Homeಮುಖಪುಟರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

ರಾಹುಲ್ ಗಾಂಧಿಗೆ ಲೋಕಸಭೆಯ ವಿಪಕ್ಷ ನಾಯಕನ ಪಟ್ಟ?

- Advertisement -
- Advertisement -

ರಾಹುಲ್ ಗಾಂಧಿ ‘ಮ್ಯಾನ್ ಆಫ್ ದಿ ಮ್ಯಾಚ್’ ಆಗಿದ್ದಾರೆ. ಅವರು ಸದನದಲ್ಲಿ ವಿರೋಧ ಪಕ್ಷದ ನಾಯಕನಾಗಬೇಕು ಎಂದು ಕಾಂಗ್ರೆಸ್‌ ಹಿರಿಯ ನಾಯಕ ಶಶಿ ತರೂರ್ ಆಗ್ರಹಿಸಿದ್ದು, ಇದೇ ರೀತಿಯ ಬೇಡಿಕೆಯನ್ನು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಸೇರಿ ಹಲವು ಕಾಂಗ್ರೆಸ್‌ ನಾಯಕರು ಮುಂದಿಟ್ಟಿದ್ದಾರೆ.

ಇದಲ್ಲದೆ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಸಿಡಬ್ಲ್ಯುಸಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಶಿ ತರೂರ್, ಈ ಜನಾದೇಶವು ಬಿಜೆಪಿಯ ದುರಹಂಕಾರ ಮತ್ತು ವರ್ತನೆಗೆ ಮತದಾರರು ನೀಡಿರುವ ಜನಾದೇಶದ ಸಂದೇಶವಾಗಿದೆ. ಸರ್ಕಾರವನ್ನು ನಡೆಸುವಾಗ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಮೋದಿ ಮತ್ತು ಅಮಿತ್ ಶಾ ಅವರಿಗೆ ಇದು ಒಂದು ಸವಾಲಾಗಿದೆ ಮತ್ತು ಇದು ಅವರ ಕಾರ್ಯಚಟುವಟಿಕೆಯನ್ನು ಬದಲಾಯಿಸುವ ಮತ್ತು ಹೆಚ್ಚು ಹೊಂದಿಕೊಳ್ಳುವ ಸಾಮರ್ಥ್ಯವನ್ನು ಪರೀಕ್ಷಿಸಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಬಾರಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕೆಲವು ವಿಷಯಗಳಲ್ಲಿ ‘ಮಜ್ಬೂರ್ ಸರ್ಕಾರ’ (ಅಸಹಾಯಕ ಸರ್ಕಾರ) ಎಂದು ಸಾಬೀತುಪಡಿಸಬಹುದು, ಏಕೆಂದರೆ ಎನ್‌ಡಿಎ ಭಾಗವಾಗಿರುವ ಎಲ್ಲಾ ಪಕ್ಷಗಳು ಎಲ್ಲವನ್ನೂ ಒಪ್ಪಿಕೊಳ್ಳಬೇಕಾಗುತ್ತದೆ ಹೇಳಿದ್ದಾರೆ.

ಈಗಾಗಲೇ ಅಗ್ನಿವೀರ್ ಯೋಜನೆಯ ಬಗ್ಗೆ ಒಂದು ಪಕ್ಷವು ಪ್ರಶ್ನೆಗಳನ್ನು ಎತ್ತಿದೆ, ಅದನ್ನು ಪರಿಶೀಲಿಸಬೇಕಾಗಿದೆ. ಆಂದ್ರಕ್ಕೆ ಬಿಜೆಪಿ ಸರ್ಕಾರವು ಈವರೆಗೆ ನೀಡಲು ನಿರಾಕರಿಸಿದ್ದ ವಿಶೇಷ ವರ್ಗದ ಸ್ಥಾನಮಾನಕ್ಕೆ ಬೇಡಿಕೆ ಕೇಳಿ ಬಂದಿದೆ, ಅದನ್ನು ಮರುಪರಿಶೀಲಿಸಬೇಕಾಗಿದೆ ಎಂದು ಅವರು ಹೇಳಿದರು.

ಮೋದಿ ಸರಕಾರವು ಕಳೆದ 10 ವರ್ಷಗಳಲ್ಲಿ ಸಂಸತ್ತನ್ನು ಸೂಚನಾ ಫಲಕದಂತೆ ಪರಿಗಣಿಸಿದೆ. ಈಗ 230ಕ್ಕೂ ಹೆಚ್ಚು ಸಂಸದರ ಪ್ರಬಲ ವಿರೋಧವಿರುವ ಕಾರಣ ಈಗ ಅದು ಸಾಧ್ಯವಿಲ್ಲ. ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆ ವಹಿಸುವುದು ಸೂಕ್ತವೆನಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಆಡಳಿತ ಪಕ್ಷವನ್ನು ಎದುರಿಸಲು ಹೆಚ್ಚಿನ ಸಂಖ್ಯಾ ಬಲ ಹೊಂದಿರುವ ಪಕ್ಷದ ಜನಪ್ರಿಯ ನಾಯಕ ವಿಪಕ್ಷದ ಸ್ಥಾನ ವಹಿಸುವುದು ಹೆಚ್ಚು ಸೂಕ್ತವೆನಿಸಲಿದೆ ಎಂದು  ಶಶಿ ತರೂರ್‌ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಬೇಡಿಕೆಯನ್ನು ವ್ಯಕ್ತಪಡಿಸಿದ್ದಾರೆ.

ಎಲ್ಲವನ್ನೂ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ರಾಹುಲ್ ಗಾಂಧಿ ಅವರು ಪ್ರತಿಪಕ್ಷದ ಪ್ರಮುಖ ನಾಯಕರಾಗಿ ಹೊರಹೊಮ್ಮಬೇಕು ಎಂದು ಇಡೀ ದೇಶ ಒತ್ತಾಯಿಸುತ್ತದೆ. ಈ ಸ್ಥಾನವು ಅವರಿಗೆ ಸೂಕ್ತವಾಗಿದೆ ಎಂದು ಪ್ರತಾಪ್ ಸಿಂಗ್ ಬಾಜ್ವಾ ಹೇಳಿದ್ದಾರೆ.

ಲುಧಿಯಾನದಿಂದ ಆಯ್ಕೆಯಾಗಿರುವ ಸಂಸದ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಅಂತಿಮ ನಿರ್ಧಾರವು ಪಕ್ಷದ ನಾಯಕತ್ವದ ಮೇಲಿದೆ ಮತ್ತು ಈ ಪಾತ್ರವನ್ನು ವಹಿಸಬೇಕೇ ಎಂಬುದನ್ನು ನಿರ್ಧರಿಸುವುದು ರಾಹುಲ್ ಗಾಂಧಿ ಅವರದ್ದಾಗಿದೆ. ರಾಹುಲ್ ಗಾಂಧಿ ಮುಂದೆ ಬಂದು ಎಲ್ಲವನ್ನೂ ನಿಭಾಯಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಆದರೆ ನಾಯಕತ್ವದ ಅಂತಿಮ ನಿರ್ಧಾರ ರಾಹುಲ್ ಗಾಂಧಿ ಅವರೇ ನಿರ್ಧರಿಸಬೇಕು ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಬೇಕು. ರಾಹುಲ್ ಗಾಂಧಿ ಮಹಿಳೆಯರು ಮತ್ತು ನಿರುದ್ಯೋಗಿಗಳ ಪರ ಹೋರಾಟ ನಡೆಸುತ್ತಿದ್ದಾರೆ. ಇದು 140 ಕೋಟಿ ಭಾರತೀಯರ ಬೇಡಿಕೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.

ಗುರುದಾಸ್‌ಪುರದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾಂಗ್ರೆಸ್ ಸಂಸದ ಸುಖ್‌ಜಿಂದರ್ ಸಿಂಗ್ ರಾಂಧವಾ ಈ ಬಗ್ಗೆ ಮಾತನಾಡಿದ್ದು, ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಪ್ರಧಾನಿಗೆ ಪ್ರತ್ಯುತ್ತರ ನೀಡಬಲ್ಲವರು ಮತ್ತು ಆದ್ದರಿಂದ ಅವರು ವಿಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...