Homeಮುಖಪುಟರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

ರಾಹುಲ್‌ ಗಾಂಧಿಯ ಪೌರತ್ವ ವಿಚಾರ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಸುಬ್ರಮಣಿಯನ್‌ ಸ್ವಾಮಿ

- Advertisement -
- Advertisement -

ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಕುರಿತು ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ವಕೀಲ ಸತ್ಯ ಸಬರ್ವಾಲ್ ಮೂಲಕ ಸುಬ್ರಮಣಿಯನ್‌ ಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. ಅದು ಮುಂದಿನ ವಾರ ವಿಚಾರಣೆಗೆ ಬರುವ ಸಾಧ್ಯತೆಯಿದೆ.

ಆಗಸ್ಟ್ 2019ರಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಸುಬ್ರಮಣಿಯನ್‌ ಸ್ವಾಮಿ, “ರಾಹುಲ್ ಗಾಂಧಿ ಸ್ವಯಂ ಪ್ರೇರಿತರಾಗಿ ತಾನು ಬ್ರಿಟನ್ ಪ್ರಜೆ ಎಂದು ಬ್ರಿಟಿಷ್ ಸರ್ಕಾರಕ್ಕೆ ಹೇಳಿದ್ದಾರೆ. ಅಲ್ಲದೆ, ಅವರು ಅಲ್ಲಿನ ಪಾಸ್‌ಪೋರ್ಟ್‌ ಕೂಡ ಹೊಂದಿದ್ದಾರೆ. ಈ ಮೂಲಕ ಭಾರತೀಯ ಪೌರತ್ವ ನಿಯಮಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಅನ್ನು ಉಲ್ಲಂಘಿಸಿದ್ದಾರೆ. ಇದರಿಂದ ಅವರು ಭಾರತೀಯ ಪೌರತ್ವ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದರು.

ಭಾರತದ ಸಂವಿಧಾನದ 9ನೇ ವಿಧಿಯು ಯಾವುದೇ ವ್ಯಕ್ತಿಯು ಯಾವುದೇ ಇತರ ರಾಷ್ಟ್ರದ ಪೌರತ್ವವನ್ನು ಸ್ವಯಂ ಪ್ರೇರಣೆಯಿಂದ ಪಡೆದುಕೊಂಡರೆ, ಅವರನ್ನು ಭಾರತದ ಪ್ರಜೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳುತ್ತದೆ.

ರಾಹುಲ್‌ ಗಾಂಧಿಯವರು ಬ್ರಿಟನ್‌ನಲ್ಲಿ 2003ರಲ್ಲಿ ನೊಂದಾಯಿಸಿರುವ ಬ್ಯಾಕ್‌ಆಪ್ಸ್‌ ಲಿಮಿಟೆಡ್ ಹೆಸರಿನ ಕಂಪನಿಯ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಸುಬ್ರಮಣಿಯನ್‌ ಸ್ವಾಮಿ ತನ್ನ ಪತ್ರದಲ್ಲಿ ಹೇಳಿದ್ದರು. ಅಕ್ಟೋಬರ್ 10,2005 ಮತ್ತು ಅಕ್ಟೋಬರ್ 31,2006 ರಂದು ಸಲ್ಲಿಸಿದ ಕಂಪನಿಯ ವಾರ್ಷಿಕ ರಿಟರ್ನ್ಸ್‌ನಲ್ಲಿ ಗಾಂಧಿಯವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದರು ಎಂದು ಆರೋಪಿಸಿದ್ದರು.

ಮುಂದುವರೆದು, ಫೆಬ್ರವರಿ 17, 2009 ರಂದು ದಾಖಲಿಸಿರುವ ಕಂಪನಿಯ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದೇ ಉಲ್ಲೇಖಿಸಲಾಗಿದೆ ಎಂದಿದ್ದ ಸ್ವಾಮಿ, ಇದು ಭಾರತದ ಸಂವಿಧಾನ ವಿಧಿ 9 ಮತ್ತು ಭಾರತೀಯ ಪೌರತ್ವ ಕಾಯ್ದೆ-1955 ಉಲ್ಲಂಘಿಸುತ್ತದೆ ಎಂದಿದ್ದರು.

ಸ್ವಾಮಿ ಅವರ ಪತ್ರದ ಹಿನ್ನೆಲೆ ಗೃಹ ಇಲಾಖೆ ಏಪ್ರಿಲ್ 29,2019 ರಂದು ರಾಹುಲ್‌ ಗಾಂಧಿಯವರಿಗೆ ಪತ್ರ ಬರೆದು ಹದಿನೈದು ದಿನಗಳೊಳಗೆ ಈ ವಿಷಯದಲ್ಲಿ “ವಾಸ್ತವ ಸ್ಥಿತಿಯನ್ನು ತಿಳಿಸುವಂತೆ” ಕೇಳಿಕೊಂಡಿತ್ತು.

ಕಳೆದ ಆಗಸ್ಟ್ 10ರಂದು ತನ್ನ ಹಳೆಯ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸ್ವಾಮಿ, “ರಾಹುಲ್ ಗಾಂಧಿ 2003ರಲ್ಲಿ ಬ್ರಿಟಿಷ್ ಪೌರತ್ವ ಪಡೆದು ವಿದೇಶಿ ಪ್ರಜೆಯಾಗಿರುವಾಗ ಮತ್ತು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿರುವಾಗ ಮೋದಿ ಮತ್ತು ಶಾ ಅವರನ್ನು ರಕ್ಷಿಸುತ್ತಿರುವುದು ಏಕೆ? ಅವರ ಭಾರತೀಯ ಪೌರತ್ವ ಅಮಾನ್ಯವಾಗಿದೆ. ಮೋದಿ ರಕ್ಷಣೆ ಮುಂದುವರಿಸಿದರೆ ನಾನು ಮೋದಿ ಮತ್ತು ಶಾ ವಿರುದ್ಧ ಕೇಸು ದಾಖಲಿಸಬೇಕಾಗುತ್ತದೆ” ಎಂದು ಬರೆದುಕೊಂಡಿದ್ದರು.

ಇವತ್ತು (ಆ.16) ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ವಾಮಿ “ನನ್ನ ಅಸೋಸಿಯೇಟ್ ಅಡ್ವೊಕೇಟ್ ಸತ್ಯ ಸಬರ್ವಾಲ್ ಅವರು ರಾಹುಲ್ ಗಾಂಧಿಯವರನ್ನು ವಿಚಾರಣೆಗೆ ಒಳಪಡಿಸಲು ಮತ್ತು ಅವರ ಭಾರತೀಯ ಪೌರತ್ವವನ್ನು ಏಕೆ ಕಿತ್ತುಕೊಳ್ಳಬಾರದು ಎಂಬ ಕಾರಣವನ್ನು ತೋರಿಸಲು ಗೃಹ ಸಚಿವಾಲಯದ ವಿಫಲತೆಯ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿಯವರು ಗೃಹ ಸಚಿವಾಲಯಕ್ಕೆ ಉತ್ತರಿಸಲು ನಿರಾಕರಿಸಿದ್ದಾರೆ, ಆದ್ದರಿಂದ ಪಿಐಎಲ್. ನಾನು ಅಸೋಸಿಯೇಟ್ಸ್ ವಿಶೇಷ್ ಕನೋರಿಯಾ ಅವರಿಗೆ ಧನ್ಯವಾದ ಹೇಳುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ : ನಾಳೆ (ಆ.17) ದೇಶದಾದ್ಯಂತ ವೈದ್ಯರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...