Homeಕರೋನಾ ತಲ್ಲಣರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ಕೇಂದ್ರ ಸರ್ಕಾರ ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ವೆಂಟಿಲೇಟರ್ ತಯಾರಕ ಸಂಸ್ಥೆ ಆಗ್ವಾ ಹೆಲ್ತ್‌ಕೇರ್ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ವೈದ್ಯರಲ್ಲ ಎಂದು ಹೇಳಿದೆ.

ಕೊರೊನಾ ನಿಭಾಯಿಸಲು ಖರೀದಿಸಿದ ಕೆಲವು ವೆಂಟಿಲೇಟರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರ “ಆತ್ಮನಿರ್ಭರ ಭಾರತ” ಯೋಜನೆಯ ಅನುಗುಣವಾಗಿ ಸ್ಥಳೀಯ ಉತ್ಪಾದಕ ಆಗ್ವಾ ಅವರಿಂದ ಪಿಎಂಸಿ ಕೇರ್ಸ್ ನಿಧಿಯ ಮೂಲಕ ಖರೀದಿಸಲಾಗಿದೆ.

ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸದಿರುವ ಬಗ್ಗೆ ಸರ್ಕಾರದ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ರಾಹುಲ್ ಗಾಂಧಿ, ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದರು.

ಈ ವಿಷಯದ ಬಗ್ಗೆ ಜುಲೈ 5 ರಂದು ಟ್ವೀಟ್ ಮಾಡಿದ ರಾಹುಲ್ ಗಾಂಧಿ “ಪಿಎಂಕೇರ್ಸ್ ಅಪಾರದರ್ಶಕತೆ: 1. ಭಾರತೀಯ ಜೀವಗಳನ್ನು ಅಪಾಯಕ್ಕೆ ತಳ್ಳುವುದು. 2. ಸಾರ್ವಜನಿಕ ಹಣವನ್ನು ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸಲು ಬಳಸಲಾಗುತ್ತಿದೆ.” ಎಂದು ಬರೆದಿದ್ದರು.

ಆಗ್ವಾ ಹೆಲ್ತ್‌ಕೇರ್‌ನ ಸಹ ಸಂಸ್ಥಾಪಕ ಪ್ರೊಫೆಸರ್ ದಿವಾಕರ್ ವೈಶ್, “ರಾಹುಲ್ ಗಾಂಧಿ ವೈದ್ಯರಲ್ಲ, ಅವರು ಬುದ್ಧಿವಂತ ವ್ಯಕ್ತಿ. ಇಂತಹ ಆರೋಪಗಳನ್ನು ಮಾಡುವ ಮೊದಲು ಅವರು ಶ್ರದ್ಧೆಯಿಂದ ಕೆಲಸ ಮಾಡಬೇಕಾಗಿತ್ತು. ಅವರು ವೈದ್ಯರನ್ನು ಸಂಪರ್ಕಿಸಿರಬೇಕು. ವಿವರವಾದ ಮಾಹಿತಿಯನ್ನು ನೀಡಲು ನಾನು ಸಿದ್ಧನಿದ್ದೇನೆ.” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಹಫ್‌ಪೋಸ್ಟ್‌ನ ವರದಿಯೊಂದನ್ನು ಟ್ಯಾಗ್ ಮಾಡಿ, “PMCARES ನಿಂದ ಖರೀದಿಸಲಾದ ವೆಂಟಿಲೇಟರ್  ಕಳಪೆ ಕಾರ್ಯಕ್ಷಮತೆಯವು ಎಂದು ಮಾಜಿ ಉದ್ಯೋಗಿಗಳು ಹೇಳುತ್ತಾರೆ” ಎಂದು ಹೇಳಿದ್ದರು.

ಕೊರೊನಾ ವೈರಸ್ ಚಿಕಿತ್ಸೆಗಾಗಿ ವಿನ್ಯಾಸಗೊಳಿಸಲಾದ ಈ ವೆಂಟಿಲೇಟರ್‌ಗಳು ಉನ್ನತ-ಮಟ್ಟದ ವೆಂಟಿಲೇಟರ್‌ಗಳಿಗೆ ಪರ್ಯಾಯವಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ಹಫ್‌ಪೋಸ್ಟ್ ವರದಿ ಮಾಡಿದೆ.

ಈ ಆರೋಪಗಳು ಭಾರತಕ್ಕೆ ವೆಂಟಿಲೇಟರ್‌ಗಳನ್ನು ಪೂರೈಸುವ ವಿದೇಶಿ ಕಂಪೆನಿಗಳನ್ನು ಅಸಮಾಧಾನಗೊಳಿಸಿದ ಪರಿಣಾಮವಾಗಿದೆ ಎಂದು ಅಗ್ವಾ ಹೆಲ್ತ್ ಕೇರ್‌ನ ವೈಶ್ ಹೇಳಿದರು.

“ಅಂತರರಾಷ್ಟ್ರೀಯ ಮಾರಾಟಗಾರರ ನೆಕ್ಸಸ್ ತುಂಬಾ ಪ್ರಬಲವಾಗಿದೆ. ಭಾರತೀಯ ಮಿಲಿಟರಿ ಉಪಕರಣಗಳನ್ನು ದೇಶೀಕರಿಸುತ್ತಿದ್ದಂತೆಯೇ, ಸಾಕಷ್ಟು ನಕಾರಾತ್ಮಕ ವಿಮರ್ಶೆಗಳು ಬಂದವು. ಇಲ್ಲಿಯೂ ಅದೇ ನಡೆಯುತ್ತಿದೆ. 10 ಲಕ್ಷ ರೂ ವೆಂಟಿಲೇಟರ್ ಮಾಡುವ ಕೆಲಸವನ್ನು, ನಮ್ಮದು 1.5 ಲಕ್ಷ ರೂ.ಗಳಲ್ಲಿ ಮಾಡುತ್ತಿದೆ. ಅಂತರರಾಷ್ಟ್ರೀಯ ಸಂಘಗಳು, ಅಂತರರಾಷ್ಟ್ರೀಯ ಮಾರಾಟಗಾರರು ಇದನ್ನು ಸ್ವೀಕರಿಸುತ್ತಾರೆಯೇ? ಅದಕ್ಕಾಗಿಯೇ ಅವರು ವಿಧ್ವಂಸಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ LNGP ಆಸ್ಪತ್ರೆ ಆಗ್ವಾ ವೆಂಟಿಲೇಟರ್ ಅನ್ನು ತಿರಸ್ಕರಿಸಲಿಲ್ಲ ಎಂದು ವೈಶ್ ಹೇಳಿದರು.

“ಮುಂಬೈಗೆ ಸಂಬಂಧಿಸಿದಂತೆ, JJ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಮೂರನೇ ವ್ಯಕ್ತಿಯ ಮೂಲಕ ಸ್ಥಾಪನೆಯಾಗಿದೆ. ಅವರು ಅದನ್ನು ಸರಿಯಾಗಿ ಸ್ಥಾಪಿಸಲಿಲ್ಲ. ಆದ್ದರಿಂದ, ಅವರ ವೈದ್ಯರು ಅದನ್ನು ಬಳಸಲಾಗಲಿಲ್ಲ. ನೀವು ಪೆಟ್ರೋಲ್ ಬದಲಿಗೆ ಡೀಸೆಲ್ ಹಾಕಿದರೆ ಏನು ಸಂಭವಿಸುತ್ತದೆ? ಎಂದು ANI ವೈಶ್ ಅವರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಭಾರತದ ಸಿದ್ಧತೆಗಳ ಭಾಗವಾಗಿ ಕೇಂದ್ರ ಸರ್ಕಾರವು ಆಗ್ವಾ ಹೆಲ್ತ್‌ಕೇರ್‌ನಿಂದ 10,000 ಕೊರೊನಾ ಮಾದರಿ ವೆಂಟಿಲೇಟರ್‌ಗಳಿಗೆ ಆದೇಶ ನೀಡಿತು. ಈ ಹಣವು PMCARES‌ನಿಂದ ಬಂದಿದೆ.

ಈ ನಿಧಿಯೂ ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...