Homeಮುಖಪುಟಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

ಬ್ರೆಝಿಲ್ ಮಾಡೆಲ್ ಹರಿಯಾಣದಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ : ರಾಹುಲ್ ಗಾಂಧಿ ಆರೋಪ

- Advertisement -
- Advertisement -

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ 25 ಲಕ್ಷ ಅಥವಾ ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡ 12ರಷ್ಟು ‘ನಕಲಿ ಮತಗಳು’ ಚಲಾವಣೆಯಾಗಿವೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಬುಧವಾರ (ನ.5) ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ ಅವರು, ಕಾಂಗ್ರೆಸ್ ಗೆಲುವನ್ನು ಸೋಲಾಗಿ ಪರಿವರ್ತಿಸಲು ‘ವ್ಯವಸ್ಥಿತ ಷಡ್ಯಂತ್ರ’ ನಡೆದಿದೆ ಎಂದು ಹೇಳಿದ್ದಾರೆ.

“ಹರಿಯಾಣದಲ್ಲಿ 2 ಕೋಟಿ ಮತದಾರರಿದ್ದಾರೆ, ಅವರಲ್ಲಿ 25 ಲಕ್ಷ ನಕಲಿ ಮತದಾರರು. ನಮ್ಮ ತಂಡ 5.21 ಲಕ್ಷ ನಕಲಿ ಮತದಾರರ ಮಾಹಿತಿಯನ್ನು ಪತ್ತೆಹಚ್ಚಿದೆ. ಹರಿಯಾಣದ ಪ್ರತಿ ಎಂಟು ಮತದಾರರಲ್ಲಿ ಒಬ್ಬರು ನಕಲಿ” ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ.

ಮತದಾರರ ಪಟ್ಟಿಯಲ್ಲಿನ ಆಪಾದಿತ ವ್ಯತ್ಯಾಸಗಳನ್ನು ರಾಹುಲ್ ಗಾಂಧಿ ಸ್ಕ್ರೀನ್ ಮೂಲಕ ವಿವರಿಸಿದ್ದಾರೆ. ಅದರಲ್ಲಿ ಅವರು ತೋರಿಸಿದ ಮಹಿಳೆಯೊಬ್ಬರ ಫೋಟೋ ಗಮನಾರ್ಹವಾಗಿತ್ತು.

“ತಾನು ತೋರಿಸಿರುವುದು ಬ್ರೆಝಿಲ್‌ನ ಮಾಡೆಲ್ ಒಬ್ಬರ ಫೋಟೋ. ಸೀಮಾ, ಸ್ವೀಟಿ, ಸರಸ್ವತಿ, ರಶ್ಮಿ, ವಿಮಲಾ ಮುಂತಾದ ವಿಭಿನ್ನ ಹೆಸರುಗಳಲ್ಲಿ ಈ ಮಹಿಳೆಯ ಫೋಟೋ ಹರಿಯಾಣದ ಮತದಾರರ ಪಟ್ಟಿಯಲ್ಲಿ ಹಲವು ಬಾರಿ ಕಾಣಿಸಿಕೊಂಡಿದೆ. ಇವರು ಹರಿಯಾಣದ 10 ವಿಭಿನ್ನ ಬೂತ್‌ಗಳಲ್ಲಿ 22 ಬಾರಿ ಮತ ಚಲಾಯಿಸಿದ್ದಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಬುಡಮೇಲು ಮಾಡಲು ಬಿಜೆಪಿ ‘ಯೋಜಿತ ಕಾರ್ಯಾಚರಣೆ’ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

“ಎಲ್ಲಾ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್ ಗೆಲ್ಲುತ್ತದೆ ಎಂದು ಹೇಳಿದ್ದರೂ, ನಮ್ಮ ಪಕ್ಷಕ್ಕೆ ಸೋಲಾಯಿತು. ಹರಿಯಾಣದ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಚೆ ಮತಪತ್ರಗಳು ಚಲಾವಣೆಯಾದ ಮತಗಳಿಗೆ ಹೊಂದಾಣಿಕೆಯಾಗಿಲ್ಲ. ಕಾಂಗ್ರೆಸ್‌ನ ಅಭೂತಪೂರ್ವ ಗೆಲುವನ್ನು ಸೋಲಾಗಿ ಪರಿವರ್ತಿಸಲು ದೊಡ್ಡ ಷಡ್ಯಂತ್ರ ನಡೆಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಚುನಾವಣೆಯ ನಂತರ ಹರಿಯಾಣದ ಹಾಲಿ ಸಿಎಂ ನಯಾಬ್ ಸಿಂಗ್ ಸೈನಿ ಅವರು ನಗು ನಗುತ್ತಾ ಸುದ್ದಿಗೋಷ್ಠಿ ನಡೆಸಿದ ವಿಡಿಯೋ ತೋರಿಸಿದ ರಾಹುಲ್ ಗಾಂಧಿ, “ಕಾಂಗ್ರೆಸ್ ಫುಲ್ ಸ್ವೀಪ್ ಗಳಿಸುತ್ತದೆ ಎಂದು ವರದಿಗಳು ಬಂದರೂ, ಸೈನಿ ಅವರ ಮುಖದಲ್ಲಿ ನಗು ಮತ್ತು ಅವರು ಮಾತನಾಡಿ ರೀತಿ ಗಮನಿಸಿ. ಇದು ಚುನಾವಣೆಯ ಎರಡು ದಿನಗಳ ನಂತರದ ವಿಡಿಯೋ” ಎಂದಿದ್ದಾರೆ.

ಉತ್ತರ ಪ್ರದೇಶ ಮತ್ತು ಹರಿಯಾಣ ಎರಡರಲ್ಲೂ ಸಾವಿರಾರು ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಮನೆ ಸಂಖ್ಯೆ 150ರಲ್ಲಿ ವಾಸಿಸುವ ಪಲ್ವಾಲ್ ಜಿಲ್ಲಾ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಬಿಜೆಪಿ ನಾಯಕನ ವಿಳಾಸದಲ್ಲಿ 66 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯ ಮನೆಯಲ್ಲಿ 500 ಮತದಾರರು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕ ದಾಲ್ಚಂದ್ ಅವರು ಯುಪಿ ಮತ್ತು ಹರಿಯಾಣ ಎರಡರಲ್ಲೂ ಮತ ಚಲಾಯಿಸುತ್ತಿದ್ದಾರೆ. ಮಥುರಾದ ಬಿಜೆಪಿ ಸರಪಂಚ್ ಪ್ರಹ್ಲಾದ್ ಕೂಡ ಅದನ್ನೇ ಮಾಡುತ್ತಿದ್ದಾರೆ. ಈ ರೀತಿಯ ಸಂಖ್ಯೆ ಸಾವಿರಾರು ಇದೆ ಎಂದಿದ್ದಾರೆ.

‘ಮನೆ ಸಂಖ್ಯೆ. ಶೂನ್ಯ’ ಎಂದು ಪಟ್ಟಿ ಮಾಡಲಾದ ವಿಳಾಸಗಳಲ್ಲಿನ ಅಕ್ರಮಗಳ ಬಗ್ಗೆಯೂ ರಾಹುಲ್ ಗಾಂಧಿ ಗಮನಸೆಳೆದಿದ್ದಾರೆ. ಮನೆ ಸಂಖ್ಯೆ ಶೂನ್ಯ ಎನ್ನುವುದು ವಸತಿ ರಹಿತರಿಗೆ ಮೀಸಲಾದ ಪದನಾಮವಾಗಿದೆ.

ಹರಿಯಾಣ ಚುನಾವಣೆಯಲ್ಲಿ ದೊಡ್ಡ ಮಟ್ಟದ ‘ಮತಗಳ್ಳತನ’ : ದಾಖಲೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...