Homeಮುಖಪುಟಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

ಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

ಭಾರತದಲ್ಲಿ ರಾಜಕೀಯವು ಹೋರಾಟವು ಒಂದು “ಮಹಾತ್ಮ ಗಾಂಧಿಯವರ ದೃಷ್ಟಿಕೋನ” ಮತ್ತು ಅವರ ಹಂತಕ “ನಾಥುರಾಮ್ ಗೋಡ್ಸೆ ಅವರ ದೃಷ್ಟಿಕೋನದ” ನಡುವೆ  ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಪ್ರಸ್ತುತ ಯುರೋಪ್‌ ರಾಷ್ಟ್ರಗಳ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ, ದೇಶದಲ್ಲಿ ಒಡಕು ಮೂಡಿಸುತ್ತಿದ್ದಾರೆ ಮತ್ತು ಬಂಡವಾಳಶಾಹಿ ಹಿತಾಸಕ್ತಿಗಳಿಗೆ ಆಶ್ರಯ ನೀಡುತ್ತಿದ್ದಾರೆಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೆಪ್ಟೆಂಬರ್ 8 ರಂದು ಬ್ರಸೆಲ್ಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಯುರೋಪಿಯನ್ ಸಂಸದರೊಂದಿಗಿನ ತಮ್ಮ ಸಭೆಯ ಕುರಿತು ಮಾಹಿತಿ ನೀಡಿದ್ದು, ಸಭೆಯಲ್ಲಿ ಭಾರತದ ಪ್ರಜಾಪ್ರಭುತ್ವವು ಪ್ರಸ್ತುತ ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲಾಗಿದೆ . ಭಾರತ ಎದುರಿಸುತ್ತಿರುವ ಆರ್ಥಿಕ ಸವಾಲುಗಳು, ಇತರ ಸವಾಲುಗಳು, ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ಸಾಮಾನ್ಯ ರೀತಿಯ ದಾಳಿ ಬಗ್ಗೆ ಅವರಿಗೆ ಅರಿವು ನೀಡಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆದಿದೆ  ಮತ್ತು  ಅಲ್ಪಸಂಖ್ಯಾತ , ದಲಿತ ಸಮುದಾಯಗಳು, ಬುಡಕಟ್ಟು, ಕೆಳ ಜಾತಿಯ ಸಮುದಾಯಗಳು ದಾಳಿಗೆ ಒಳಗಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಮ್ಮ ದೇಶದ ಸ್ವರೂಪವನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನದಲ್ಲಿ ನಮ್ಮ ದೇಶವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ ಮತ್ತು ನಮ್ಮ ಒಕ್ಕೂಟದ ಅತ್ಯಂತ ಮುಖ್ಯ ಅಂಶವೆಂದರೆ ನಮ್ಮ ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯಾಗಿದೆ. ಆದರೆ ಈಗ ಪರ್ಯಾಯ ದೃಷ್ಟಿ ಇದೆ, ಅದು ಬಿಜೆಪಿ ದೃಷ್ಟಿಕೋನವಾಗಿದೆ, ಇದು ಅಧಿಕಾರವನ್ನು ಕೇಂದ್ರೀಕರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪರ್ಯಾಯ ದೃಷ್ಟಿ ಕೋನವು  ಸಂಪತ್ತು ಕೇಂದ್ರೀಕೃತವಾಗಬೇಕು ಮತ್ತು ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯನ್ನು ದಮನ ಮಾಡಬೇಕು ಎಂದು ಹೇಳುತ್ತದೆ. ಭಾರತದಲ್ಲಿರುವುದು ಎರಡು ದೃಷ್ಟಿಕೋನಗಳ ನಡುವಿನ ಹೋರಾಟವಾಗಿದೆ. ಒಂದು ಮಹಾತ್ಮಾ ಗಾಂಧಿಯವರ ದೃಷ್ಟಿ ಮತ್ತು ಇನ್ನೊಂದು ನಾಥೂರಾಂ ಗೋಡ್ಸೆ ಅವರ ದೃಷ್ಟಿಕೋನವಾಗಿದೆ. ನಾಥೂರಾಂ ಗೋಡ್ಸೆ, ಗಾಂಧೀಜಿಯನ್ನು ಹತ್ಯೆ ಮಾಡಿದ ವ್ಯಕ್ತಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತದಲ್ಲಿ ನಾವು ಮಾಡುತ್ತಿರುವುದು ಪ್ರಜಾಸತ್ತಾತ್ಮಕ ಹೋರಾಟ ಮತ್ತು ಇದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಥೆಗಳ ಮೇಲೆ ಮತ್ತು ನಮ್ಮ ಸ್ವಾತಂತ್ರ್ಯದ ಮೇಲೆ ಆಕ್ರಮಣವನ್ನು ನಿಲ್ಲಿಸುತ್ತೇವೆ ಎಂಬ ಭರವಸೆಯನ್ನು ಪ್ರತಿಪಕ್ಷಗಳು ನೀಡುತ್ತದೆ  ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುರೋಪ್‌ನಲ್ಲಿರುವ ಭಾರತೀಯರನ್ನು ಭೇಟಿ ಮಾಡಲು ಮತ್ತು ಅವರು ಭಾರತವನ್ನು ಹೇಗೆ ನೋಡುತ್ತಾರೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ಅರ್ಥೈಸಲು ಬಂದಿದ್ದೇನೆ. ನಾನು ಸಾವಿರಾರು ಯುವಕರನ್ನು ಭೇಟಿಯಾಗಿದ್ದೇನೆ. ಅವರು ಹೇಳಿದ ಮೂರು ವಿಷಯಗಳೆಂದರೆ, ನಿರುದ್ಯೋಗ, ಬಡತನದ ಮಟ್ಟದಲ್ಲಿ ಭಾರಿ ಹೆಚ್ಚಳ ಮತ್ತು ಸಂಪೂರ್ಣವಾಗಿ ಅಸಮಾನ ಆದಾಯ ಹಂಚಿಕೆಗಳಾಗಿದೆ. ಇದರಿಂದಾಗಿ ಕೆಲ ಜನರು  ಹೆಚ್ಚು ಶ್ರೀಮಂತರಾಗುತ್ತಾರೆ ಮತ್ತು ಹೆಚ್ಚಿನ ಜನರು ಮತ್ತೆ ಬಡತನಕ್ಕೆ ತಳ್ಳಲ್ಪಡತ್ತಾರೆ ಎಂದು ಹೇಳಿದ್ದಾರೆ.

ಬೆಲೆಗಳ ಏರಿಕೆ ಮತ್ತು ಹಣದುಬ್ಬರ ಇವೆ. ನಿಜವಾದ ಸಂಗತಿಯೆಂದರೆ ಭಾರತವು ಕಳೆದ 40 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಆರ್ಥಿಕ ನೀತಿ ತಪ್ಪಾಗಿದೆ. ಸರ್ಕಾರಕ್ಕೆ ಸಾಕಷ್ಟು ಮಾಧ್ಯಮ ಬೆಂಬಲವಿದೆ. ಆದ್ದರಿಂದ ಆ ರೀತಿಯ ವಿಷಯಗಳು ಹೊರಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...