Homeಕರೋನಾ ತಲ್ಲಣರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ಕೇಂದ್ರ ಸರ್ಕಾರ ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ವೆಂಟಿಲೇಟರ್ ತಯಾರಕ ಸಂಸ್ಥೆ ಆಗ್ವಾ ಹೆಲ್ತ್‌ಕೇರ್ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ವೈದ್ಯರಲ್ಲ ಎಂದು ಹೇಳಿದೆ.

ಕೊರೊನಾ ನಿಭಾಯಿಸಲು ಖರೀದಿಸಿದ ಕೆಲವು ವೆಂಟಿಲೇಟರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರ “ಆತ್ಮನಿರ್ಭರ ಭಾರತ” ಯೋಜನೆಯ ಅನುಗುಣವಾಗಿ ಸ್ಥಳೀಯ ಉತ್ಪಾದಕ ಆಗ್ವಾ ಅವರಿಂದ ಪಿಎಂಸಿ ಕೇರ್ಸ್ ನಿಧಿಯ ಮೂಲಕ ಖರೀದಿಸಲಾಗಿದೆ.

ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸದಿರುವ ಬಗ್ಗೆ ಸರ್ಕಾರದ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ರಾಹುಲ್ ಗಾಂಧಿ, ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದರು.

ಈ ವಿಷಯದ ಬಗ್ಗೆ ಜುಲೈ 5 ರಂದು ಟ್ವೀಟ್ ಮಾಡಿದ ರಾಹುಲ್ ಗಾಂಧಿ “ಪಿಎಂಕೇರ್ಸ್ ಅಪಾರದರ್ಶಕತೆ: 1. ಭಾರತೀಯ ಜೀವಗಳನ್ನು ಅಪಾಯಕ್ಕೆ ತಳ್ಳುವುದು. 2. ಸಾರ್ವಜನಿಕ ಹಣವನ್ನು ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸಲು ಬಳಸಲಾಗುತ್ತಿದೆ.” ಎಂದು ಬರೆದಿದ್ದರು.

ಆಗ್ವಾ ಹೆಲ್ತ್‌ಕೇರ್‌ನ ಸಹ ಸಂಸ್ಥಾಪಕ ಪ್ರೊಫೆಸರ್ ದಿವಾಕರ್ ವೈಶ್, “ರಾಹುಲ್ ಗಾಂಧಿ ವೈದ್ಯರಲ್ಲ, ಅವರು ಬುದ್ಧಿವಂತ ವ್ಯಕ್ತಿ. ಇಂತಹ ಆರೋಪಗಳನ್ನು ಮಾಡುವ ಮೊದಲು ಅವರು ಶ್ರದ್ಧೆಯಿಂದ ಕೆಲಸ ಮಾಡಬೇಕಾಗಿತ್ತು. ಅವರು ವೈದ್ಯರನ್ನು ಸಂಪರ್ಕಿಸಿರಬೇಕು. ವಿವರವಾದ ಮಾಹಿತಿಯನ್ನು ನೀಡಲು ನಾನು ಸಿದ್ಧನಿದ್ದೇನೆ.” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಹಫ್‌ಪೋಸ್ಟ್‌ನ ವರದಿಯೊಂದನ್ನು ಟ್ಯಾಗ್ ಮಾಡಿ, “PMCARES ನಿಂದ ಖರೀದಿಸಲಾದ ವೆಂಟಿಲೇಟರ್  ಕಳಪೆ ಕಾರ್ಯಕ್ಷಮತೆಯವು ಎಂದು ಮಾಜಿ ಉದ್ಯೋಗಿಗಳು ಹೇಳುತ್ತಾರೆ” ಎಂದು ಹೇಳಿದ್ದರು.

ಕೊರೊನಾ ವೈರಸ್ ಚಿಕಿತ್ಸೆಗಾಗಿ ವಿನ್ಯಾಸಗೊಳಿಸಲಾದ ಈ ವೆಂಟಿಲೇಟರ್‌ಗಳು ಉನ್ನತ-ಮಟ್ಟದ ವೆಂಟಿಲೇಟರ್‌ಗಳಿಗೆ ಪರ್ಯಾಯವಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ಹಫ್‌ಪೋಸ್ಟ್ ವರದಿ ಮಾಡಿದೆ.

ಈ ಆರೋಪಗಳು ಭಾರತಕ್ಕೆ ವೆಂಟಿಲೇಟರ್‌ಗಳನ್ನು ಪೂರೈಸುವ ವಿದೇಶಿ ಕಂಪೆನಿಗಳನ್ನು ಅಸಮಾಧಾನಗೊಳಿಸಿದ ಪರಿಣಾಮವಾಗಿದೆ ಎಂದು ಅಗ್ವಾ ಹೆಲ್ತ್ ಕೇರ್‌ನ ವೈಶ್ ಹೇಳಿದರು.

“ಅಂತರರಾಷ್ಟ್ರೀಯ ಮಾರಾಟಗಾರರ ನೆಕ್ಸಸ್ ತುಂಬಾ ಪ್ರಬಲವಾಗಿದೆ. ಭಾರತೀಯ ಮಿಲಿಟರಿ ಉಪಕರಣಗಳನ್ನು ದೇಶೀಕರಿಸುತ್ತಿದ್ದಂತೆಯೇ, ಸಾಕಷ್ಟು ನಕಾರಾತ್ಮಕ ವಿಮರ್ಶೆಗಳು ಬಂದವು. ಇಲ್ಲಿಯೂ ಅದೇ ನಡೆಯುತ್ತಿದೆ. 10 ಲಕ್ಷ ರೂ ವೆಂಟಿಲೇಟರ್ ಮಾಡುವ ಕೆಲಸವನ್ನು, ನಮ್ಮದು 1.5 ಲಕ್ಷ ರೂ.ಗಳಲ್ಲಿ ಮಾಡುತ್ತಿದೆ. ಅಂತರರಾಷ್ಟ್ರೀಯ ಸಂಘಗಳು, ಅಂತರರಾಷ್ಟ್ರೀಯ ಮಾರಾಟಗಾರರು ಇದನ್ನು ಸ್ವೀಕರಿಸುತ್ತಾರೆಯೇ? ಅದಕ್ಕಾಗಿಯೇ ಅವರು ವಿಧ್ವಂಸಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ LNGP ಆಸ್ಪತ್ರೆ ಆಗ್ವಾ ವೆಂಟಿಲೇಟರ್ ಅನ್ನು ತಿರಸ್ಕರಿಸಲಿಲ್ಲ ಎಂದು ವೈಶ್ ಹೇಳಿದರು.

“ಮುಂಬೈಗೆ ಸಂಬಂಧಿಸಿದಂತೆ, JJ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಮೂರನೇ ವ್ಯಕ್ತಿಯ ಮೂಲಕ ಸ್ಥಾಪನೆಯಾಗಿದೆ. ಅವರು ಅದನ್ನು ಸರಿಯಾಗಿ ಸ್ಥಾಪಿಸಲಿಲ್ಲ. ಆದ್ದರಿಂದ, ಅವರ ವೈದ್ಯರು ಅದನ್ನು ಬಳಸಲಾಗಲಿಲ್ಲ. ನೀವು ಪೆಟ್ರೋಲ್ ಬದಲಿಗೆ ಡೀಸೆಲ್ ಹಾಕಿದರೆ ಏನು ಸಂಭವಿಸುತ್ತದೆ? ಎಂದು ANI ವೈಶ್ ಅವರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಭಾರತದ ಸಿದ್ಧತೆಗಳ ಭಾಗವಾಗಿ ಕೇಂದ್ರ ಸರ್ಕಾರವು ಆಗ್ವಾ ಹೆಲ್ತ್‌ಕೇರ್‌ನಿಂದ 10,000 ಕೊರೊನಾ ಮಾದರಿ ವೆಂಟಿಲೇಟರ್‌ಗಳಿಗೆ ಆದೇಶ ನೀಡಿತು. ಈ ಹಣವು PMCARES‌ನಿಂದ ಬಂದಿದೆ.

ಈ ನಿಧಿಯೂ ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...