Homeಮುಖಪುಟಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

- Advertisement -
- Advertisement -

ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್‌ ಗಾಂಧಿ, ಕಾಂಗ್ರೆಸ್‌ನ ಕ್ರಾಂತಿಕಾರಿ ಪ್ರಣಾಳಿಕೆಯನ್ನು ಓದಿದ ನಂತರ ಅವರು ಭಯಗೊಂಡಿದ್ದಾರೆ. ಬಿಜೆಪಿಯು 22-25 ದೊಡ್ಡ ಉದ್ಯಮಿಗಳಿಗೆ ಮಾಡಿದ ಸಾಲ ಮನ್ನಾದ 16 ಲಕ್ಷ ಕೋಟಿಯನ್ನು ಮರಳಿ ಪಡೆದು ಅದರ ಸಣ್ಣ ಭಾಗವನ್ನು 90ಶೇ.ಜನರಿಗೆ ಪರಿಹಾರ ನೀಡುವ ಗುರಿಯನ್ನು ಕಾಂಗ್ರೆಸ್‌ ಪಕ್ಷ ಹೊಂದಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಸಾಮಾಜಿಕ ನ್ಯಾಯ ಸಮ್ಮೇಳನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಅನ್ಯಾಯ ಎದುರಿಸುತ್ತಿರುವ ದೇಶದ ಶೇ 90ರಷ್ಟು ಜನರಿಗೆ ನ್ಯಾಯ ದೊರಕಿಸುವುದು ನನ್ನ ಜೀವನದ ಉದ್ದೇಶ. ಜಾತಿ ಗಣತಿ ನನಗೆ ರಾಜಕೀಯವಲ್ಲ, ಅದು ನನ್ನ ಜೀವನದ ಧ್ಯೇಯವಾಗಿದೆ. ಜಾತಿ ಗಣತಿಯನ್ನು ತಡೆಯಲು ಜಗತ್ತಿನ ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಆಯ್ಕೆಯಾದಾಗ ನಾವು ತೆಗೆದುಕೊಳ್ಳುವ ಮೊದಲ ಕೆಲಸವೆಂದರೆ ಜನಗಣತಿ. ಇದು ನನ್ನ ಗ್ಯಾರಂಟಿ ಎಂದು ಹೇಳಿದ್ದಾರೆ.

ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ನಾವು ಇನ್ನೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿಲ್ಲ, ಎಷ್ಟು ಅನ್ಯಾಯವಾಗಿದೆ ಎಂಬುವುದನ್ನು ಮೊದಲು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ. ಜಾತಿ ಗಣತಿಯು ಕೇವಲ ಜಾತಿ ಸಮೀಕ್ಷೆಯಾಗಿರದೆ “ಆರ್ಥಿಕ” ಮತ್ತು “ಸಾಂಸ್ಥಿಕ” ಅಂಶಗಳನ್ನು ಹೊಂದಿರುತ್ತದೆ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಇತಿಹಾಸವನ್ನು ಬಿಜೆಪಿ ಅಳಿಸಿ ಹಾಕುತ್ತಿದೆ. ನನಗೆ ಜಾತಿಯಲ್ಲಿ ಆಸಕ್ತಿ ಇಲ್ಲ ಆದರೆ ನ್ಯಾಯದಲ್ಲಿ ಆಸಕ್ತಿ ಇದೆ, ಪ್ರಧಾನಿ ಮೋದಿ ಅವರು ಕಳೆದ ಹತ್ತು ವರ್ಷಗಳಿಂದ ತಾನು ಒಬಿಸಿ ಎಂದು ಹೇಳುತ್ತಿದ್ದಾರೆ ಆದರೆ ನಾನು ಜಾತಿ ಗಣತಿಯ ಬಗ್ಗೆ ಮಾತನಾಡುವಾಗ, ಜಾತಿ ಇಲ್ಲ ಎಂದು ಮೋದಿ ಹೇಳಿದರು. ಜಾತಿ ಇಲ್ಲದಿದ್ದರೆ ನೀವು ಒಬಿಸಿ ಆಗೋದು ಹೇಗೆ? ಭಾರತದಲ್ಲಿ ಬಡವರು ಮತ್ತು ಶ್ರೀಮಂತರು ಎಂಬ ಎರಡು ಜಾತಿಗಳು ಮಾತ್ರ ಇದೆ ಎಂದು ಮೋದಿ ಹೇಳುತ್ತಾರೆ. ಅಗಿದ್ದರೆ ಬಡವರು ಮತ್ತು ಶ್ರೀಮಂತರ ಪಟ್ಟಿಯನ್ನು ಹೊರತನ್ನಿ. ಒಬಿಸಿಗಳು, ದಲಿತರು, ಆದಿವಾಸಿಗಳನ್ನು ಬಡವರ ಪಟ್ಟಿಯಲ್ಲಿ ಕಾಣಬಹುದು ಆದರೆ ಅವರು ಶ್ರೀಮಂತರ ಪಟ್ಟಿಯಲ್ಲಿ ಅವರನ್ನು ಕಾಣಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಮಮಂದಿರ ಶಂಕುಸ್ಥಾಪನೆ ಸಮಾರಂಭದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ, ರಾಮಮಂದಿರ ಮತ್ತು ಸಂಸತ್ತಿನ ಕಟ್ಟಡ ಉದ್ಘಾಟನೆಯಲ್ಲಿ ಒಬ್ಬ ದಲಿತ, ಬುಡಕಟ್ಟು ಜನಾಂಗದವರು ಕೂಡ ಕಾಣಿಸಿಕೊಂಡಿಲ್ಲ, 90% ಜನಸಂಖ್ಯೆಯು ಇದನ್ನು ಅರ್ಥಮಾಡಿಕೊಂಡಿದೆ. ಜನವರಿ 22ರಂದು ನಡೆದ ರಾಮಮಂದಿರ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಬಿಜೆಪಿ ವಿರುದ್ಧ ಅವರು ಟೀಕಿಸಿದ್ದಾರೆ.

ಮಾಧ್ಯಮಗಳು ನನ್ನನ್ನು ಗಾಂಭೀರ್ಯವಿಲ್ಲದ ರಾಜಕಾರಣಿ ಎಂದು ಬಿಂಬಿಸಿತು. MGNREGA, ಭೂಸ್ವಾಧೀನ ಮಸೂದೆ ವಿರುದ್ಧದ ಹೋರಾಟ ಗಂಭೀರವಲ್ಲದ ವಿಷಯಗಳಾಗಿ ತೋರಿಸಲಾಗಿದೆ. ಆದರೆ ಅಮಿತಾಬ್ ಬಚ್ಚನ್, ಐಶ್ವರ್ಯಾ ರೈ, ವಿರಾಟ್ ಕೊಹ್ಲಿಯನ್ನು ಮಾಧ್ಯಮಗಳು ಗಂಭೀರವಾಗಿ ತೋರಿಸಿವೆ. ನಾನು ಮಾಧ್ಯಮಗಳ ಹೂಡಿಕೆದಾರರನ್ನು ಪರಿಶೀಲಿಸಿದೆ. ಒಬಿಸಿ, ದಲಿತ, ಬುಡಕಟ್ಟು ಸಮುದಾಯದ ಒಬ್ಬ ದೊಡ್ಡ ಆ್ಯಂಕರ್ ಇಲ್ಲ. ಹಾಗಾಗಿ ನಿಮ್ಮ ಧ್ವನಿ ಇಲ್ಲ. ಮಾಧ್ಯಮಗಳಲ್ಲಿ ಇವರಿಗೆ ಪ್ರಾತಿನಿಧ್ಯವಿಲ್ಲ. ಯಾರ ಹಣ ಮಾಧ್ಯಮಕ್ಕೆ ಹೋಗುತ್ತದೆ? ಸರಕಾರಗಳು ಹಣ ನೀಡುತ್ತವೆ. ಜಿಎಸ್‌ಟಿಯಲ್ಲಿ ಯಾರ ಹಣ ಬರುತ್ತದೆ? ಇದು ಶೇ. 90ರಷ್ಟು ಜನರ ಹಣ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...