Homeಮುಖಪುಟಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್

ಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಥಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ನೂತನ ಉತ್ತರ ಪ್ರದೇಶ ಮುಖ್ಯಸ್ಥ ಅಜಯ್ ರಾಯ್ ಶುಕ್ರವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ರಾಯ್, ಅವರು ಪ್ರಿಯಾಂಕಾ ಗಾಂಧಿ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸುತ್ತಾರೆ. ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಬಯಸಿದರೆ, ಪ್ರತಿಯೊಬ್ಬ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸುತ್ತಾರೆ ಎಂದಿದ್ದಾರೆ.

ಲೋಕಸಭೆ ಚುನಾವಣೆ 2024ಕ್ಕೆ ಇನ್ನೇನು ತಿಂಗಳುಗಳು ಬಾಕಿ ಇರುವಾಗ ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್ ರಾಯ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಮಾತನಾಡಿದ ರಾಯ್, ”ಅವರು ಭರವಸೆ ನೀಡಿದಂತೆ ಪ್ರತಿ ಕಿಲೋಗೆ 13ರೂ.ಗೆ ಸಕ್ಕರೆ ಲಭ್ಯವಾಗಬಹುದೇ? ಎಂದು ಅವರನ್ನು ಕೇಳಿ, ಸಕ್ಕರೆ ಎಲ್ಲಿ ಹೋಯಿತು ಎಂದು ಅವರು ಸಾರ್ವಜನಿಕರಿಗೆ ಉತ್ತರಿಸಬೇಕು ಎಂದರು.

2019ರ ಚುನಾವಣೆಯಲ್ಲಿ ಗಾಂಧಿ ಅವರು 15 ವರ್ಷಗಳ ಕಾಲ ಪ್ರತಿನಿಧಿಸಿದ್ದ ಅಮೇಥಿ ಕ್ಷೇತ್ರವನ್ನು 52,000 ಮತಗಳಿಂದ ಕಳೆದುಕೊಂಡರು. ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಕೂಡ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಹುಲ್ ಗಾಂಧಿ ಪ್ರಸ್ತುತ ಕೇರಳದ ವಯನಾಡ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ.

2019 ರಲ್ಲಿ ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುವ ಬಗ್ಗೆ ಹಲವು ಬಾರಿ ಸುಳಿವು ನೀಡಿದ್ದರು. ಆದರೆ ಪ್ರಿಯಾಂಕಾ ಚುನಾವಣಾ ಕಣಕ್ಕೆ ಇಳಿಯಲಿಲ್ಲ ಮತ್ತು ಪಕ್ಷದ ಸೂಚನೆಯನ್ನು ಪಾಲಿಸಿದ್ದೇನೆ ಎಂದು ಹೇಳಿದರು.

2019ರಲ್ಲಿ ರಾಹುಲ್ ಗಾಂಧಿ ಅವರು ಅಮೇಥಿ ಮತ್ತು ವಯನಾಡ್ ಎರಡರಿಂದಲೂ ಸ್ಪರ್ಧಿಸಿದ್ದರು. ವಯನಾಡ್ ಸ್ಪರ್ಧೆಯು ದಕ್ಷಿಣ ಭಾರತದಲ್ಲಿ ಅವರ ಮೊದಲ ಪ್ರವೇಶವಾಗಿತ್ತು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ ರಾಹುಲ್ ಗಾಂಧಿ ಸೋಲು ಕಂಡರು ಆದರೆ ಅವರು ವಯನಾಡಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಮೋದಿ ಉಪನಾಮ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಆ ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತದೆಯೇ ಎಂಬುದು ಅನುಮಾನವಾಗಿತ್ತು. ರಾಹುಲ್ ಗಾಂಧಿ ಅವರ ದೋಷಾರೋಪಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದ್ದರಿಂದ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.

ಇದನ್ನೂ ಓದಿ: ನೆಹರು ಮ್ಯೂಸಿಯಂ ಮರುನಾಮಕರಣ: ಪ್ರಧಾನಿಗೆ ಪರೋಕ್ಷವಾಗಿ ಟೀಕಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...