Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...