Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...