Homeಕರೋನಾ ತಲ್ಲಣರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ರಾಹುಲ್ ಗಾಂಧಿ ವೈದ್ಯರಲ್ಲ: ತಿರುಗೇಟು ನೀಡಿದ ವೆಂಟಿಲೇಟರ್ ಸಂಸ್ಥೆ

ಕೇಂದ್ರ ಸರ್ಕಾರ ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

- Advertisement -
- Advertisement -

ವೆಂಟಿಲೇಟರ್ ತಯಾರಕ ಸಂಸ್ಥೆ ಆಗ್ವಾ ಹೆಲ್ತ್‌ಕೇರ್ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ್ದು, ರಾಹುಲ್ ಗಾಂಧಿ ವೈದ್ಯರಲ್ಲ ಎಂದು ಹೇಳಿದೆ.

ಕೊರೊನಾ ನಿಭಾಯಿಸಲು ಖರೀದಿಸಿದ ಕೆಲವು ವೆಂಟಿಲೇಟರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿಯವರ “ಆತ್ಮನಿರ್ಭರ ಭಾರತ” ಯೋಜನೆಯ ಅನುಗುಣವಾಗಿ ಸ್ಥಳೀಯ ಉತ್ಪಾದಕ ಆಗ್ವಾ ಅವರಿಂದ ಪಿಎಂಸಿ ಕೇರ್ಸ್ ನಿಧಿಯ ಮೂಲಕ ಖರೀದಿಸಲಾಗಿದೆ.

ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸದಿರುವ ಬಗ್ಗೆ ಸರ್ಕಾರದ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ರಾಹುಲ್ ಗಾಂಧಿ, ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸುತ್ತಿದೆ ಎಂದು ಆರೋಪಿಸಿದ್ದರು.

ಈ ವಿಷಯದ ಬಗ್ಗೆ ಜುಲೈ 5 ರಂದು ಟ್ವೀಟ್ ಮಾಡಿದ ರಾಹುಲ್ ಗಾಂಧಿ “ಪಿಎಂಕೇರ್ಸ್ ಅಪಾರದರ್ಶಕತೆ: 1. ಭಾರತೀಯ ಜೀವಗಳನ್ನು ಅಪಾಯಕ್ಕೆ ತಳ್ಳುವುದು. 2. ಸಾರ್ವಜನಿಕ ಹಣವನ್ನು ಗುಣಮಟ್ಟವಿಲ್ಲದ ಉತ್ಪನ್ನಗಳನ್ನು ಖರೀದಿಸಲು ಬಳಸಲಾಗುತ್ತಿದೆ.” ಎಂದು ಬರೆದಿದ್ದರು.

ಆಗ್ವಾ ಹೆಲ್ತ್‌ಕೇರ್‌ನ ಸಹ ಸಂಸ್ಥಾಪಕ ಪ್ರೊಫೆಸರ್ ದಿವಾಕರ್ ವೈಶ್, “ರಾಹುಲ್ ಗಾಂಧಿ ವೈದ್ಯರಲ್ಲ, ಅವರು ಬುದ್ಧಿವಂತ ವ್ಯಕ್ತಿ. ಇಂತಹ ಆರೋಪಗಳನ್ನು ಮಾಡುವ ಮೊದಲು ಅವರು ಶ್ರದ್ಧೆಯಿಂದ ಕೆಲಸ ಮಾಡಬೇಕಾಗಿತ್ತು. ಅವರು ವೈದ್ಯರನ್ನು ಸಂಪರ್ಕಿಸಿರಬೇಕು. ವಿವರವಾದ ಮಾಹಿತಿಯನ್ನು ನೀಡಲು ನಾನು ಸಿದ್ಧನಿದ್ದೇನೆ.” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಹಫ್‌ಪೋಸ್ಟ್‌ನ ವರದಿಯೊಂದನ್ನು ಟ್ಯಾಗ್ ಮಾಡಿ, “PMCARES ನಿಂದ ಖರೀದಿಸಲಾದ ವೆಂಟಿಲೇಟರ್  ಕಳಪೆ ಕಾರ್ಯಕ್ಷಮತೆಯವು ಎಂದು ಮಾಜಿ ಉದ್ಯೋಗಿಗಳು ಹೇಳುತ್ತಾರೆ” ಎಂದು ಹೇಳಿದ್ದರು.

ಕೊರೊನಾ ವೈರಸ್ ಚಿಕಿತ್ಸೆಗಾಗಿ ವಿನ್ಯಾಸಗೊಳಿಸಲಾದ ಈ ವೆಂಟಿಲೇಟರ್‌ಗಳು ಉನ್ನತ-ಮಟ್ಟದ ವೆಂಟಿಲೇಟರ್‌ಗಳಿಗೆ ಪರ್ಯಾಯವಲ್ಲ ಎಂದು ವೈದ್ಯರು ಹೇಳಿದ್ದಾರೆ ಎಂದು ಹಫ್‌ಪೋಸ್ಟ್ ವರದಿ ಮಾಡಿದೆ.

ಈ ಆರೋಪಗಳು ಭಾರತಕ್ಕೆ ವೆಂಟಿಲೇಟರ್‌ಗಳನ್ನು ಪೂರೈಸುವ ವಿದೇಶಿ ಕಂಪೆನಿಗಳನ್ನು ಅಸಮಾಧಾನಗೊಳಿಸಿದ ಪರಿಣಾಮವಾಗಿದೆ ಎಂದು ಅಗ್ವಾ ಹೆಲ್ತ್ ಕೇರ್‌ನ ವೈಶ್ ಹೇಳಿದರು.

“ಅಂತರರಾಷ್ಟ್ರೀಯ ಮಾರಾಟಗಾರರ ನೆಕ್ಸಸ್ ತುಂಬಾ ಪ್ರಬಲವಾಗಿದೆ. ಭಾರತೀಯ ಮಿಲಿಟರಿ ಉಪಕರಣಗಳನ್ನು ದೇಶೀಕರಿಸುತ್ತಿದ್ದಂತೆಯೇ, ಸಾಕಷ್ಟು ನಕಾರಾತ್ಮಕ ವಿಮರ್ಶೆಗಳು ಬಂದವು. ಇಲ್ಲಿಯೂ ಅದೇ ನಡೆಯುತ್ತಿದೆ. 10 ಲಕ್ಷ ರೂ ವೆಂಟಿಲೇಟರ್ ಮಾಡುವ ಕೆಲಸವನ್ನು, ನಮ್ಮದು 1.5 ಲಕ್ಷ ರೂ.ಗಳಲ್ಲಿ ಮಾಡುತ್ತಿದೆ. ಅಂತರರಾಷ್ಟ್ರೀಯ ಸಂಘಗಳು, ಅಂತರರಾಷ್ಟ್ರೀಯ ಮಾರಾಟಗಾರರು ಇದನ್ನು ಸ್ವೀಕರಿಸುತ್ತಾರೆಯೇ? ಅದಕ್ಕಾಗಿಯೇ ಅವರು ವಿಧ್ವಂಸಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ LNGP ಆಸ್ಪತ್ರೆ ಆಗ್ವಾ ವೆಂಟಿಲೇಟರ್ ಅನ್ನು ತಿರಸ್ಕರಿಸಲಿಲ್ಲ ಎಂದು ವೈಶ್ ಹೇಳಿದರು.

“ಮುಂಬೈಗೆ ಸಂಬಂಧಿಸಿದಂತೆ, JJ ಆಸ್ಪತ್ರೆ ಮತ್ತು ಸೇಂಟ್ ಜಾರ್ಜ್ ಆಸ್ಪತ್ರೆ ಮೂರನೇ ವ್ಯಕ್ತಿಯ ಮೂಲಕ ಸ್ಥಾಪನೆಯಾಗಿದೆ. ಅವರು ಅದನ್ನು ಸರಿಯಾಗಿ ಸ್ಥಾಪಿಸಲಿಲ್ಲ. ಆದ್ದರಿಂದ, ಅವರ ವೈದ್ಯರು ಅದನ್ನು ಬಳಸಲಾಗಲಿಲ್ಲ. ನೀವು ಪೆಟ್ರೋಲ್ ಬದಲಿಗೆ ಡೀಸೆಲ್ ಹಾಕಿದರೆ ಏನು ಸಂಭವಿಸುತ್ತದೆ? ಎಂದು ANI ವೈಶ್ ಅವರ ಮಾತನ್ನು ಉಲ್ಲೇಖಿಸಿ ವರದಿ ಮಾಡಿದೆ.

ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಭಾರತದ ಸಿದ್ಧತೆಗಳ ಭಾಗವಾಗಿ ಕೇಂದ್ರ ಸರ್ಕಾರವು ಆಗ್ವಾ ಹೆಲ್ತ್‌ಕೇರ್‌ನಿಂದ 10,000 ಕೊರೊನಾ ಮಾದರಿ ವೆಂಟಿಲೇಟರ್‌ಗಳಿಗೆ ಆದೇಶ ನೀಡಿತು. ಈ ಹಣವು PMCARES‌ನಿಂದ ಬಂದಿದೆ.

ಈ ನಿಧಿಯೂ ಮಾಹಿತಿ ಹಕ್ಕು ಕಾಯ್ದೆಯ ಅಡಿಯಲ್ಲಿ ಬರುವುದಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...