Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...