Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ಬಂಧನ, ವಿವಿ ವಿದ್ಯಾರ್ಥಿಗಳಿಂದ ಕೌಂಟರ್ ಪ್ರೊಟೆಸ್ಟ್

ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಎಬಿವಿಪಿ ಸದಸ್ಯರು ಮಂಗಳವಾರ (ಫೆ.24) ಸಂಜೆ ದಾಂಧಲೆ ನಡೆಸಿರುವ ಕುರಿತು ವರದಿಯಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಷನ್ (ಎಐಎಸ್‌ಎ) ಜೊತೆ ಸಂಯೋಜಿತವಾಗಿರುವ ವಿವಿಯ ವಿದ್ಯಾರ್ಥಿ ಸಂಘಟನೆ...

ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದ ‘ಕೇರಳ ಸ್ಟೋರಿ-2’ ತಂಡ

'ದಿ ಕೇರಳ ಸ್ಟೋರಿ-2 ಗೋಸ್ ಬಿಯಾಂಡ್' ತಂಡ ಕೇರಳ ಹೈಕೋರ್ಟ್ ನ್ಯಾಯಾಧೀಶರಿಗೆ ಸಿನಿಮಾ ತೋರಿಸಲು ಹಿಂದೇಟು ಹಾಕಿದೆ. ಮಂಗಳವಾರ (ಫೆ.24) ಬೆಳಗ್ಗಿನ ಅವಧಿಯ ವಿಚಾರಣೆಯ ವೇಳೆ ನ್ಯಾಯಮೂರ್ತಿ ಬಿಚು ಕುರಿಯನ್ ಥಾಮಸ್ ಅವರು, "ಸಿನಿಮಾದ...

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...