Homeಮುಖಪುಟಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್

ಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಥಿಯಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ನೂತನ ಉತ್ತರ ಪ್ರದೇಶ ಮುಖ್ಯಸ್ಥ ಅಜಯ್ ರಾಯ್ ಶುಕ್ರವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿದ ಅಜಯ್ ರಾಯ್, ಅವರು ಪ್ರಿಯಾಂಕಾ ಗಾಂಧಿ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸುತ್ತಾರೆ. ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಬಯಸಿದರೆ, ಪ್ರತಿಯೊಬ್ಬ ಕಾರ್ಯಕರ್ತರು ಅವರ ಗೆಲುವಿಗೆ ಶ್ರಮಿಸುತ್ತಾರೆ ಎಂದಿದ್ದಾರೆ.

ಲೋಕಸಭೆ ಚುನಾವಣೆ 2024ಕ್ಕೆ ಇನ್ನೇನು ತಿಂಗಳುಗಳು ಬಾಕಿ ಇರುವಾಗ ಬ್ರಿಜ್ಲಾಲ್ ಖಾಬ್ರಿ ಬದಲಿಗೆ ಅಜಯ್ ರಾಯ್ ಅವರನ್ನು ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಕುರಿತು ಮಾತನಾಡಿದ ರಾಯ್, ”ಅವರು ಭರವಸೆ ನೀಡಿದಂತೆ ಪ್ರತಿ ಕಿಲೋಗೆ 13ರೂ.ಗೆ ಸಕ್ಕರೆ ಲಭ್ಯವಾಗಬಹುದೇ? ಎಂದು ಅವರನ್ನು ಕೇಳಿ, ಸಕ್ಕರೆ ಎಲ್ಲಿ ಹೋಯಿತು ಎಂದು ಅವರು ಸಾರ್ವಜನಿಕರಿಗೆ ಉತ್ತರಿಸಬೇಕು ಎಂದರು.

2019ರ ಚುನಾವಣೆಯಲ್ಲಿ ಗಾಂಧಿ ಅವರು 15 ವರ್ಷಗಳ ಕಾಲ ಪ್ರತಿನಿಧಿಸಿದ್ದ ಅಮೇಥಿ ಕ್ಷೇತ್ರವನ್ನು 52,000 ಮತಗಳಿಂದ ಕಳೆದುಕೊಂಡರು. ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿ ಕೂಡ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಹುಲ್ ಗಾಂಧಿ ಪ್ರಸ್ತುತ ಕೇರಳದ ವಯನಾಡ್ ಕ್ಷೇತ್ರದಿಂದ ಲೋಕಸಭಾ ಸಂಸದರಾಗಿದ್ದಾರೆ.

2019 ರಲ್ಲಿ ಪ್ರಿಯಾಂಕಾ ಗಾಂಧಿ ಅವರು ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸುವ ಬಗ್ಗೆ ಹಲವು ಬಾರಿ ಸುಳಿವು ನೀಡಿದ್ದರು. ಆದರೆ ಪ್ರಿಯಾಂಕಾ ಚುನಾವಣಾ ಕಣಕ್ಕೆ ಇಳಿಯಲಿಲ್ಲ ಮತ್ತು ಪಕ್ಷದ ಸೂಚನೆಯನ್ನು ಪಾಲಿಸಿದ್ದೇನೆ ಎಂದು ಹೇಳಿದರು.

2019ರಲ್ಲಿ ರಾಹುಲ್ ಗಾಂಧಿ ಅವರು ಅಮೇಥಿ ಮತ್ತು ವಯನಾಡ್ ಎರಡರಿಂದಲೂ ಸ್ಪರ್ಧಿಸಿದ್ದರು. ವಯನಾಡ್ ಸ್ಪರ್ಧೆಯು ದಕ್ಷಿಣ ಭಾರತದಲ್ಲಿ ಅವರ ಮೊದಲ ಪ್ರವೇಶವಾಗಿತ್ತು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ ರಾಹುಲ್ ಗಾಂಧಿ ಸೋಲು ಕಂಡರು ಆದರೆ ಅವರು ವಯನಾಡಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.

ಮೋದಿ ಉಪನಾಮ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದರು. ಆ ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತದೆಯೇ ಎಂಬುದು ಅನುಮಾನವಾಗಿತ್ತು. ರಾಹುಲ್ ಗಾಂಧಿ ಅವರ ದೋಷಾರೋಪಣೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದ್ದರಿಂದ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ.

ಇದನ್ನೂ ಓದಿ: ನೆಹರು ಮ್ಯೂಸಿಯಂ ಮರುನಾಮಕರಣ: ಪ್ರಧಾನಿಗೆ ಪರೋಕ್ಷವಾಗಿ ಟೀಕಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...