Homeಮುಖಪುಟರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

- Advertisement -
- Advertisement -

ರಾಹುಲ್ ಗಾಂಧಿ ‘ಮ್ಯಾನ್ ಆಫ್ ದಿ ಮ್ಯಾಚ್’ ಆಗಿದ್ದಾರೆ. ಅವರು ಸದನದಲ್ಲಿ ವಿರೋಧ ಪಕ್ಷದ ನಾಯಕನಾಗಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್ ಆಗ್ರಹಿಸಿದ್ದು, ಇದೇ ರೀತಿಯ ಬೇಡಿಕೆಯನ್ನು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಸೇರಿ ಹಲವು ಕಾಂಗ್ರೆಸ್‌ ನಾಯಕರು ಮುಂದಿಟ್ಟಿದ್ದಾರೆ.

ಇದಲ್ಲದೆ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಸಿಡಬ್ಲ್ಯುಸಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಶಿ ತರೂರ್, ಈ ಜನಾದೇಶವು ಬಿಜೆಪಿಯ ದುರಹಂಕಾರ ಮತ್ತು ವರ್ತನೆಗೆ ಮತದಾರರು ನೀಡಿರುವ ಜನಾದೇಶದ ಸಂದೇಶವಾಗಿದೆ. ಸರ್ಕಾರವನ್ನು ನಡೆಸುವಾಗ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಮೋದಿ ಮತ್ತು ಅಮಿತ್ ಶಾ ಅವರಿಗೆ ಇದು ಒಂದು ಸವಾಲಾಗಿದೆ ಮತ್ತು ಇದು ಅವರ ಕಾರ್ಯಚಟುವಟಿಕೆಯನ್ನು ಬದಲಾಯಿಸುವ ಮತ್ತು ಹೆಚ್ಚು ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಬಾರಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕೆಲವು ವಿಷಯಗಳಲ್ಲಿ ‘ಮಜ್ಬೂರ್ ಸರ್ಕಾರ’ (ಅಸಹಾಯಕ ಸರ್ಕಾರ) ಎಂದು ಸಾಬೀತುಪಡಿಸಬಹುದು, ಏಕೆಂದರೆ ಎನ್‌ಡಿಎ ಭಾಗವಾಗಿರುವ ಎಲ್ಲಾ ಪಕ್ಷಗಳು ಎಲ್ಲವನ್ನೂ ಒಪ್ಪಿಕೊಳ್ಳಬೇಕಾಗುತ್ತದೆ ಹೇಳಿದ್ದಾರೆ.

ಈಗಾಗಲೇ ಅಗ್ನಿವೀರ್ ಯೋಜನೆಯ ಬಗ್ಗೆ ಒಂದು ಪಕ್ಷವು ಪ್ರಶ್ನೆಗಳನ್ನು ಎತ್ತಿದೆ, ಅದನ್ನು ಪರಿಶೀಲಿಸಬೇಕಾಗಿದೆ. ಆಂದ್ರಕ್ಕೆ ಬಿಜೆಪಿ ಸರ್ಕಾರವು ಈವರೆಗೆ ನೀಡಲು ನಿರಾಕರಿಸಿದ್ದ ವಿಶೇಷ ವರ್ಗದ ಸ್ಥಾನಮಾನಕ್ಕೆ ಬೇಡಿಕೆ ಕೇಳಿ ಬಂದಿದೆ, ಅದನ್ನು ಮರುಪರಿಶೀಲಿಸಬೇಕಾಗಿದೆ ಎಂದು ಅವರು ಹೇಳಿದರು.

ಮೋದಿ ಸರಕಾರವು ಕಳೆದ 10 ವರ್ಷಗಳಲ್ಲಿ ಸಂಸತ್ತನ್ನು ಸೂಚನಾ ಫಲಕದಂತೆ ಪರಿಗಣಿಸಿದೆ. ಈಗ 230ಕ್ಕೂ ಹೆಚ್ಚು ಸಂಸದರ ಪ್ರಬಲ ವಿರೋಧವಿರುವ ಕಾರಣ ಈಗ ಅದು ಸಾಧ್ಯವಿಲ್ಲ. ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆ ವಹಿಸುವುದು ಸೂಕ್ತವೆನಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಆಡಳಿತ ಪಕ್ಷವನ್ನು ಎದುರಿಸಲು ಹೆಚ್ಚಿನ ಸಂಖ್ಯಾ ಬಲ ಹೊಂದಿರುವ ಪಕ್ಷದ ಜನಪ್ರಿಯ ನಾಯಕ ವಿಪಕ್ಷದ ಸ್ಥಾನ ವಹಿಸುವುದು ಹೆಚ್ಚು ಸೂಕ್ತವೆನಿಸಲಿದೆ ಎಂದು  ಶಶಿ ತರೂರ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಹುಲ್ ಗಾಂಧಿ ಅವರು ಪ್ರತಿಪಕ್ಷದ ಪ್ರಮುಖ ನಾಯಕರಾಗಿ ಹೊರಹೊಮ್ಮಬೇಕು ಎಂದು ಇಡೀ ದೇಶ ಒತ್ತಾಯಿಸುತ್ತದೆ. ಈ ಸ್ಥಾನವು ಅವರಿಗೆ ಸೂಕ್ತವಾಗಿದೆ ಎಂದು ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.

ಲುಧಿಯಾನದಿಂದ ಆಯ್ಕೆಯಾಗಿರುವ ಸಂಸದ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಅಂತಿಮ ನಿರ್ಧಾರವು ಪಕ್ಷದ ನಾಯಕತ್ವದ ಮೇಲಿದೆ ಮತ್ತು ಈ ಪಾತ್ರವನ್ನು ವಹಿಸಬೇಕೇ ಎಂಬುದನ್ನು ನಿರ್ಧರಿಸುವುದು ರಾಹುಲ್ ಗಾಂಧಿ ಅವರದ್ದಾಗಿದೆ. ರಾಹುಲ್ ಗಾಂಧಿ ಮುಂದೆ ಬಂದು ಎಲ್ಲವನ್ನೂ ನಿಭಾಯಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಆದರೆ ನಾಯಕತ್ವದ ಅಂತಿಮ ನಿರ್ಧಾರ ರಾಹುಲ್ ಗಾಂಧಿ ಅವರೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಬೇಕು. ರಾಹುಲ್ ಗಾಂಧಿ ಮಹಿಳೆಯರು ಮತ್ತು ನಿರುದ್ಯೋಗಿಗಳ ಪರ ಹೋರಾಟ ನಡೆಸುತ್ತಿದ್ದಾರೆ. ಇದು 140 ಕೋಟಿ ಭಾರತೀಯರ ಬೇಡಿಕೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.

ಗುರುದಾಸ್‌ಪುರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಸಂಸದ ಸುಖ್‌ಜಿಂದರ್ ಸಿಂಗ್ ರಾಂಧವಾ ಈ ಬಗ್ಗೆ ಮಾತನಾಡಿದ್ದು, ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಪ್ರಧಾನಿಗೆ ಪ್ರತ್ಯುತ್ತರ ನೀಡಬಲ್ಲವರು ಮತ್ತು ಆದ್ದರಿಂದ ಅವರು ವಿಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...