Homeಮುಖಪುಟಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ - ರಾಹುಲ್ ಗಾಂಧಿ

ಈ ಸರ್ಕಾರದಿಂದ ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ – ರಾಹುಲ್ ಗಾಂಧಿ

"ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ" ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಗಳಲ್ಲಿ ಸರ್ಕಾರ ಮಾಡಿರುವ ಬ್ಯಾರಿಕೇಡಿಂಗ್ ಕಾರಣದಿಂದ ಭಾರತದ ಜಾಗತಿಕ ಸ್ಥಾನಮಾನಕ್ಕೆ ದೊಡ್ಡ ಪೆಟ್ಟು ಬಿದ್ದಿದೆ ಎಂದು ಹೇಳಿದ್ದಾರೆ. ದೆಹಲಿಯ ಕಾಂಗ್ರೆಸ್‌ನ ಕೇಂದ್ರ ಕಚೇರಿಯಲ್ಲಿ ನಡೆದ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದರು.

ರೈತರು ಪ್ರತಿಭಟಿಸುತ್ತಿರುವ ದೆಹಲಿಯ ಗಡಿಯಲ್ಲಿ ಬ್ಯಾರಿಕೇಡಿಂಗ್ ಮತ್ತು ಸರ್ಕಾರ ರೈತರನ್ನು ನಡೆಸಿಕೊಳ್ಳುವ ರೀತಿಯಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನಮಾನಕ್ಕೆ ಹೊಡೆತ ಬೀಳುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, “ಖಂಡಿತವಾಗಿಯೂ ಹೌದು. ಭಾರತದ ಸ್ಥಾನಮಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ನಾವು ನಮ್ಮ ರೈತರನ್ನು ಹೇಗೆ ಉಪಚರಿಸುತ್ತಿದ್ದೇವೆ ಎಂಬುದರ ಬಗ್ಗೆ ಮಾತ್ರವಲ್ಲ, ನಮ್ಮ ಜನರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ, ಪತ್ರಕರ್ತರೊಂದಿಗೆ ನಾವು ಹೇಗೆ ವರ್ತಿಸುತ್ತೇವೆ ಎಂಬುದೂ ಇದಕ್ಕೆ ಕಾರಣ” ಎಂದಿದ್ದಾರೆ.

“ಸಾಫ್ಟ್ ಪವರ್ ನಮ್ಮ ಅತಿದೊಡ್ಡ ಶಕ್ತಿ. ಬಿಜೆಪಿ-ಆರ್‌ಎಸ್‌ಎಸ್ ಮನಸ್ಥಿತಿ ಅದನ್ನು ಚೂರುಚೂರು ಮಾಡಿದೆ” ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಅಂತರಾಷ್ಟ್ರೀಯ ಸೆಲೆಬ್ರಿಟಿಗಳ ಬೆಂಬಲ: ಗರಂ ಆಯಿತೇ ವಿದೇಶಾಂಗ ಸಚಿವಾಲಯ?

ರೈತರ ಪ್ರತಿಭಟನೆಗೆ ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ, ಸ್ವೀಡನ್‌ನ ಕಿರಿಯ ಪರಿಸರವಾದಿ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಮತ್ತು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್, ಬ್ರಿಟನ್ ಸಂಸದೆ ಕ್ಲೌಡಿಯಾ ವೆಬ್ಬೆ, ಅಮೆರಿಕ ಕಾಂಗ್ರೆಸ್‌ಮನ್, ವಿದೇಶಾಂಗ ವ್ಯವಹಾರ ಸಮಿತಿ ಸದಸ್ಯ ಡೆಮಾಕ್ರಟ್ ಜಿಮ್ ಕೋಸ್ಟಾ ಕೂಡ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು.

ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಈ ಬಿಕ್ಕಟ್ಟು ಮುಂದುವರಿದಂತೆ, ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಎರಡು ವರ್ಷಗಳ ಕಾಲ ಮುಂದೂಡುವ ಮೋದಿ ಸರಕಾರದ ಪ್ರಸ್ತಾಪವನ್ನು ರಾಹುಲ್ ಪ್ರಶ್ನಿಸಿದರು. ಈ ವಿಷಯದಲ್ಲಿ ಕೇಂದ್ರವು ತನ್ನ ನಿಲುವನ್ನು ಖಚಿತಪಡಿಸಿಕೊಳ್ಳುವಂತೆ ಸಲಹೆ ನೀಡಿದರು.

“ಎರಡು ವರ್ಷಗಳವರೆಗೆ ಕಾನೂನುಗಳನ್ನು ಮುಂದೂಡುವ ಪ್ರಸ್ತಾಪವು ಇನ್ನೂ ಮೇಜಿನ ಮೇಲಿದೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. ಅದರ ಅರ್ಥವೇನು? ಇದು ಗೊಂದಲದ ಹಾದಿಯಾಗಿದೆ” ಎಂದು ಅವರು ಹೇಳಿದರು. ನಾಗರಿಕರಿಗೆ ಆಹಾರವನ್ನು ಒದಗಿಸುವ ರೈತರು ನೆರೆದಿರುವ ರಾಜಧಾನಿಯ ಗಡಿಗಳನ್ನು ಕೋಟೆಯಾಗಿ ಏಕೆ ಪರಿವರ್ತಿಸಲಾಗಿದೆ ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ಸಮಸ್ಯೆಯನ್ನು ಪರಿಹರಿಸಲು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಏಕೆ ಆಸಕ್ತಿ ಹೊಂದಿಲ್ಲ ಎಂದು ಆಶ್ಚರ್ಯಪಟ್ಟ ಅವರು, ಈ ಪರಿಸ್ಥಿತಿ ಭಾರತಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಬೇಕಾಗಿದೆ ಮತ್ತು ಸರ್ಕಾರವು ರೈತರ ಧ್ವನಿಯನ್ನು ಕೇಳಿಸಿಕೊಳ್ಳಬೇಕು. ಅಲ್ಲಿವರೆಗೆ ರೈತರು ಇಲ್ಲಿಯೇ ಇರುತ್ತಾರೆ ಎಂದರು.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹೆಚ್ಚಿನ ರೈತರು ಪ್ರತಿಭಟನಾಕಾರರ ಜೊತೆ ಸೇರುತ್ತಾರೆ ಎಂಬ ಆತಂಕದ ಮಧ್ಯೆ ದೆಹಲಿ ಪೊಲೀಸರು ಮೂರು ಪ್ರತಿಭಟನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಬಂಡೆಗಳು ಮತ್ತು ಮುಳ್ಳುತಂತಿಗಳನ್ನು ಹಾಕಿ ಭದ್ರತಾ ವ್ಯವಸ್ಥೆಯನ್ನು ಮಾಡಿದ್ದು, ಸರ್ಕಾರ ಇಂಟರ್‌ನೆಟ್ ಸ್ಥಗಿತಗೊಳಿಸಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದೆ.


ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Hogale hogu Namna deshana soft target madi eega yeno soft power anta bogaltha iddita.Neenu ninna vidyabyasa munduvarisi kanista jnana samoadisuvavaregu matadabeda.Sarina

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...