Homeಮುಖಪುಟರಾಹುಲ್ ಗಾಂಧಿ ಹೋರಾಟಗಾರ, ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತಾರೆ: ಸುಪ್ರಿಯಾ ಸುಳೆ

ರಾಹುಲ್ ಗಾಂಧಿ ಹೋರಾಟಗಾರ, ಆಯೋಗದ ನೋಟಿಸ್‌ಗೆ ಉತ್ತರ ನೀಡುತ್ತಾರೆ: ಸುಪ್ರಿಯಾ ಸುಳೆ

- Advertisement -
- Advertisement -

”ರಾಹುಲ್ ಗಾಂಧಿ ಒಬ್ಬ ಹೋರಾಟಗಾರನಾಗಿದ್ದು, ಚುನಾವಣಾ ಆಯೋಗದ ನೋಟಿಸ್‌ಗೆ ಗೌರವಯುತ ಮತ್ತು ಪ್ರಾಮಾಣಿಕವಾಗಿ ಉತ್ತರ ನೀಡಲಿದ್ದಾರೆ” ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ‘ಪನ್‌” (ಅಪಶಕುನ) ಎಂದು ಹೇಳಿದ್ದಕ್ಕಾಗಿ ಹಾಗೂ ಮೋದಿ ಅವರ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಜೇಬುಗಳ್ಳತನ’ದ ಬಗ್ಗೆ ಉಲ್ಲೇಖಿಸಿದ್ದಕ್ಕಾಗಿ ಚುನಾವಣಾ ಆಯೋಗವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಪ್ರಿಯಾ ಸುಳೆ ಅವರು, ‘ರಾಹುಲ್ ಅವರು ಪ್ರಾಮಾಣಿಕ ಉತ್ತರವನ್ನು ನೀಡುತ್ತಾರೆ ಎಂದು ನನಗೆ ವಿಶ್ವಾಸವಿದೆ. ಅವರು ಪ್ರಾಮಾಣಿಕರಾಗಿರುವುದರಿಂದ ನಿರ್ಭೀತಿಯಿಂದ ಇರುತ್ತಾರೆ” ಎಂದು ತಿಳಿಸಿದ್ದಾರೆ.

”ಬಿಜೆಪಿಗರು ಜವಾಹರಲಾಲ್ ನೆಹರೂ ಕುಟುಂಬದ ಬಗ್ಗೆ ಮಾತನಾಡಿದ ಹಲವು ಉದಾಹರಣೆಗಳಿವೆ. ಹಾಗಾಗಿ ಅವರು (ಬಿಜೆಪಿಗರು) ಏನಾದರೂ ಮಾತನಾಡಿದರೆ ಬೇಸರಗೊಳ್ಳುವ ಅಗತ್ಯವೇನಿದೆ?” ಎಂದು ಸುಪ್ರಿಯಾ ಪ್ರಶ್ನಿಸಿದ್ದಾರೆ.

ಹಿನ್ನೆಲೆ: 

ಸಾರ್ವಜನಿಕ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು ಪನೌಟಿ (ಕೆಟ್ಟ ಶಕುನ) ಮತ್ತು ಜೈಬ್‌ಕತ್ರಾ (ಪಿಕ್‌ಪಾಕೆಟ್) ಎಂದು ಕರೆದಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.

ಭಾನುವಾರ ನಡೆದ ವಿಶ್ವಕಪ್ ಪೈನಲ್ ಪಂದ್ಯದಲ್ಲಿ ಭಾರತ ಸೋಲಿ ಕಂಡಿತು. ಈ ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಹೋಗಿರುವುದನ್ನು ಉಲ್ಲೇಖಿಸಿ ಮೋದಿಯನ್ನು ಕೆಟ್ಟ ಶಕುನ ಎಂದು ಕರೆದರು.

”ಭಾರತದ ಪ್ರಧಾನಮಂತ್ರಿ ಕೆಟ್ಟ ಶಕುನ ಎಂದು ಹೇಳುವುದು ಅತ್ಯಂತ ಖಂಡನೀಯ. ಆಟದಲ್ಲಿ ಸಾಮರ್ಥ್ಯ ಇರುವ ತಂಡ ಗೆಲುವು ಸಾಧಿಸುತ್ತದೆ” ಎಂದು ಬಿಜೆಪಿ ಹೇಳಿದೆ.

ಕೋಟ್ಯಾಧಿಪತಿಗಳ ಸಾಲ ಮನ್ನಾ ಕುರಿತು ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿ, ಮೋದಿ ಯಾವುದೇ ಸಾಲವನ್ನು ಮನ್ನಾ ಮಾಡಿಲ್ಲ ಮತ್ತು ಬದಲಿಗೆ ಬ್ಯಾಂಕ್‌ಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಆದೇಶದಂತೆ ಅನುತ್ಪಾದಕ ಆಸ್ತಿಗಳಿಗೆ (ಎನ್‌ಪಿಎ) ನಿಬಂಧನೆಗಳನ್ನು ಮಾಡಬೇಕಾಗಿದೆ ಎಂದು ಬಿಜೆಪಿ ತನ್ನ ದೂರಿನಲ್ಲಿ ಹೇಳಿದೆ.

1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123(4) (ಸುಳ್ಳು ಹೇಳಿಕೆಗಳ ಪ್ರಕಟಣೆಗೆ ಸಂಬಂಧಿಸಿದಂತೆ ಭ್ರಷ್ಟ ಆಚರಣೆಗಳು), ಸೆಕ್ಷನ್ 171G (ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆಗಳು), 504 (ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು), 499 (ಮಾನನಷ್ಟ) ಭಾರತೀಯ ದಂಡ ಸಂಹಿತೆಯ (IPC), ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಪ್ರಕರಣ ದಾಖಲಿಸುವಂತೆ ಬಿಜೆಪಿ ಕೇಳಿದೆ.

ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಆಯುಕ್ತರಿಗೆ ಬುಧವಾರ ಖುದ್ದಾಗಿ ದೂರು ಸಲ್ಲಿಸಿದೆ.

ಆಯೋಗ ನೀಡಿದ ನೋಟಿಸ್‌ನಲ್ಲಿ ಏನಿದೆ? 

ರಾಜಕೀಯ ವಿರೋಧಿಗಳನ್ನು ಉದ್ದೇಶಿಸಿ ಆಧಾರವಿಲ್ಲದೆ ಮಾತನಾಡುವುದು ನೀತಿ ಸಂಹಿತೆಗೆ ವಿರುದ್ಧ ಎಂದು ಆಯೋಗವು ರಾಹುಲ್ ಅವರಿಗೆ ನೀಡಿರುವ ನೋಟಿಸ್‌ನಲ್ಲಿ ಹೇಳಿದೆ.

ರಾಹುಲ್ ಅವರು ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಈ ಪದಗಳನ್ನು ಬಳಸಿದ್ದರು. “ಅಪಶಕುನ ಎಂದು ಹೇಳಿರುವುದು, ನಿಷೇಧಿಸಿರುವ ಮಾತುಗಳ ವ್ಯಾಪ್ತಿಗೆ ಬರುತ್ತದೆ ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ ಎಂದು ಅಯೋಗವು ಹೇಳಿದೆ.

ಸಂವಿಧಾನವು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಹಾಗೆಯೇ, ವ್ಯಕ್ತಿಯು ತಾನು ಸಂಪಾದಿಸಿರುವ ಕೀರ್ತಿಯನ್ನು ಕಾಪಾಡಿಕೊಳ್ಳುವ ಹಕ್ಕನ್ನು ಕೂಡ ಹೊಂದಿರುತ್ತಾನೆ. ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಕೀರ್ತಿಯನ್ನು ಕಾಪಾಡಿಕೊಳ್ಳುವ ಹಕ್ಕುಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಿರುವುದು ಸಾಂವಿಧಾನಿಕ ಅಗತ್ಯ ಎಂದು ಆಯೋಗ ಹೇಳಿದೆ.

“ನಿಮ್ಮ ವಿರುದ್ಧದ ದೂರಿಗೆ ವಿವರಣೆ ನೀಡಬೇಕು. ನೀತಿ ಸಂಹಿತೆಯ ಉಲ್ಲಂಘನೆಯ ಆರೋಪಕ್ಕೆ ಪ್ರತಿಯಾಗಿ, ನಿಮ್ಮ ವಿರುದ್ಧ ಕ್ರಮವನ್ನು ಏಕೆ ಜರುಗಿಸಬಾರದು ಎಂಬುದಕ್ಕೆ ಉತ್ತರ ನೀಡಬೇಕು’ ಎಂದು ಆಯೋಗ ಹೇಳಿದೆ. ಶನಿವಾರ ಸಂಜೆಯೊಳಗೆ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ಸೂಚಿಸಿದೆ. ಉತ್ತರ ಬಾರದಿದ್ದರೆ ಅಗತ್ಯ ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದೆ.

ಇದನ್ನೂ ಓದಿ: ಮೋದಿ ‘ಕೆಟ್ಟ ಶಕುನ’ ಎಂದ ರಾಹುಲ್: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...