Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...