Homeಮುಖಪುಟಚೀನಾ+ಪಾಕಿಸ್ತಾನ+ಮಿ.56"= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ: ರಾಹುಲ್‌ ಗಾಂಧಿ

ಚೀನಾ+ಪಾಕಿಸ್ತಾನ+ಮಿ.56″= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ: ರಾಹುಲ್‌ ಗಾಂಧಿ

- Advertisement -
- Advertisement -

“ಚೀನಾ ತನ್ನ ಸೇನೆಯ ನಿಯೋಜನೆಯನ್ನು ಲಡಾಖ್‌‌ ಭಾಗದಲ್ಲಿ ಹೆಚ್ಚಿಸಿದೆ” ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್‌ ಮನೋಜ್‌ ಮುಕುಂದ್‌ ನರವನೆ ಹೇಳಿರುವುದು ಆತಂಕಕ್ಕೆ ಕಾರಣವಾಗಿದ್ದು, ಸರ್ಕಾರದ ವೈಫಲ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

‘ಚೀನಾ+ಪಾಕಿಸ್ತಾನ+ಮಿ.56 ಇಂಚು= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ’ ಎಂದು ಟ್ವೀಟ್‌ ಮಾಡಿರುವ ಅವರು, ಚುನಾವಣಾ ರ್‍ಯಾಲಿ ವೇಳೆ 56 ಇಂಚಿನ ಎದೆಯುಳ್ಳ ಮೋದಿಯವರು ‘ಭಾರತವನ್ನು ಎಲ್ಲ ದಾಳಿಗಳಿಂದ ಮುಕ್ತ ಮಾಡುತ್ತೇನೆ’ ಎಂದಿದ್ದನ್ನು ಉಲ್ಲೇಖಿಸಿದ್ದಾರೆ.

“ಚೀನಾ ತನ್ನ ಸೇನೆಯ ನಿಯೋಜನೆಯನ್ನು ಲಡಾಖ್‌‌ ಭಾಗದಲ್ಲಿ ಹೆಚ್ಚಿಸಿದೆ” ಎಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್‌ ಮನೋಜ್‌ ಮುಕುಂದ್‌ ನರವನೆ ಅವರು ಶನಿವಾರ ಹೇಳಿದ್ದರು.

ಲಡಾಖ್‌ ಬಿಕ್ಕಟ್ಟಿನ ಸಂಬಂಧ ಮುಂದಿನ ವಾರ 13ನೇ ಸುತ್ತಿನ ಮಾತುಕತೆಯನ್ನು ಭಾರತ ನಿರೀಕ್ಷಿಸಿದ್ದು, ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥರು ಹೇಳಿಕೆ ನೀಡಿದ್ದರು. “ಕಳೆದ ಆರು ತಿಂಗಳಿಂದಲೂ ಪರಿಸ್ಥಿತಿ ಯಥಾಸ್ಥಿತಿಯಲ್ಲಿದೆ” ಎಂದು ಅವರು ಕಳವಳ ವ್ಯಕ್ತಪಡಿಸಿದ್ದರು.

ಗಣನೀಯ ಸಂಖ್ಯೆಯಲ್ಲಿ ಚೀನಾ ಸೈನ್ಯವು ಪೂರ್ವ ಲಡಾಖ್‌ ಮತ್ತು ಉತ್ತರದ  ಫ್ರಂಟ್‌ನಾದ್ಯಂತ ಹಬ್ಬಿದೆ. ಖಂಡಿತವಾಗಿಯೂ ಮುಂದಿನ ಪ್ರದೇಶಗಳಲ್ಲಿ ಅವರ ನಿಯೋಜನೆಯಲ್ಲಿ ಹೆಚ್ಚಳ ಕಂಡುಬಂದಿದೆ. ಇದು ನಮಗೆ ಕಾಳಜಿಯ ವಿಷಯವಾಗಿದೆ ಎಂದು ಅವರು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿದ್ದರು.

“ನಾವು ಅವರ ಎಲ್ಲ ಬೆಳವಣಿಗೆಗಳನ್ನು ನಿಯಂತ್ರಿಸುತ್ತಿದ್ದೇವೆ. ಈ ಸಮಯದಲ್ಲಿ ನಾವು ಯಾವುದೇ ಘಟನೆಯನ್ನು ಎದುರಿಸಲು ಸಜ್ಜಾಗಿದ್ದೇವೆ” ಎಂದು ಅವರು ತಿಳಿಸಿದ್ದಾರೆ. ಯಾವುದೇ ಪ್ರದೇಶದಲ್ಲಿ ಆಕ್ರಮಣಶೀಲತೆಯನ್ನು ತೋರಿಸಬಹುದು ಎಂದಿದ್ದರು.

“ಎಲ್ಲಾ ಘರ್ಷಣೆಯ ಅಂಶಗಳು ಪರಿಹರಿಸಲ್ಪಡುತ್ತವೆ. ನಮ್ಮ ಭಿನ್ನಾಭಿಪ್ರಾಯಗಳನ್ನು ನಾವು ಸಂವಾದದ ಮೂಲಕ ಪರಿಹರಿಸಿಕೊಳ್ಳಬಹುದು ಎಂದು ನಂಬಿದ್ದೇನೆ. ನಮ್ಮ ಉದ್ದೇಶಿತ ಗುರಿಯನ್ನು ಮುಟ್ಟುತ್ತೇವೆಂದು ಭಾವಿಸುತ್ತೇನೆ. ಅಕ್ಟೋಬರ್ ಎರಡನೇ ವಾರದಲ್ಲಿ 13ನೇ ಸುತ್ತಿನ ಮಾತುಕತೆ ನಡೆಯಲಿದೆ” ಎಂದು ತಿಳಿಸಿದ್ದರು.

ಈ ಹಿನ್ನೆಲೆಯಲ್ಲಿ ಸಂಸದ ರಾಹುಲ್‌ ಗಾಂಧಿಯವರು ನರೇಂದ್ರ ಮೋದಿ ನೇತೃತ್ವದ ಮೋದಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್‌ ಗಾಂಧಿ ವಿರುದ್ದ ಅವಹೇಳನಕಾರಿ ಪದ ಬಳಕೆ: ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ‘ಟೈಮ್ಸ್‌ ನೌ’ ಪತ್ರಕರ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...