Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

- Advertisement -
- Advertisement -

ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಕ್ರಾಂತಿಕಾರಿ ಪ್ರಣಾಳಿಕೆಯನ್ನು ಓದಿದ ನಂತರ ಅವರು ಭಯಗೊಂಡಿದ್ದಾರೆ. ಬಿಜೆಪಿಯು 22-25 ದೊಡ್ಡ ಉದ್ಯಮಿಗಳಿಗೆ ಮಾಡಿದ ಸಾಲ ಮನ್ನಾದ 16 ಲಕ್ಷ ಕೋಟಿಯನ್ನು ಮರಳಿ ಪಡೆದು ಅದರ ಸಣ್ಣ ಭಾಗವನ್ನು 90ಶೇ.ಜನರಿಗೆ ಪರಿಹಾರ ನೀಡುವ ಗುರಿಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅನ್ಯಾಯ ಎದುರಿಸುತ್ತಿರುವ ದೇಶದ ಶೇ 90ರಷ್ಟು ಜನರಿಗೆ ನ್ಯಾಯ ದೊರಕಿಸುವುದು ನನ್ನ ಜೀವನದ ಉದ್ದೇಶ. ಜಾತಿ ಗಣತಿ ನನಗೆ ರಾಜಕೀಯವಲ್ಲ, ಅದು ನನ್ನ ಜೀವನದ ಧ್ಯೇಯವಾಗಿದೆ. ಜಾತಿ ಗಣತಿಯನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಆಯ್ಕೆಯಾದಾಗ ನಾವು ತೆಗೆದುಕೊಳ್ಳುವ ಮೊದಲ ಕೆಲಸವೆಂದರೆ ಜನಗಣತಿ. ಇದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಇನ್ನೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುವುದನ್ನು ಮೊದಲು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ. ಜಾತಿ ಗಣತಿಯು ಕೇವಲ ಜಾತಿ ಸಮೀಕ್ಷೆಯಾಗಿರದೆ “ಆರ್ಥಿಕ” ಮತ್ತು “ಸಾಂಸ್ಥಿಕ” ಅಂಶಗಳನ್ನು ಹೊಂದಿರುತ್ತದೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಇತಿಹಾಸವನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ನನಗೆ ಜಾತಿಯಲ್ಲಿ ಆಸಕ್ತಿ ಇಲ್ಲ ಆದರೆ ನ್ಯಾಯದಲ್ಲಿ ಆಸಕ್ತಿ ಇದೆ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ತಾನು ಒಬಿಸಿ ಎಂದು ಹೇಳುತ್ತಿದ್ದಾರೆ ಆದರೆ ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಜಾತಿ ಇಲ್ಲ ಎಂದು ಮೋದಿ ಹೇಳಿದರು. ಜಾತಿ ಇಲ್ಲದಿದ್ದರೆ ನೀವು ಒಬಿಸಿ ಆಗೋದು ಹೇಗೆ? ಭಾರತದಲ್ಲಿ ಬಡವರು ಮತ್ತು ಶ್ರೀಮಂತರು ಎಂಬ ಎರಡು ಜಾತಿಗಳು ಮಾತ್ರ ಇದೆ ಎಂದು ಮೋದಿ ಹೇಳುತ್ತಾರೆ. ಅಗಿದ್ದರೆ ಬಡವರು ಮತ್ತು ಶ್ರೀಮಂತರ ಪಟ್ಟಿಯನ್ನು ಹೊರತನ್ನಿ. ಒಬಿಸಿಗಳು, ದಲಿತರು, ಆದಿವಾಸಿಗಳನ್ನು ಬಡವರ ಪಟ್ಟಿಯಲ್ಲಿ ಕಾಣಬಹುದು ಆದರೆ ಅವರು ಶ್ರೀಮಂತರ ಪಟ್ಟಿಯಲ್ಲಿ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ರಾಮಮಂದಿರ ಮತ್ತು ಸಂಸತ್ತಿನ ಕಟ್ಟಡ ಉದ್ಘಾಟನೆಯಲ್ಲಿ ಒಬ್ಬ ದಲಿತ, ಬುಡಕಟ್ಟು ಜನಾಂಗದವರು ಕೂಡ ಕಾಣಿಸಿಕೊಂಡಿಲ್ಲ, 90% ಜನಸಂಖ್ಯೆಯು ಇದನ್ನು ಅರ್ಥಮಾಡಿಕೊಂಡಿದೆ. ಜನವರಿ 22ರಂದು ನಡೆದ ರಾಮಮಂದಿರ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ವಿರುದ್ಧ ಅವರು ಟೀಕಿಸಿದ್ದಾರೆ.

ಮಾಧ್ಯಮಗಳು ನನ್ನನ್ನು ಗಾಂಭೀರ್ಯವಿಲ್ಲದ ರಾಜಕಾರಣಿ ಎಂದು ಬಿಂಬಿಸಿತು. MGNREGA, ಭೂಸ್ವಾಧೀನ ಮಸೂದೆ ವಿರುದ್ಧದ ಹೋರಾಟ ಗಂಭೀರವಲ್ಲದ ವಿಷಯಗಳಾಗಿ ತೋರಿಸಲಾಗಿದೆ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿಯನ್ನು ಮಾಧ್ಯಮಗಳು ಗಂಭೀರವಾಗಿ ತೋರಿಸಿವೆ. ನಾನು ಮಾಧ್ಯಮಗಳ ಹೂಡಿಕೆದಾರರನ್ನು ಪರಿಶೀಲಿಸಿದೆ. ಒಬಿಸಿ, ದಲಿತ, ಬುಡಕಟ್ಟು ಸಮುದಾಯದ ಒಬ್ಬ ದೊಡ್ಡ ಆ್ಯಂಕರ್ ಇಲ್ಲ. ಹಾಗಾಗಿ ನಿಮ್ಮ ಧ್ವನಿ ಇಲ್ಲ. ಮಾಧ್ಯಮಗಳಲ್ಲಿ ಇವರಿಗೆ ಪ್ರಾತಿನಿಧ್ಯವಿಲ್ಲ. ಯಾರ ಹಣ ಮಾಧ್ಯಮಕ್ಕೆ ಹೋಗುತ್ತದೆ? ಸರಕಾರಗಳು ಹಣ ನೀಡುತ್ತವೆ. ಜಿಎಸ್‌ಟಿಯಲ್ಲಿ ಯಾರ ಹಣ ಬರುತ್ತದೆ? ಇದು ಶೇ. 90ರಷ್ಟು ಜನರ ಹಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...