Homeಮುಖಪುಟರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

ರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

- Advertisement -
- Advertisement -

ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಕುರಿತು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ವಕೀಲ ಸತ್ಯ ಸಬರ್ವಾಲ್ ಮೂಲಕ ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. ಅದು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಆಗಸ್ಟ್ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಸುಬ್ರಮಣಿಯನ್‌ ಸ್ವಾಮಿ, “ರಾಹುಲ್ ಗಾಂಧಿ ಸ್ವಯಂ ಪ್ರೇರಿತರಾಗಿ ತಾನು ಬ್ರಿಟನ್ ಪ್ರಜೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಹೇಳಿದ್ದಾರೆ. ಅಲ್ಲದೆ, ಅವರು ಅಲ್ಲಿನ ಪಾಸ್‌ಪೋರ್ಟ್‌ ಕೂಡ ಹೊಂದಿದ್ದಾರೆ. ಈ ಮೂಲಕ ಭಾರತೀಯ ಪೌರತ್ವ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಅನ್ನು ಉಲ್ಲಂಘಿಸಿದ್ದಾರೆ. ಇದರಿಂದ ಅವರು ಭಾರತೀಯ ಪೌರತ್ವ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಭಾರತದ ಸಂವಿಧಾನದ 9ನೇ ವಿಧಿಯು ಯಾವುದೇ ವ್ಯಕ್ತಿಯು ಯಾವುದೇ ಇತರ ರಾಷ್ಟ್ರದ ಪೌರತ್ವವನ್ನು ಸ್ವಯಂ ಪ್ರೇರಣೆಯಿಂದ ಪಡೆದುಕೊಂಡರೆ, ಅವರನ್ನು ಭಾರತದ ಪ್ರಜೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳುತ್ತದೆ.

ರಾಹುಲ್‌ ಗಾಂಧಿಯವರು ಬ್ರಿಟನ್‌ನಲ್ಲಿ 2003ರಲ್ಲಿ ನೊಂದಾಯಿಸಿರುವ ಬ್ಯಾಕ್‌ಆಪ್ಸ್‌ ಲಿಮಿಟೆಡ್ ಹೆಸರಿನ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಸುಬ್ರಮಣಿಯನ್‌ ಸ್ವಾಮಿ ತನ್ನ ಪತ್ರದಲ್ಲಿ ಹೇಳಿದ್ದರು. ಅಕ್ಟೋಬರ್ 10,2005 ಮತ್ತು ಅಕ್ಟೋಬರ್ 31,2006 ರಂದು ಸಲ್ಲಿಸಿದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ ಗಾಂಧಿಯವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದರು ಎಂದು ಆರೋಪಿಸಿದ್ದರು.

ಮುಂದುವರೆದು, ಫೆಬ್ರವರಿ 17, 2009 ರಂದು ದಾಖಲಿಸಿರುವ ಕಂಪನಿಯ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದೇ ಉಲ್ಲೇಖಿಸಲಾಗಿದೆ ಎಂದಿದ್ದ ಸ್ವಾಮಿ, ಇದು ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಉಲ್ಲಂಘಿಸುತ್ತದೆ ಎಂದಿದ್ದರು.

ಸ್ವಾಮಿ ಅವರ ಪತ್ರದ ಹಿನ್ನೆಲೆ ಗೃಹ ಇಲಾಖೆ ಏಪ್ರಿಲ್ 29,2019 ರಂದು ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದು ಹದಿನೈದು ದಿನಗಳೊಳಗೆ ಈ ವಿಷಯದಲ್ಲಿ “ವಾಸ್ತವ ಸ್ಥಿತಿಯನ್ನು ತಿಳಿಸುವಂತೆ” ಕೇಳಿಕೊಂಡಿತ್ತು.

ಕಳೆದ ಆಗಸ್ಟ್ 10ರಂದು ತನ್ನ ಹಳೆಯ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸ್ವಾಮಿ, “ರಾಹುಲ್ ಗಾಂಧಿ 2003ರಲ್ಲಿ ಬ್ರಿಟಿಷ್ ಪೌರತ್ವ ಪಡೆದು ವಿದೇಶಿ ಪ್ರಜೆಯಾಗಿರುವಾಗ ಮತ್ತು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿರುವಾಗ ಮೋದಿ ಮತ್ತು ಶಾ ಅವರನ್ನು ರಕ್ಷಿಸುತ್ತಿರುವುದು ಏಕೆ? ಅವರ ಭಾರತೀಯ ಪೌರತ್ವ ಅಮಾನ್ಯವಾಗಿದೆ. ಮೋದಿ ರಕ್ಷಣೆ ಮುಂದುವರಿಸಿದರೆ ನಾನು ಮೋದಿ ಮತ್ತು ಶಾ ವಿರುದ್ಧ ಕೇಸು ದಾಖಲಿಸಬೇಕಾಗುತ್ತದೆ” ಎಂದು ಬರೆದುಕೊಂಡಿದ್ದರು.

ಇವತ್ತು (ಆ.16) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ವಾಮಿ “ನನ್ನ ಅಸೋಸಿಯೇಟ್ ಅಡ್ವೊಕೇಟ್ ಸತ್ಯ ಸಬರ್ವಾಲ್ ಅವರು ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಲು ಮತ್ತು ಅವರ ಭಾರತೀಯ ಪೌರತ್ವವನ್ನು ಏಕೆ ಕಿತ್ತುಕೊಳ್ಳಬಾರದು ಎಂಬ ಕಾರಣವನ್ನು ತೋರಿಸಲು ಗೃಹ ಸಚಿವಾಲಯದ ವಿಫಲತೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯವರು ಗೃಹ ಸಚಿವಾಲಯಕ್ಕೆ ಉತ್ತರಿಸಲು ನಿರಾಕರಿಸಿದ್ದಾರೆ, ಆದ್ದರಿಂದ ಪಿಐಎಲ್. ನಾನು ಅಸೋಸಿಯೇಟ್ಸ್ ವಿಶೇಷ್ ಕನೋರಿಯಾ ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ನಾಳೆ (ಆ.17) ದೇಶದಾದ್ಯಂತ ವೈದ್ಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...