Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...