Homeಮುಖಪುಟರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

- Advertisement -
- Advertisement -

ಕಳೆದೆರಡು ದಿನಗಳಿಂದ ಲೋಕಸಭೆಯಲ್ಲಿ ವಿಪಕ್ಷ ನಾಯಕರು ತೀವ್ರ ತರಾಟೆಗೆ ತಗೆದುಕೊಂಡ ಬಳಿಕ ಕೇಂದ್ರ ಸರ್ಕಾರ ತೀವ್ರ ಮುಜುಗಕ್ಕಿಡಾಯಿತು. ಈ ವೇಳೆ ಕಾಂಗ್ರೆಸ್ ನಾಯಕ ಆದಿರ್ ಚೌಧರಿ ಅವರು, ರಾಹುಲ್ ಗಾಂಧಿಯವರನ್ನು ನೀವು ಎಷ್ಟೇ ‘ಪಪ್ಪು’ ಎಂದು ಹೇಳಿದರೂ ಸಾಬೀತುಮಾಡಲಾಗಲಿಲ್ಲ. ಆದರೆ ರಾಹುಲ್ ಗಾಂಧಿಯವರೇ ನಿಮ್ಮನ್ನು ‘ಪಪ್ಪು’ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

”ರಾಹುಲ್ ಗಾಂಧಿಯವರು ಸರಿಯಾದ ವಿಚಾರವನ್ನೇ ಆಯ್ಕೆ ಮಾಡಿಕೊಂಡು, ನಿಮ್ಮ ಮೇಲೆ ದಾಳಿ ಮಾಡಿದ್ದಾರೆ. ಅದರಿಂದ ಬಿಜೆಪಿಯಲ್ಲಿ ಕೋಲಾಹಲ ಎದ್ದಿದೆ. ಮೊದಲ ಬಾರಿಗೆ, ಆಡಳಿತ ಪಕ್ಷವು ಕೈಗಾರಿಕೋದ್ಯಮಿಗಾಗಿ ವಕಾಲತ್ತು ವಹಿಸುತ್ತಿದೆ. ‘ಇದನ್ನು ನಾವು ಹೇಳುತ್ತಿಲ್ಲ, ಇದು ಹಿಂಡೆನ್‌ಬರ್ಗ್ ವರದಿಯಲ್ಲಿ ಬಂದಿದೆ. ನಾವು ಆ ಸಮಸ್ಯೆಯನ್ನು ಎತ್ತುತ್ತಿದ್ದೇವೆ ಅದರಲ್ಲಿ ತಪ್ಪೇನು?” ಎಂದರು.

ಈ ವೇಳೆ ಚೀನಾ ವಿಷಯವನ್ನು ಪ್ರಸ್ತಾಪಿಸಿ, 1962ರ ಭಾರತ-ಚೀನಾ ಯುದ್ಧದ ನಂತರ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಮನವಿಯ ಮೇಲೆ ಚರ್ಚೆಗೆ ಒಪ್ಪಿದರು, ಆದರೆ ಪ್ರಸ್ತುತ ಬಿಜೆಪಿ ಸರ್ಕಾರ ಚರ್ಚೆಯೇ ಬೇಡ ಎಂದು ಹೇಳುತ್ತದೆ.

“ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಡಿಜಿಗಳು ಮತ್ತು ಐಜಿಗಳ ಸಭೆ ನಡೆಯಿತು, ಪೊಲೀಸ್ ಅಧಿಕಾರಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಅದರಲ್ಲಿ ನಾವು ಮೊದಲು ಪೂರ್ವ ಲಡಾಖ್‌ನಲ್ಲಿ 65 ಪಾಯಿಂಟ್‌ಗಳಲ್ಲಿ ಗಸ್ತು ತಿರುಗುತ್ತಿದ್ದೆವು ಆದರೆ ನಮಗೆ ಆನಂತರ ಗಸ್ತು ತಿರುಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಏಕೆಂದರೆ ಭಾರತಕ್ಕೆ ಚೀನೀ ಆಕ್ರಮಣಗಳು ಹೆಚ್ಚಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಡತದಿಂದ ರಾಹುಲ್ ಭಾಷಣ ಕಡಿತ; ಪ್ರಜಾಪ್ರಭುತ್ವ ದಹನ ಎಂದ ಕಾಂಗ್ರೆಸ್

ಈ ವೇಳೆ ಪ್ರತಿಕ್ರಿಯಿಸಿದ ಅಮಿತ್ ಶಾ, ”ಅಧಿರ್ ರಂಜನ್ ಜೀ ಇದನ್ನು ಈಗ ಏಕೆ ಚರ್ಚೆ ಮಾಡುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಏಕೆಂದರೆ ಆಗ ನ್ಯೂನತೆಗಳಿದ್ದವು ಮತ್ತು ಈಗ ಯಾವುದೂ ಇಲ್ಲ. ಆಗ (ನೆಹರು-ವಾಜಪೇಯಿ) ಸಾವಿರಾರು ಹೆಕ್ಟೇರ್ ನಷ್ಟವಾದ ನಂತರ ಚರ್ಚೆ ಪ್ರಾರಂಭವಾಯಿತು” ಎಂದು ಹೇಳಿದರು.

ಲೋಕಸಭೆಯಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಬಿಜೆಪಿ ಸಂಸದರನ್ನು ಗೇಲಿ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ ‘ಚಾಮ್ಚೆ’ ಎಂದು ಕರೆದಿದ್ದಾರೆ.

”ಪ್ರಧಾನಿಯವರು ತಪ್ಪುದಾರಿಗೆಳೆಯುವ ಭಾಷಣಕ್ಕೆ ಎಲ್ಲ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿದರು. ಪ್ರಧಾನಿ ಹೋದ ನಂತರ (ಲೋಕಸಭೆಯಿಂದ) ಎಲ್ಲಾ ‘ಚಾಮ್ಚೆ’ಗಳು ಹೋದವು. ಇದರಿಂದಾಗಿ ಸದನವನ್ನು ನಡೆಸಲು ಅಗತ್ಯವಿರುವ ಕನಿಷ್ಠ ಬಲ ಇರಲಿಲ್ಲ ಹಾಗಾಗಿ ಸದನವನ್ನು ಮುಂದೂಡಲಾಯಿತು. ಇದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಶಶಿ ತರೂರ್, ”ಪ್ರಧಾನಿ ಉತ್ತಮ ಭಾಷಣ ಮಾಡಿದರು ಆದರೆ ಪ್ರತಿಪಕ್ಷಗಳು ಕೇಳಿದ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರಿಸಲಿಲ್ಲ” ಎಂದು ಹೇಳಿದರು.

“ಪ್ರಧಾನಿಯವರ ಭಾಷಣವು ​​ಪುನರಾವರ್ತಿತ, ವಾಕ್ಚಾತುರ್ಯ ಮತ್ತು ಪ್ರತಿಪಕ್ಷಗಳ ವಿರುದ್ಧ ವ್ಯಂಗ್ಯದಿಂದ ಕೂಡಿತ್ತು. ಪ್ರತಿಪಕ್ಷಗಳನ್ನು ಕೆಣಕುವುದರಿಂದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ದೇಶವು ನಿಮ್ಮನ್ನು ನೋಡುತ್ತಿದೆ ಮತ್ತು ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ನೀಡುತ್ತಾರೆ ಎಂದು ಬಿಆರ್‍‌ಎಸ್‌ ನಾಯಕಿ ಕವಿತಾ ಕಲ್ವಕುಂಟ್ಲ ಹೇಳಿದರು.

ಪ್ರಧಾನಿ ಮೋದಿಯವರ ಭಾಷಣದಿಂದ ತೃಪ್ತರಾಗಿಲ್ಲ, ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ.

”ನನಗೆ (ಪ್ರಧಾನಿ ಭಾಷಣ) ​​ತೃಪ್ತಿ ಇಲ್ಲ. ಅದಾನಿ ವಿರುದ್ಧದ ತನಿಖೆ ಬಗ್ಗೆ ಏನೂ ಮಾತನಾಡಲಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತರಲ್ಲದಿದ್ದರೆ ಪ್ರಧಾನ ಮಂತ್ರಿಯವರು ತನಿಖೆ ನಡೆಸಲು ಸೂಚಿಸಿಬೇಕು. ಪ್ರಧಾನಿ ಅವರನ್ನು (ಗೌತಮ್ ಅದಾನಿ) ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.” ಪ್ರಧಾನಿ ಭಾಷಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಹುಲ್ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...