Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...