Homeಮುಖಪುಟಮುಖ್ಯ ಚುನಾವಣಾ ಆಯುಕ್ತ 'ಮತಗಳ್ಳರ ರಕ್ಷಕ' ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

ಮುಖ್ಯ ಚುನಾವಣಾ ಆಯುಕ್ತ ‘ಮತಗಳ್ಳರ ರಕ್ಷಕ’ ಎಂದ ರಾಹುಲ್ ಗಾಂಧಿ: ಆಳಂದ ಮತಗಳ್ಳತನದ ದಾಖಲೆ ಬಿಡುಗಡೆ

- Advertisement -
- Advertisement -

ನವದೆಹಲಿಯಲ್ಲಿ ಗುರುವಾರ (ಸೆ.18) ಮಹತ್ವದ ಸುದ್ದಿಗೋಷ್ಠಿ ನಡೆಸಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಲಬುರಗಿ ಜಿಲ್ಲೆ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ಮತಗಳ್ಳತನ ಪ್ರಯತ್ನದ ಬಗ್ಗೆ ದಾಖಲೆ ಬಿಡುಗಡೆ ಮಾಡಿದರು.

ಇದೇ ವೇಳೆ ಚುನಾವಣಾ ಆಯೋಗದ ವಿರುದ್ದ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು “ಮತಗಳ್ಳರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಭಾರತದ ಪ್ರಜಾಪ್ರಭುತ್ವವನ್ನು ನಾಶಪಡಿಸಿದ ಜನರನ್ನು ಮುಖ್ಯ ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂಬುದಕ್ಕೆ ನಾನು ಕಣ್ಣಿಗೆ ಕಟ್ಟುವ ಪುರಾವೆಯನ್ನು ತೋರಿಸುತ್ತೇನೆ ಮತ್ತು ಹೇಗೆ ರಕ್ಷಿಸಲಾಗುತ್ತಿದೆ ಎಂಬುದನ್ನು ಕೂಡ ತಿಳಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ಅರಿತುಕೊಂಡೇ ನಾನು ಈ ಹೇಳಿಕೆಗಳನ್ನು ನೀಡುತ್ತಿದ್ದೇನೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.

ಕೆಲ ವರ್ಷಗಳಿಂದ ವಿವಿಧ ಚುನಾವಣೆಗಳಲ್ಲಿ ಕೆಲ ಶಕ್ತಿಗಳು ಭಾರತದಾದ್ಯಂತ ಲಕ್ಷಾಂತರ ಮತದಾರರನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಮತಗಳನ್ನು ಅಳಿಸಿ ಹಾಕುತ್ತಿವೆ. ವಿರೋಧ ಪಕ್ಷಕ್ಕೆ ಮತ ಹಾಕುತ್ತಿರುವ ದಲಿತರು, ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಆದಿವಾಸಿಗಳು ಸೇರಿದಂತೆ ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಳ್ಳಲಾಗಿದೆ ಎಂದರು.

ಶೇಕಡ 100ರಷ್ಟು ಸತ್ಯವಲ್ಲದ ಯಾವುದನ್ನೂ ನಾನು ಈ ವೇದಿಕೆಯಲ್ಲಿ ಹೇಳುವುದಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುವ ವ್ಯಕ್ತಿ, ನನ್ನ ಸಂವಿಧಾನವನ್ನು ಪ್ರೀತಿಸುತ್ತೇನೆ, ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಪ್ರೀತಿಸುತ್ತೇನೆ ಮತ್ತು ನಾನು ಆ ಪ್ರಕ್ರಿಯೆಯನ್ನು ರಕ್ಷಿಸುತ್ತಿದ್ದೇನೆ. ಹಾಗಾಗಿ, ಶೇ. 100ರಷ್ಟು ಪುರಾವೆಗಳು ಇಲ್ಲದ ಯಾವುದನ್ನೂ ನಾನು ಇಲ್ಲಿ ಹೇಳುವುದಿಲ್ಲ ಎಂದು ರಾಹುಲ್ ಗಾಂಧಿ ಒತ್ತಿ ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಭದ್ರಕೋಟೆಯಾದ ಆಳಂದ ಕ್ಷೇತ್ರದಲ್ಲಿ, ಮತದಾರರಿಗೆ ಗೊತ್ತಾಗದಂತೆ 6000ಕ್ಕೂ ಹೆಚ್ಚು ಮತಗಳನ್ನು ಅಳಿಸಿ ಹಾಕುವ ಪ್ರಯತ್ನ ಮಾಡಲಾಗಿತ್ತು. ಯಾರೂ 6,018 ಮತದಾರರ ಹೆಸರುಗಳನ್ನು ಅಳಿಸುವಾಗ ಸಿಕ್ಕಿ ಬಿದ್ದಿದ್ದರು. ಅಲ್ಲಿ ಒಟ್ಟು ಎಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ನಮಗೆ ತಿಳಿದಿಲ್ಲ. ಆದರೆ, 6018 ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಎಂದರು.

ಆಳಂದ ಕ್ಷೇತ್ರದಲ್ಲಿ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಒಬ್ಬರ ಚಿಕ್ಕಪ್ಪನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನ ಮಾಡಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದಾಗ ನೆರಮನೆಯ ವ್ಯಕ್ತಿಯೇ ಹೆಸರು ಅಳಿಸಲು ಅರ್ಜಿ ಹಾಕಿರುವುದು ಗೊತ್ತಾಗಿದೆ. ಈ ಬಗ್ಗೆ ಅವರನ್ನು ವಿಚಾರಿಸಿದಾಗ ಈ ವಿಷಯವೇ ಗೊತ್ತಿಲ್ಲ ಎಂದಿದ್ದರು. ಹಾಗಾಗಿ, ಯಾವುದೋ ಒಂದು ಶಕ್ತಿ ಇಡೀ ಪ್ರಕ್ರಿಯೆಯನ್ನು ಹೈಜಾಕ್ ಮಾಡಿ ಮತದಾರರ ಪಟ್ಟಿಯಿಂದ ಹೆಸರು ಅಳಿಸಿ ಹಾಕಿತ್ತು. ಸುದೈವವಶಾತ್ ನಮಗೆ ಅದು ಸಿಕ್ಕಿತು ಎಂದು ರಾಹುಲ್ ಗಾಂಧಿ ವಿವರಿಸಿದರು.

ಇದೇ ವೇಳೆ ಆಳಂದ ಶಾಸಕ ಬಿ.ಆರ್ ಪಾಟೀಲ್ ಮತ್ತು ಮತಗಳ್ಳತನ ವಂಚನೆಗೆ ಒಳಗಾದ ಇಬ್ಬರು ವ್ಯಕ್ತಿಗಳನ್ನು ರಾಹುಲ್ ಗಾಂಧಿ ವೇದಿಕೆಗೆ ಕರೆತಂದರು. ಈ ಪೈಕಿ ಸೂರ್ಯಕಾಂತ್ ಎಂಬವರು ಮಾತನಾಡಿ “ನಾನು ಅಳಂದದ ಸರಸಂಬಾ ಗ್ರಾಮದ ನಿವಾಸಿ. ನನ್ನ ಹೆಸರಿನಲ್ಲಿ12 ಜನರ ಹೆಸರನ್ನು ಅಳಿಸಿ ಹಾಕಲು ಅರ್ಜಿ ಸಲ್ಲಿಸಲಾಗಿತ್ತು. ನನಗೆ ಈ ವಿಷಯ ಗೊತ್ತಿರಲಿಲ್ಲ” ಎಂದರು. ಪಕ್ಕದಲ್ಲಿದ್ದ ಮಹಿಳೆಯನ್ನು ತೋರಿಸಿ..”ಇವರು ನನ್ನ ಹೆಸರನ್ನು ಏಕೆ ಡಿಲೀಟ್ ಮಾಡಿಸಿದಿರಿ?” ಎಂದು ಕೇಳಿದಾಗ ನನಗೆ ವಿಷಯ ಗೊತ್ತಾಯ್ತು. ನಾನು ಶಾಸಕ ಬಿ.ಆರ್‌ ಪಾಟೀಲ್‌ಗೆ ಮಾಹಿತಿ ನೀಡಿದೆ. ಆ ಬಳಿಕ ತಹಶೀಲ್ದಾರ್‌ಗೆ ದೂರು ನೀಡಿದೆವು. ನಂತರ ಜಿಲ್ಲಾಧಿಕಾರಿ ಪೊಲೀಸ್‌ ದೂರು ದಾಖಲಿಸಿದರು” ಎಂದು ಹೇಳಿದರು.

ಆಳಂದ ಕ್ಷೇತ್ರದಲ್ಲಿ ನಿರ್ದಿಷ್ಟವಾಗಿ ಕಾಂಗ್ರೆಸ್ ಮತದಾರರನ್ನು ಗುರಿಯಾಗಿಸಿ ಹೆಸರು ಅಳಿಸಲಾಗಿದೆ. ಈ ಪ್ರಕ್ರಿಯೆಗೆ ಅತ್ಯಾಧುನಿಕ ಕೇಂದ್ರೀಕೃತ ವ್ಯವಸ್ಥೆಯನ್ನು ಬಳಸಲಾಗಿದೆ. ಮತದಾರರ ಹೆಸರನ್ನು ಅಳಿಸಲು ಅರ್ಜಿಗಳನ್ನು ‘ಸ್ವಯಂಚಾಲಿತವಾಗಿ ಸಾಫ್ಟ್‌ವೇರ್ ಬಳಸಿ’ ಸಲ್ಲಿಸಲಾಗಿದೆ. ಕರ್ನಾಟಕದ ಹೊರಗಿನಿಂದ, ವಿವಿಧ ರಾಜ್ಯಗಳ ಮೊಬೈಲ್ ಸಂಖ್ಯೆಗಳನ್ನು ಇದಕ್ಕೆ ಬಳಸಲಾಗಿದೆ ಎಂದ ರಾಹುಲ್ ಗಾಂಧಿ, ಅರ್ಜಿದಾರರ ಸೀರಿಯಲ್ ನಂಬರ್‌ಗಳಲ್ಲಿ ಹೋಲಿಕೆಗಳನ್ನು ಎತ್ತಿ ತೋರಿಸಿದರು.

ಸೀರಿಯಲ್ ನಂಬರ್‌ಗಳನ್ನು ಗಮನಿಸಿ…ಒಂದು ಸಾಫ್ಟ್‌ವೇರ್ ಬೂತ್‌ನ ಮೊದಲ ಮತದಾರರ ಹೆಸರನ್ನು ಬಳಸಿಕೊಂಡು ಹೆಸರುಗಳನ್ನು ಅಳಿಸುತ್ತಿದೆ. ಯಾರೋ ಒಬ್ಬರು ಸ್ವಯಂಚಾಲಿತ ಪ್ರೋಗ್ರಾಂ ರಚಿಸಿದ್ದಾರೆ, ಇದರಿಂದ ಮತಗಟ್ಟೆಯಲ್ಲಿ ಮೊದಲ ಮತದಾರನೇ ಅರ್ಜಿದಾರನಾಗಿರುವಂತೆ ಮಾಡಲಾಗಿದೆ. ಅದೇ ವ್ಯಕ್ತಿಯು ರಾಜ್ಯದ ಹೊರಗಿನಿಂದ ಮೊಬೈಲ್ ಫೋನ್‌ಗಳನ್ನು ತೆಗೆದುಕೊಂಡು, ಅವುಗಳನ್ನು ಬಳಸಿ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಇದು ಕೇಂದ್ರೀಕೃತ ರೀತಿಯಲ್ಲಿ ಮತ್ತು ದೊಡ್ಡ ಪ್ರಮಾಣದಲ್ಲಿ ನಡೆದಿದೆ ಎಂದು ನಮಗೆ ಖಾತ್ರಿಯಿದೆ. ಇದನ್ನು ಕೆಳಮಟ್ಟದ ಕಾರ್ಯಕರ್ತರಿಂದ ಮಾಡಲಾಗಿಲ್ಲ; ಇದು ಒಂದು ಸರಳವಾದ, ಆದರೆ ದೊಡ್ಡ ಮಟ್ಟದಲ್ಲಿ ಯೋಜಿತವಾಗಿ ನಡೆದ ಕಾರ್ಯವಾಗಿದೆ,” ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಕರ್ನಾಟಕದ ತನಿಖಾ ಸಂಸ್ಥೆಗಳು ಪದೇ ಪದೇ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲು ಮತ್ತು ನಿರ್ಣಾಯಕ ಡೇಟಾವನ್ನು ಒದಗಿಸಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಿರಾಕರಿಸಿದ್ದಾರೆ, ಅವರು ಮತ ಅಳಿಸುವಿಕೆಯಲ್ಲಿ ನೇರ ಭಾಗಿಯಾಗಿದ್ದಾರೆ ಎಂದು ಆರೋಪಿಸಿದರು.

ಜ್ಞಾನೇಶ್ ಕುಮಾರ್ ಬಗ್ಗೆ ನಾನು ಯಾಕೆ ನೇರ ಆರೋಪ ಮಾಡುತ್ತಿದ್ದೇನೆ ಎಂಬುದನ್ನು ನೋಡೋದಾರೆ, ಕರ್ನಾಟಕದಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಕರ್ನಾಟಕದ ಸಿಐಡಿ 18 ತಿಂಗಳಲ್ಲಿ ಚುನಾವಣಾ ಆಯೋಗಕ್ಕೆ 18 ಪತ್ರಗಳನ್ನು ಕಳುಹಿಸಿದೆ ಮತ್ತು ಅವರು ಚುನಾವಣಾ ಆಯೋಗವನ್ನು ಕೆಲವು ಸರಳ ಸಂಗತಿಗಳನ್ನು ಕೇಳಿದ್ದಾರೆ. ಮೊದಲನೆಯದು, ಈ ಫಾರ್ಮ್‌ಗಳನ್ನು ಭರ್ತಿ ಮಾಡಿದ ಡೆಸ್ಟಿನೇಶನ್ ಐಪಿಯನ್ನು ನಮಗೆ ನೀಡಿ. ಎರಡನೆಯದು, ಈ ಅರ್ಜಿಗಳನ್ನು ಸಲ್ಲಿಸಿದ ಸಾಧನದ ಡೆಸ್ಟಿನೇಶನ್ ಪೋರ್ಟ್‌ಗಳನ್ನು ನಮಗೆ ನೀಡಿ ಮತ್ತು ಮೂರನೆಯದು, ಮುಖ್ಯವಾಗಿ, ನಮಗೆ ಒಟಿಪಿ ಟ್ರೇಲ್‌ಗಳನ್ನು ನೀಡಿ, ಏಕೆಂದರೆ ಅರ್ಜಿ ಸಲ್ಲಿಸುವಾಗ ಒಟಿಪಿ ಪಡೆಯಬೇಕಾಗುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

“18 ತಿಂಗಳಲ್ಲಿ 18 ಬಾರಿ ಕರ್ನಾಟಕದ ಸಿಐಡಿ ಚುನಾವಣಾ ಆಯೋಗಕ್ಕೆ ಇದಕ್ಕಾಗಿ ಪತ್ರ ಬರೆದಿದೆ. ಆದರೂ, ಚುನಾವಣಾ ಆಯೋಗ ಮಾಹಿತಿ ನೀಡುತ್ತಿಲ್ಲ ಏಕೆ? ಏಕೆಂದರೆ ಇದು ಕಾರ್ಯಾಚರಣೆಯನ್ನು ಎಲ್ಲಿಗೆ ಕೊಂಡೊಯ್ಯತ್ತದೆ ಮತ್ತು ಇದು ಎಲ್ಲಿಗೆ ಹೋಗುತ್ತದೆ ಎಂದು ನಮಗೆ ಸಂಪೂರ್ಣವಾಗಿ ಮನವರಿಕೆಯಾಗಿದೆ” ರಾಹುಲ್ ಗಾಂಧಿ ತಿಳಿಸಿದರು.

‘ಆಳಂದ’ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣ: ಸಿಐಡಿ ತನಿಖೆಗೆ ಸ್ಪಂದಿಸದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...