Homeಮುಖಪುಟರಾಹುಲ್ ಗಾಂಧಿ ಕಾಂಗ್ರೆಸ್ ಅನ್ನು ‘ಮೃದು ನಕ್ಸಲಿಸಂ’ ಕಡೆಗೆ ತಿರುಗಿಸಿದ್ದಾರೆ: ಹಿಮಂತ ಬಿಸ್ವಾ ಶರ್ಮಾ

ರಾಹುಲ್ ಗಾಂಧಿ ಕಾಂಗ್ರೆಸ್ ಅನ್ನು ‘ಮೃದು ನಕ್ಸಲಿಸಂ’ ಕಡೆಗೆ ತಿರುಗಿಸಿದ್ದಾರೆ: ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

‘ಕಲ್ಲಿದ್ದಲು ಒಲೆ’ ವಿವಾದದ ನಂತರ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಸಿದ್ಧಾಂತಗಳಿಂದ ಪಕ್ಷವನ್ನು ಮೃದು ನಕ್ಸಲಿಸಂ ಕಡೆಗೆ ತಿರುಗಿಸಿದ್ದಾರೆ’ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ತಮ್ಮ ವಿಡಿಯೋ ಪೋಸ್ಟ್ ಮಾಡಿರುವ ಶರ್ಮಾ, ‘ಕಾಂಗ್ರೆಸ್ ಪಕ್ಷದ ಮೂಲ ತತ್ವವನ್ನು ಮಹಾತ್ಮ ಗಾಂಧಿ ಕಲ್ಪಿಸಿಕೊಂಡರು, ಪ್ರಸ್ತುತ ಅದು ನಗರ ನಕ್ಸಲ್ ಪ್ರಾಬಲ್ಯದ ನಾಯಕತ್ವದಿಂದ ತನ್ನ ಪ್ರಭಾವ ಕಳೆದುಕೊಂಡಿದೆ’ ಎಂದು ಹೇಳಿಕೆ ನೀಡಿದ್ದಾರೆ.

‘ಕಾಂಗ್ರೆಸ್ ನ ರಾಜಕೀಯ ಮೃದು ನಕ್ಸಲೀಯರದ್ದಾಗಿದೆ. ಅವರ ಘೋಷಣೆಗಳು ಗಾಂಧಿ ತತ್ವಗಳನ್ನು ಪ್ರತಿಬಿಂಬಿಸುವುದಿಲ್ಲ. ನಾನು 22 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರೂ ಅಂತಹ ಘೋಷಣೆಗಳು ಇರಲಿಲ್ಲ. ಅವರ ಘೋಷಣೆಗಳು ಮೃದು ಮತ್ತು ವಿಭಿನ್ನ, ಅವರು ಕಾಂಗ್ರೆಸ್‌ನ ಆತ್ಮವನ್ನೂ ಕೊಂದಿರುವುದನ್ನು ನಾನು ನೋಡಿದ್ದೇನೆ’ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ, ಅಸ್ಸಾಂನ ರಾಜ್ಯಸಭಾ ಸಂಸದೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಪಬಿತ್ರಾ ಮಾರ್ಗರಿಟಾ ಅವರು ಮಾತನಾಡಿ, ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಮೂಲಕ ಅಸ್ಸಾಂನಲ್ಲಿ ತಮ್ಮ ಸಂಘಟನಾ ಶಕ್ತಿಯನ್ನು ಸಾಬೀತುಪಡಿಸಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು. ಅವರು ಪ್ರಧಾನಿಯಾಗಿದ್ದಾರೆ; ಇಂಡಿಯಾ ಮೈತ್ರಿಕೂಟದ ಸಂಭಾವ್ಯ ಅಭ್ಯರ್ಥಿಯ ಸಭೆಯಲ್ಲಿ ಕೇವಲ 500 ರಿಂದ 600 ಜನರು ಮಾತ್ರ ಜಮಾಯಿಸಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

‘ಮಾಧ್ಯಮಗಳ ಗಮನ ಸೆಳೆಯುವುದಕ್ಕಾಗಿ ಅವರು ಗುವಾಹಟಿಯಲ್ಲಿ ಜನನಿಬಿಡ ಪ್ರದೇಶಗಳಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಅವರು ಮಾರ್ಗಗಳನ್ನು ತಿರುಗಿಸಿ ಆಸ್ಪತ್ರೆಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಹೊಂದಿರುವ ಗುವಾಹಟಿ ನಗರವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಮಾಧ್ಯಮದವರ ಗಮನ ಸೆಳೆಯಲು, ಅವರು ತಮ್ಮ ಯಾತ್ರೆಗೆ ಜನರಿರುವ ರಸ್ತೆಯನ್ನು ಆರಿಸಿಕೊಂಡರು, ಅವರನ್ನು ತಡೆದ ಪೊಲೀಸರೊಂದಿಗೆ ಜಗಳವಾಡಿದರು’ ಎಂದು ಅವರು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವಿನ ಮುಖಾಮುಖಿ ಗುವಾಹಟಿ ನಗರ ವ್ಯಾಪ್ತಿಯಲ್ಲಿ ಅಸ್ತವ್ಯಸ್ತವಾಗಿರುವ ದೃಶ್ಯಗಳಿಗೆ ಕಾರಣವಾಯಿತು. ಘರ್ಷಣೆಯ ನಂತರ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ಮೇಲೆ ಗಲಭೆ, ಕಾನೂನುಬಾಹಿರ ಸಭೆ ಮತ್ತು ಕ್ರಿಮಿನಲ್ ಪಿತೂರಿ ಮುಂತಾದ ಆರೋಪಗಳನ್ನು ಹೊರಿಸಲಾಗಿದೆ. ರಾಜ್ಯದ ಸಿಐಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಕನಿಷ್ಠ ಐದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ ಮತ್ತು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾರ್ಗರಿಟಾ ಆರೋಪಿಸಿದ್ದಾರೆ.

‘ಇದು ಭಾರತ್ ಜೋಡೋ ನ್ಯಾಯ್ ಯಾತ್ರೆ ಅಲ್ಲ, ಇದು ‘ಕಾನೂನು ಮತ್ತು ಸುವ್ಯವಸ್ಥೆ ತೋಡೋ’ ಯಾತ್ರೆ, ಅಸ್ಸಾಂನಲ್ಲಿ ‘ಬ್ಯಾರಿಕೇಡ್ ಟೋಡೋ ಯಾತ್ರೆ’. ನಕ್ಸಲೀಯ ಶೈಲಿಯಲ್ಲಿ ರಾಹುಲ್ ಗಾಂಧಿ ಜನರನ್ನು ಪ್ರಚೋದಿಸಿದರು’ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ; ಪತ್ರಕರ್ತನ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ; ಸಹಾಯಕ್ಕೆ ಬಾರದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...