Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

- Advertisement -
- Advertisement -

ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಕ್ರಾಂತಿಕಾರಿ ಪ್ರಣಾಳಿಕೆಯನ್ನು ಓದಿದ ನಂತರ ಅವರು ಭಯಗೊಂಡಿದ್ದಾರೆ. ಬಿಜೆಪಿಯು 22-25 ದೊಡ್ಡ ಉದ್ಯಮಿಗಳಿಗೆ ಮಾಡಿದ ಸಾಲ ಮನ್ನಾದ 16 ಲಕ್ಷ ಕೋಟಿಯನ್ನು ಮರಳಿ ಪಡೆದು ಅದರ ಸಣ್ಣ ಭಾಗವನ್ನು 90ಶೇ.ಜನರಿಗೆ ಪರಿಹಾರ ನೀಡುವ ಗುರಿಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅನ್ಯಾಯ ಎದುರಿಸುತ್ತಿರುವ ದೇಶದ ಶೇ 90ರಷ್ಟು ಜನರಿಗೆ ನ್ಯಾಯ ದೊರಕಿಸುವುದು ನನ್ನ ಜೀವನದ ಉದ್ದೇಶ. ಜಾತಿ ಗಣತಿ ನನಗೆ ರಾಜಕೀಯವಲ್ಲ, ಅದು ನನ್ನ ಜೀವನದ ಧ್ಯೇಯವಾಗಿದೆ. ಜಾತಿ ಗಣತಿಯನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಆಯ್ಕೆಯಾದಾಗ ನಾವು ತೆಗೆದುಕೊಳ್ಳುವ ಮೊದಲ ಕೆಲಸವೆಂದರೆ ಜನಗಣತಿ. ಇದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಇನ್ನೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುವುದನ್ನು ಮೊದಲು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ. ಜಾತಿ ಗಣತಿಯು ಕೇವಲ ಜಾತಿ ಸಮೀಕ್ಷೆಯಾಗಿರದೆ “ಆರ್ಥಿಕ” ಮತ್ತು “ಸಾಂಸ್ಥಿಕ” ಅಂಶಗಳನ್ನು ಹೊಂದಿರುತ್ತದೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಇತಿಹಾಸವನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ನನಗೆ ಜಾತಿಯಲ್ಲಿ ಆಸಕ್ತಿ ಇಲ್ಲ ಆದರೆ ನ್ಯಾಯದಲ್ಲಿ ಆಸಕ್ತಿ ಇದೆ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ತಾನು ಒಬಿಸಿ ಎಂದು ಹೇಳುತ್ತಿದ್ದಾರೆ ಆದರೆ ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಜಾತಿ ಇಲ್ಲ ಎಂದು ಮೋದಿ ಹೇಳಿದರು. ಜಾತಿ ಇಲ್ಲದಿದ್ದರೆ ನೀವು ಒಬಿಸಿ ಆಗೋದು ಹೇಗೆ? ಭಾರತದಲ್ಲಿ ಬಡವರು ಮತ್ತು ಶ್ರೀಮಂತರು ಎಂಬ ಎರಡು ಜಾತಿಗಳು ಮಾತ್ರ ಇದೆ ಎಂದು ಮೋದಿ ಹೇಳುತ್ತಾರೆ. ಅಗಿದ್ದರೆ ಬಡವರು ಮತ್ತು ಶ್ರೀಮಂತರ ಪಟ್ಟಿಯನ್ನು ಹೊರತನ್ನಿ. ಒಬಿಸಿಗಳು, ದಲಿತರು, ಆದಿವಾಸಿಗಳನ್ನು ಬಡವರ ಪಟ್ಟಿಯಲ್ಲಿ ಕಾಣಬಹುದು ಆದರೆ ಅವರು ಶ್ರೀಮಂತರ ಪಟ್ಟಿಯಲ್ಲಿ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ರಾಮಮಂದಿರ ಮತ್ತು ಸಂಸತ್ತಿನ ಕಟ್ಟಡ ಉದ್ಘಾಟನೆಯಲ್ಲಿ ಒಬ್ಬ ದಲಿತ, ಬುಡಕಟ್ಟು ಜನಾಂಗದವರು ಕೂಡ ಕಾಣಿಸಿಕೊಂಡಿಲ್ಲ, 90% ಜನಸಂಖ್ಯೆಯು ಇದನ್ನು ಅರ್ಥಮಾಡಿಕೊಂಡಿದೆ. ಜನವರಿ 22ರಂದು ನಡೆದ ರಾಮಮಂದಿರ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ವಿರುದ್ಧ ಅವರು ಟೀಕಿಸಿದ್ದಾರೆ.

ಮಾಧ್ಯಮಗಳು ನನ್ನನ್ನು ಗಾಂಭೀರ್ಯವಿಲ್ಲದ ರಾಜಕಾರಣಿ ಎಂದು ಬಿಂಬಿಸಿತು. MGNREGA, ಭೂಸ್ವಾಧೀನ ಮಸೂದೆ ವಿರುದ್ಧದ ಹೋರಾಟ ಗಂಭೀರವಲ್ಲದ ವಿಷಯಗಳಾಗಿ ತೋರಿಸಲಾಗಿದೆ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿಯನ್ನು ಮಾಧ್ಯಮಗಳು ಗಂಭೀರವಾಗಿ ತೋರಿಸಿವೆ. ನಾನು ಮಾಧ್ಯಮಗಳ ಹೂಡಿಕೆದಾರರನ್ನು ಪರಿಶೀಲಿಸಿದೆ. ಒಬಿಸಿ, ದಲಿತ, ಬುಡಕಟ್ಟು ಸಮುದಾಯದ ಒಬ್ಬ ದೊಡ್ಡ ಆ್ಯಂಕರ್ ಇಲ್ಲ. ಹಾಗಾಗಿ ನಿಮ್ಮ ಧ್ವನಿ ಇಲ್ಲ. ಮಾಧ್ಯಮಗಳಲ್ಲಿ ಇವರಿಗೆ ಪ್ರಾತಿನಿಧ್ಯವಿಲ್ಲ. ಯಾರ ಹಣ ಮಾಧ್ಯಮಕ್ಕೆ ಹೋಗುತ್ತದೆ? ಸರಕಾರಗಳು ಹಣ ನೀಡುತ್ತವೆ. ಜಿಎಸ್‌ಟಿಯಲ್ಲಿ ಯಾರ ಹಣ ಬರುತ್ತದೆ? ಇದು ಶೇ. 90ರಷ್ಟು ಜನರ ಹಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...