Homeಮುಖಪುಟಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

ಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

ಭಾರತದಲ್ಲಿ ರಾಜಕೀಯವು ಹೋರಾಟವು ಒಂದು “ಮಹಾತ್ಮ ಗಾಂಧಿಯವರ ದೃಷ್ಟಿಕೋನ” ಮತ್ತು ಅವರ ಹಂತಕ “ನಾಥುರಾಮ್ ಗೋಡ್ಸೆ ಅವರ ದೃಷ್ಟಿಕೋನದ” ನಡುವೆ  ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಪ್ರಸ್ತುತ ಯುರೋಪ್‌ ರಾಷ್ಟ್ರಗಳ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ, ದೇಶದಲ್ಲಿ ಒಡಕು ಮೂಡಿಸುತ್ತಿದ್ದಾರೆ ಮತ್ತು ಬಂಡವಾಳಶಾಹಿ ಹಿತಾಸಕ್ತಿಗಳಿಗೆ ಆಶ್ರಯ ನೀಡುತ್ತಿದ್ದಾರೆಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೆಪ್ಟೆಂಬರ್ 8 ರಂದು ಬ್ರಸೆಲ್ಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಯುರೋಪಿಯನ್ ಸಂಸದರೊಂದಿಗಿನ ತಮ್ಮ ಸಭೆಯ ಕುರಿತು ಮಾಹಿತಿ ನೀಡಿದ್ದು, ಸಭೆಯಲ್ಲಿ ಭಾರತದ ಪ್ರಜಾಪ್ರಭುತ್ವವು ಪ್ರಸ್ತುತ ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲಾಗಿದೆ . ಭಾರತ ಎದುರಿಸುತ್ತಿರುವ ಆರ್ಥಿಕ ಸವಾಲುಗಳು, ಇತರ ಸವಾಲುಗಳು, ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ಸಾಮಾನ್ಯ ರೀತಿಯ ದಾಳಿ ಬಗ್ಗೆ ಅವರಿಗೆ ಅರಿವು ನೀಡಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆದಿದೆ  ಮತ್ತು  ಅಲ್ಪಸಂಖ್ಯಾತ , ದಲಿತ ಸಮುದಾಯಗಳು, ಬುಡಕಟ್ಟು, ಕೆಳ ಜಾತಿಯ ಸಮುದಾಯಗಳು ದಾಳಿಗೆ ಒಳಗಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಮ್ಮ ದೇಶದ ಸ್ವರೂಪವನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನದಲ್ಲಿ ನಮ್ಮ ದೇಶವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ ಮತ್ತು ನಮ್ಮ ಒಕ್ಕೂಟದ ಅತ್ಯಂತ ಮುಖ್ಯ ಅಂಶವೆಂದರೆ ನಮ್ಮ ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯಾಗಿದೆ. ಆದರೆ ಈಗ ಪರ್ಯಾಯ ದೃಷ್ಟಿ ಇದೆ, ಅದು ಬಿಜೆಪಿ ದೃಷ್ಟಿಕೋನವಾಗಿದೆ, ಇದು ಅಧಿಕಾರವನ್ನು ಕೇಂದ್ರೀಕರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪರ್ಯಾಯ ದೃಷ್ಟಿ ಕೋನವು  ಸಂಪತ್ತು ಕೇಂದ್ರೀಕೃತವಾಗಬೇಕು ಮತ್ತು ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯನ್ನು ದಮನ ಮಾಡಬೇಕು ಎಂದು ಹೇಳುತ್ತದೆ. ಭಾರತದಲ್ಲಿರುವುದು ಎರಡು ದೃಷ್ಟಿಕೋನಗಳ ನಡುವಿನ ಹೋರಾಟವಾಗಿದೆ. ಒಂದು ಮಹಾತ್ಮಾ ಗಾಂಧಿಯವರ ದೃಷ್ಟಿ ಮತ್ತು ಇನ್ನೊಂದು ನಾಥೂರಾಂ ಗೋಡ್ಸೆ ಅವರ ದೃಷ್ಟಿಕೋನವಾಗಿದೆ. ನಾಥೂರಾಂ ಗೋಡ್ಸೆ, ಗಾಂಧೀಜಿಯನ್ನು ಹತ್ಯೆ ಮಾಡಿದ ವ್ಯಕ್ತಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತದಲ್ಲಿ ನಾವು ಮಾಡುತ್ತಿರುವುದು ಪ್ರಜಾಸತ್ತಾತ್ಮಕ ಹೋರಾಟ ಮತ್ತು ಇದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಥೆಗಳ ಮೇಲೆ ಮತ್ತು ನಮ್ಮ ಸ್ವಾತಂತ್ರ್ಯದ ಮೇಲೆ ಆಕ್ರಮಣವನ್ನು ನಿಲ್ಲಿಸುತ್ತೇವೆ ಎಂಬ ಭರವಸೆಯನ್ನು ಪ್ರತಿಪಕ್ಷಗಳು ನೀಡುತ್ತದೆ  ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುರೋಪ್‌ನಲ್ಲಿರುವ ಭಾರತೀಯರನ್ನು ಭೇಟಿ ಮಾಡಲು ಮತ್ತು ಅವರು ಭಾರತವನ್ನು ಹೇಗೆ ನೋಡುತ್ತಾರೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ಅರ್ಥೈಸಲು ಬಂದಿದ್ದೇನೆ. ನಾನು ಸಾವಿರಾರು ಯುವಕರನ್ನು ಭೇಟಿಯಾಗಿದ್ದೇನೆ. ಅವರು ಹೇಳಿದ ಮೂರು ವಿಷಯಗಳೆಂದರೆ, ನಿರುದ್ಯೋಗ, ಬಡತನದ ಮಟ್ಟದಲ್ಲಿ ಭಾರಿ ಹೆಚ್ಚಳ ಮತ್ತು ಸಂಪೂರ್ಣವಾಗಿ ಅಸಮಾನ ಆದಾಯ ಹಂಚಿಕೆಗಳಾಗಿದೆ. ಇದರಿಂದಾಗಿ ಕೆಲ ಜನರು  ಹೆಚ್ಚು ಶ್ರೀಮಂತರಾಗುತ್ತಾರೆ ಮತ್ತು ಹೆಚ್ಚಿನ ಜನರು ಮತ್ತೆ ಬಡತನಕ್ಕೆ ತಳ್ಳಲ್ಪಡತ್ತಾರೆ ಎಂದು ಹೇಳಿದ್ದಾರೆ.

ಬೆಲೆಗಳ ಏರಿಕೆ ಮತ್ತು ಹಣದುಬ್ಬರ ಇವೆ. ನಿಜವಾದ ಸಂಗತಿಯೆಂದರೆ ಭಾರತವು ಕಳೆದ 40 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಆರ್ಥಿಕ ನೀತಿ ತಪ್ಪಾಗಿದೆ. ಸರ್ಕಾರಕ್ಕೆ ಸಾಕಷ್ಟು ಮಾಧ್ಯಮ ಬೆಂಬಲವಿದೆ. ಆದ್ದರಿಂದ ಆ ರೀತಿಯ ವಿಷಯಗಳು ಹೊರಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...