Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...