Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...