Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...