Homeಮುಖಪುಟಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

ಭಾರತದಲ್ಲಿ ಗಾಂಧಿ-ಗೋಡ್ಸೆ ದೃಷ್ಟಿಕೋನದ ನಡುವೆ ಹೋರಾಟ ನಡೆಯುತ್ತಿದೆ: ಯುರೋಪ್‌ನಲ್ಲಿ ರಾಹುಲ್ ಹೇಳಿಕೆ

- Advertisement -
- Advertisement -

ಭಾರತದಲ್ಲಿ ರಾಜಕೀಯವು ಹೋರಾಟವು ಒಂದು “ಮಹಾತ್ಮ ಗಾಂಧಿಯವರ ದೃಷ್ಟಿಕೋನ” ಮತ್ತು ಅವರ ಹಂತಕ “ನಾಥುರಾಮ್ ಗೋಡ್ಸೆ ಅವರ ದೃಷ್ಟಿಕೋನದ” ನಡುವೆ  ನಡೆಯುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಪ್ರಸ್ತುತ ಯುರೋಪ್‌ ರಾಷ್ಟ್ರಗಳ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ, ದೇಶದಲ್ಲಿ ಒಡಕು ಮೂಡಿಸುತ್ತಿದ್ದಾರೆ ಮತ್ತು ಬಂಡವಾಳಶಾಹಿ ಹಿತಾಸಕ್ತಿಗಳಿಗೆ ಆಶ್ರಯ ನೀಡುತ್ತಿದ್ದಾರೆಂದು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೆಪ್ಟೆಂಬರ್ 8 ರಂದು ಬ್ರಸೆಲ್ಸ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಯುರೋಪಿಯನ್ ಸಂಸದರೊಂದಿಗಿನ ತಮ್ಮ ಸಭೆಯ ಕುರಿತು ಮಾಹಿತಿ ನೀಡಿದ್ದು, ಸಭೆಯಲ್ಲಿ ಭಾರತದ ಪ್ರಜಾಪ್ರಭುತ್ವವು ಪ್ರಸ್ತುತ ಆರ್ಥಿಕ ಮತ್ತು ಸಾಮಾಜಿಕ ರಂಗಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲಾಗಿದೆ . ಭಾರತ ಎದುರಿಸುತ್ತಿರುವ ಆರ್ಥಿಕ ಸವಾಲುಗಳು, ಇತರ ಸವಾಲುಗಳು, ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ಸಾಮಾನ್ಯ ರೀತಿಯ ದಾಳಿ ಬಗ್ಗೆ ಅವರಿಗೆ ಅರಿವು ನೀಡಿರುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ.

ಎಲ್ಲರಿಗೂ ತಿಳಿದಿರುವಂತೆ ನಮ್ಮ ದೇಶದ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆದಿದೆ  ಮತ್ತು  ಅಲ್ಪಸಂಖ್ಯಾತ , ದಲಿತ ಸಮುದಾಯಗಳು, ಬುಡಕಟ್ಟು, ಕೆಳ ಜಾತಿಯ ಸಮುದಾಯಗಳು ದಾಳಿಗೆ ಒಳಗಾಗಿದ್ದಾರೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಮ್ಮ ದೇಶದ ಸ್ವರೂಪವನ್ನು ಬದಲಾಯಿಸುವ ಪ್ರಯತ್ನ ನಡೆಯುತ್ತಿದೆ. ಸಂವಿಧಾನದಲ್ಲಿ ನಮ್ಮ ದೇಶವನ್ನು ರಾಜ್ಯಗಳ ಒಕ್ಕೂಟ ಎಂದು ವಿವರಿಸಲಾಗಿದೆ ಮತ್ತು ನಮ್ಮ ಒಕ್ಕೂಟದ ಅತ್ಯಂತ ಮುಖ್ಯ ಅಂಶವೆಂದರೆ ನಮ್ಮ ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯಾಗಿದೆ. ಆದರೆ ಈಗ ಪರ್ಯಾಯ ದೃಷ್ಟಿ ಇದೆ, ಅದು ಬಿಜೆಪಿ ದೃಷ್ಟಿಕೋನವಾಗಿದೆ, ಇದು ಅಧಿಕಾರವನ್ನು ಕೇಂದ್ರೀಕರಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಪರ್ಯಾಯ ದೃಷ್ಟಿ ಕೋನವು  ಸಂಪತ್ತು ಕೇಂದ್ರೀಕೃತವಾಗಬೇಕು ಮತ್ತು ಒಕ್ಕೂಟದ ಸದಸ್ಯರ ನಡುವಿನ ಸಂಭಾಷಣೆಯನ್ನು ದಮನ ಮಾಡಬೇಕು ಎಂದು ಹೇಳುತ್ತದೆ. ಭಾರತದಲ್ಲಿರುವುದು ಎರಡು ದೃಷ್ಟಿಕೋನಗಳ ನಡುವಿನ ಹೋರಾಟವಾಗಿದೆ. ಒಂದು ಮಹಾತ್ಮಾ ಗಾಂಧಿಯವರ ದೃಷ್ಟಿ ಮತ್ತು ಇನ್ನೊಂದು ನಾಥೂರಾಂ ಗೋಡ್ಸೆ ಅವರ ದೃಷ್ಟಿಕೋನವಾಗಿದೆ. ನಾಥೂರಾಂ ಗೋಡ್ಸೆ, ಗಾಂಧೀಜಿಯನ್ನು ಹತ್ಯೆ ಮಾಡಿದ ವ್ಯಕ್ತಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಭಾರತದಲ್ಲಿ ನಾವು ಮಾಡುತ್ತಿರುವುದು ಪ್ರಜಾಸತ್ತಾತ್ಮಕ ಹೋರಾಟ ಮತ್ತು ಇದು ನಮ್ಮ ಜವಾಬ್ದಾರಿಯಾಗಿದೆ. ನಮ್ಮ ಸಂಸ್ಥೆಗಳ ಮೇಲೆ ಮತ್ತು ನಮ್ಮ ಸ್ವಾತಂತ್ರ್ಯದ ಮೇಲೆ ಆಕ್ರಮಣವನ್ನು ನಿಲ್ಲಿಸುತ್ತೇವೆ ಎಂಬ ಭರವಸೆಯನ್ನು ಪ್ರತಿಪಕ್ಷಗಳು ನೀಡುತ್ತದೆ  ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುರೋಪ್‌ನಲ್ಲಿರುವ ಭಾರತೀಯರನ್ನು ಭೇಟಿ ಮಾಡಲು ಮತ್ತು ಅವರು ಭಾರತವನ್ನು ಹೇಗೆ ನೋಡುತ್ತಾರೆ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕೆಂದು ಅರ್ಥೈಸಲು ಬಂದಿದ್ದೇನೆ. ನಾನು ಸಾವಿರಾರು ಯುವಕರನ್ನು ಭೇಟಿಯಾಗಿದ್ದೇನೆ. ಅವರು ಹೇಳಿದ ಮೂರು ವಿಷಯಗಳೆಂದರೆ, ನಿರುದ್ಯೋಗ, ಬಡತನದ ಮಟ್ಟದಲ್ಲಿ ಭಾರಿ ಹೆಚ್ಚಳ ಮತ್ತು ಸಂಪೂರ್ಣವಾಗಿ ಅಸಮಾನ ಆದಾಯ ಹಂಚಿಕೆಗಳಾಗಿದೆ. ಇದರಿಂದಾಗಿ ಕೆಲ ಜನರು  ಹೆಚ್ಚು ಶ್ರೀಮಂತರಾಗುತ್ತಾರೆ ಮತ್ತು ಹೆಚ್ಚಿನ ಜನರು ಮತ್ತೆ ಬಡತನಕ್ಕೆ ತಳ್ಳಲ್ಪಡತ್ತಾರೆ ಎಂದು ಹೇಳಿದ್ದಾರೆ.

ಬೆಲೆಗಳ ಏರಿಕೆ ಮತ್ತು ಹಣದುಬ್ಬರ ಇವೆ. ನಿಜವಾದ ಸಂಗತಿಯೆಂದರೆ ಭಾರತವು ಕಳೆದ 40 ವರ್ಷಗಳಲ್ಲಿ ಅತಿ ಹೆಚ್ಚು ನಿರುದ್ಯೋಗವನ್ನು ಹೊಂದಿದೆ. ಆರ್ಥಿಕ ನೀತಿ ತಪ್ಪಾಗಿದೆ. ಸರ್ಕಾರಕ್ಕೆ ಸಾಕಷ್ಟು ಮಾಧ್ಯಮ ಬೆಂಬಲವಿದೆ. ಆದ್ದರಿಂದ ಆ ರೀತಿಯ ವಿಷಯಗಳು ಹೊರಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...