಂಬಿಸಿತು. MGNREGA, ಭೂಸ್ವಾಧೀನ ಮಸೂದೆ ವಿರುದ್ಧದ ಹೋರಾಟ ಗಂಭೀರವಲ್ಲದ ವಿಷಯಗಳಾಗಿ ತೋರಿಸಲಾಗಿದೆ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿಯನ್ನು ಮಾಧ್ಯಮಗಳು ಗಂಭೀರವಾಗಿ ತೋರಿಸಿವೆ. ನಾನು ಮಾಧ್ಯಮಗಳ ಹೂಡಿಕೆದಾರರನ್ನು ಪರಿಶೀಲಿಸಿದೆ. ಒಬಿಸಿ, ದಲಿತ, ಬುಡಕಟ್ಟು ಸಮುದಾಯದ ಒಬ್ಬ ದೊಡ್ಡ ಆ್ಯಂಕರ್ ಇಲ್ಲ. ಹಾಗಾಗಿ ನಿಮ್ಮ ಧ್ವನಿ ಇಲ್ಲ. ಮಾಧ್ಯಮಗಳಲ್ಲಿ ಇವರಿಗೆ ಪ್ರಾತಿನಿಧ್ಯವಿಲ್ಲ. ಯಾರ ಹಣ ಮಾಧ್ಯಮಕ್ಕೆ ಹೋಗುತ್ತದೆ? ಸರಕಾರಗಳು ಹಣ ನೀಡುತ್ತವೆ. ಜಿಎಸ್‌ಟಿಯಲ್ಲಿ ಯಾರ ಹಣ ಬರುತ್ತದೆ? ಇದು ಶೇ. 90ರಷ್ಟು ಜನರ ಹಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

0
2008ರ ಮುಂಬೈ ಭಯೋತ್ಪಾದಕ ದಾಳಿಯ ಸಮಯದಲ್ಲಿ ರಾಜ್ಯ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್) ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಅವರನ್ನು ಹತ್ಯೆಗೈದಿದ್ದು ಭಯೋತ್ಪಾದಕ ಅಜ್ಮಲ್ ಅಮೀರ್ ಕಸಬ್ ಅಲ್ಲ, ಆರೆಸ್ಸೆಸ್‌ ಜೊತೆ ನಂಟು ಹೊಂದಿದ್ದ...