Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...