Homeಮುಖಪುಟರಾಹುಲ್ ಗಾಂಧಿ ಕಾಂಗ್ರೆಸ್ ಅನ್ನು ‘ಮೃದು ನಕ್ಸಲಿಸಂ’ ಕಡೆಗೆ ತಿರುಗಿಸಿದ್ದಾರೆ: ಹಿಮಂತ ಬಿಸ್ವಾ ಶರ್ಮಾ

ರಾಹುಲ್ ಗಾಂಧಿ ಕಾಂಗ್ರೆಸ್ ಅನ್ನು ‘ಮೃದು ನಕ್ಸಲಿಸಂ’ ಕಡೆಗೆ ತಿರುಗಿಸಿದ್ದಾರೆ: ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

‘ಕಲ್ಲಿದ್ದಲು ಒಲೆ’ ವಿವಾದದ ನಂತರ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಸಿದ್ಧಾಂತಗಳಿಂದ ಪಕ್ಷವನ್ನು ಮೃದು ನಕ್ಸಲಿಸಂ ಕಡೆಗೆ ತಿರುಗಿಸಿದ್ದಾರೆ’ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ತಮ್ಮ ವಿಡಿಯೋ ಪೋಸ್ಟ್ ಮಾಡಿರುವ ಶರ್ಮಾ, ‘ಕಾಂಗ್ರೆಸ್ ಪಕ್ಷದ ಮೂಲ ತತ್ವವನ್ನು ಮಹಾತ್ಮ ಗಾಂಧಿ ಕಲ್ಪಿಸಿಕೊಂಡರು, ಪ್ರಸ್ತುತ ಅದು ನಗರ ನಕ್ಸಲ್ ಪ್ರಾಬಲ್ಯದ ನಾಯಕತ್ವದಿಂದ ತನ್ನ ಪ್ರಭಾವ ಕಳೆದುಕೊಂಡಿದೆ’ ಎಂದು ಹೇಳಿಕೆ ನೀಡಿದ್ದಾರೆ.

‘ಕಾಂಗ್ರೆಸ್ ನ ರಾಜಕೀಯ ಮೃದು ನಕ್ಸಲೀಯರದ್ದಾಗಿದೆ. ಅವರ ಘೋಷಣೆಗಳು ಗಾಂಧಿ ತತ್ವಗಳನ್ನು ಪ್ರತಿಬಿಂಬಿಸುವುದಿಲ್ಲ. ನಾನು 22 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದರೂ ಅಂತಹ ಘೋಷಣೆಗಳು ಇರಲಿಲ್ಲ. ಅವರ ಘೋಷಣೆಗಳು ಮೃದು ಮತ್ತು ವಿಭಿನ್ನ, ಅವರು ಕಾಂಗ್ರೆಸ್‌ನ ಆತ್ಮವನ್ನೂ ಕೊಂದಿರುವುದನ್ನು ನಾನು ನೋಡಿದ್ದೇನೆ’ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ, ಅಸ್ಸಾಂನ ರಾಜ್ಯಸಭಾ ಸಂಸದೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಪಬಿತ್ರಾ ಮಾರ್ಗರಿಟಾ ಅವರು ಮಾತನಾಡಿ, ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಮೂಲಕ ಅಸ್ಸಾಂನಲ್ಲಿ ತಮ್ಮ ಸಂಘಟನಾ ಶಕ್ತಿಯನ್ನು ಸಾಬೀತುಪಡಿಸಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳು. ಅವರು ಪ್ರಧಾನಿಯಾಗಿದ್ದಾರೆ; ಇಂಡಿಯಾ ಮೈತ್ರಿಕೂಟದ ಸಂಭಾವ್ಯ ಅಭ್ಯರ್ಥಿಯ ಸಭೆಯಲ್ಲಿ ಕೇವಲ 500 ರಿಂದ 600 ಜನರು ಮಾತ್ರ ಜಮಾಯಿಸಿದ್ದಾರೆ’ ಎಂದು ಲೇವಡಿ ಮಾಡಿದ್ದಾರೆ.

‘ಮಾಧ್ಯಮಗಳ ಗಮನ ಸೆಳೆಯುವುದಕ್ಕಾಗಿ ಅವರು ಗುವಾಹಟಿಯಲ್ಲಿ ಜನನಿಬಿಡ ಪ್ರದೇಶಗಳಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಅವರು ಮಾರ್ಗಗಳನ್ನು ತಿರುಗಿಸಿ ಆಸ್ಪತ್ರೆಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಹೊಂದಿರುವ ಗುವಾಹಟಿ ನಗರವನ್ನು ಪ್ರವೇಶಿಸಲು ಪ್ರಯತ್ನಿಸಿದ್ದು ಮಾಧ್ಯಮದವರ ಗಮನ ಸೆಳೆಯಲು, ಅವರು ತಮ್ಮ ಯಾತ್ರೆಗೆ ಜನರಿರುವ ರಸ್ತೆಯನ್ನು ಆರಿಸಿಕೊಂಡರು, ಅವರನ್ನು ತಡೆದ ಪೊಲೀಸರೊಂದಿಗೆ ಜಗಳವಾಡಿದರು’ ಎಂದು ಅವರು ಹೇಳಿದರು.

ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವಿನ ಮುಖಾಮುಖಿ ಗುವಾಹಟಿ ನಗರ ವ್ಯಾಪ್ತಿಯಲ್ಲಿ ಅಸ್ತವ್ಯಸ್ತವಾಗಿರುವ ದೃಶ್ಯಗಳಿಗೆ ಕಾರಣವಾಯಿತು. ಘರ್ಷಣೆಯ ನಂತರ ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ಮೇಲೆ ಗಲಭೆ, ಕಾನೂನುಬಾಹಿರ ಸಭೆ ಮತ್ತು ಕ್ರಿಮಿನಲ್ ಪಿತೂರಿ ಮುಂತಾದ ಆರೋಪಗಳನ್ನು ಹೊರಿಸಲಾಗಿದೆ. ರಾಜ್ಯದ ಸಿಐಡಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಕನಿಷ್ಠ ಐದು ಪೊಲೀಸರ ಮೇಲೆ ದಾಳಿ ಮಾಡಿದ್ದಾರೆ ಮತ್ತು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮಾರ್ಗರಿಟಾ ಆರೋಪಿಸಿದ್ದಾರೆ.

‘ಇದು ಭಾರತ್ ಜೋಡೋ ನ್ಯಾಯ್ ಯಾತ್ರೆ ಅಲ್ಲ, ಇದು ‘ಕಾನೂನು ಮತ್ತು ಸುವ್ಯವಸ್ಥೆ ತೋಡೋ’ ಯಾತ್ರೆ, ಅಸ್ಸಾಂನಲ್ಲಿ ‘ಬ್ಯಾರಿಕೇಡ್ ಟೋಡೋ ಯಾತ್ರೆ’. ನಕ್ಸಲೀಯ ಶೈಲಿಯಲ್ಲಿ ರಾಹುಲ್ ಗಾಂಧಿ ಜನರನ್ನು ಪ್ರಚೋದಿಸಿದರು’ ಎಂದು ಅವರು ಆರೋಪಿಸಿದರು.

ಇದನ್ನೂ ಓದಿ; ಪತ್ರಕರ್ತನ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ; ಸಹಾಯಕ್ಕೆ ಬಾರದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...