Homeಮುಖಪುಟರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

- Advertisement -
- Advertisement -

ಕಳೆದೆರಡು ದಿನಗಳಿಂದ ಲೋಕಸಭೆಯಲ್ಲಿ ವಿಪಕ್ಷ ನಾಯಕರು ತೀವ್ರ ತರಾಟೆಗೆ ತಗೆದುಕೊಂಡ ಬಳಿಕ ಕೇಂದ್ರ ಸರ್ಕಾರ ತೀವ್ರ ಮುಜುಗಕ್ಕಿಡಾಯಿತು. ಈ ವೇಳೆ ಕಾಂಗ್ರೆಸ್ ನಾಯಕ ಆದಿರ್ ಚೌಧರಿ ಅವರು, ರಾಹುಲ್ ಗಾಂಧಿಯವರನ್ನು ನೀವು ಎಷ್ಟೇ ‘ಪಪ್ಪು’ ಎಂದು ಹೇಳಿದರೂ ಸಾಬೀತುಮಾಡಲಾಗಲಿಲ್ಲ. ಆದರೆ ರಾಹುಲ್ ಗಾಂಧಿಯವರೇ ನಿಮ್ಮನ್ನು ‘ಪಪ್ಪು’ ಎಂದು ಸಾಬೀತುಪಡಿಸಿದ್ದಾರೆ ಎಂದು ಹೇಳಿದರು.

”ರಾಹುಲ್ ಗಾಂಧಿಯವರು ಸರಿಯಾದ ವಿಚಾರವನ್ನೇ ಆಯ್ಕೆ ಮಾಡಿಕೊಂಡು, ನಿಮ್ಮ ಮೇಲೆ ದಾಳಿ ಮಾಡಿದ್ದಾರೆ. ಅದರಿಂದ ಬಿಜೆಪಿಯಲ್ಲಿ ಕೋಲಾಹಲ ಎದ್ದಿದೆ. ಮೊದಲ ಬಾರಿಗೆ, ಆಡಳಿತ ಪಕ್ಷವು ಕೈಗಾರಿಕೋದ್ಯಮಿಗಾಗಿ ವಕಾಲತ್ತು ವಹಿಸುತ್ತಿದೆ. ‘ಇದನ್ನು ನಾವು ಹೇಳುತ್ತಿಲ್ಲ, ಇದು ಹಿಂಡೆನ್‌ಬರ್ಗ್ ವರದಿಯಲ್ಲಿ ಬಂದಿದೆ. ನಾವು ಆ ಸಮಸ್ಯೆಯನ್ನು ಎತ್ತುತ್ತಿದ್ದೇವೆ ಅದರಲ್ಲಿ ತಪ್ಪೇನು?” ಎಂದರು.

ಈ ವೇಳೆ ಚೀನಾ ವಿಷಯವನ್ನು ಪ್ರಸ್ತಾಪಿಸಿ, 1962ರ ಭಾರತ-ಚೀನಾ ಯುದ್ಧದ ನಂತರ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಮನವಿಯ ಮೇಲೆ ಚರ್ಚೆಗೆ ಒಪ್ಪಿದರು, ಆದರೆ ಪ್ರಸ್ತುತ ಬಿಜೆಪಿ ಸರ್ಕಾರ ಚರ್ಚೆಯೇ ಬೇಡ ಎಂದು ಹೇಳುತ್ತದೆ.

“ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಡಿಜಿಗಳು ಮತ್ತು ಐಜಿಗಳ ಸಭೆ ನಡೆಯಿತು, ಪೊಲೀಸ್ ಅಧಿಕಾರಿಗಳು ಸಂಶೋಧನಾ ಪ್ರಬಂಧವನ್ನು ಮಂಡಿಸಿದರು. ಅದರಲ್ಲಿ ನಾವು ಮೊದಲು ಪೂರ್ವ ಲಡಾಖ್‌ನಲ್ಲಿ 65 ಪಾಯಿಂಟ್‌ಗಳಲ್ಲಿ ಗಸ್ತು ತಿರುಗುತ್ತಿದ್ದೆವು ಆದರೆ ನಮಗೆ ಆನಂತರ ಗಸ್ತು ತಿರುಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಏಕೆಂದರೆ ಭಾರತಕ್ಕೆ ಚೀನೀ ಆಕ್ರಮಣಗಳು ಹೆಚ್ಚಾಗಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಡತದಿಂದ ರಾಹುಲ್ ಭಾಷಣ ಕಡಿತ; ಪ್ರಜಾಪ್ರಭುತ್ವ ದಹನ ಎಂದ ಕಾಂಗ್ರೆಸ್

ಈ ವೇಳೆ ಪ್ರತಿಕ್ರಿಯಿಸಿದ ಅಮಿತ್ ಶಾ, ”ಅಧಿರ್ ರಂಜನ್ ಜೀ ಇದನ್ನು ಈಗ ಏಕೆ ಚರ್ಚೆ ಮಾಡುತ್ತಿಲ್ಲ ಎಂದು ಕೇಳುತ್ತಿದ್ದಾರೆ. ಏಕೆಂದರೆ ಆಗ ನ್ಯೂನತೆಗಳಿದ್ದವು ಮತ್ತು ಈಗ ಯಾವುದೂ ಇಲ್ಲ. ಆಗ (ನೆಹರು-ವಾಜಪೇಯಿ) ಸಾವಿರಾರು ಹೆಕ್ಟೇರ್ ನಷ್ಟವಾದ ನಂತರ ಚರ್ಚೆ ಪ್ರಾರಂಭವಾಯಿತು” ಎಂದು ಹೇಳಿದರು.

ಲೋಕಸಭೆಯಿಂದ ಹೊರಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, ಬಿಜೆಪಿ ಸಂಸದರನ್ನು ಗೇಲಿ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರ ‘ಚಾಮ್ಚೆ’ ಎಂದು ಕರೆದಿದ್ದಾರೆ.

”ಪ್ರಧಾನಿಯವರು ತಪ್ಪುದಾರಿಗೆಳೆಯುವ ಭಾಷಣಕ್ಕೆ ಎಲ್ಲ ಬಿಜೆಪಿ ಸಂಸದರು ಚಪ್ಪಾಳೆ ತಟ್ಟಿದರು. ಪ್ರಧಾನಿ ಹೋದ ನಂತರ (ಲೋಕಸಭೆಯಿಂದ) ಎಲ್ಲಾ ‘ಚಾಮ್ಚೆ’ಗಳು ಹೋದವು. ಇದರಿಂದಾಗಿ ಸದನವನ್ನು ನಡೆಸಲು ಅಗತ್ಯವಿರುವ ಕನಿಷ್ಠ ಬಲ ಇರಲಿಲ್ಲ ಹಾಗಾಗಿ ಸದನವನ್ನು ಮುಂದೂಡಲಾಯಿತು. ಇದು ಸರ್ಕಾರದ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಭಾಷಣದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಶಶಿ ತರೂರ್, ”ಪ್ರಧಾನಿ ಉತ್ತಮ ಭಾಷಣ ಮಾಡಿದರು ಆದರೆ ಪ್ರತಿಪಕ್ಷಗಳು ಕೇಳಿದ ಯಾವುದೇ ಪ್ರಶ್ನೆಗಳಿಗೆ ಅವರು ಉತ್ತರಿಸಲಿಲ್ಲ” ಎಂದು ಹೇಳಿದರು.

“ಪ್ರಧಾನಿಯವರ ಭಾಷಣವು ​​ಪುನರಾವರ್ತಿತ, ವಾಕ್ಚಾತುರ್ಯ ಮತ್ತು ಪ್ರತಿಪಕ್ಷಗಳ ವಿರುದ್ಧ ವ್ಯಂಗ್ಯದಿಂದ ಕೂಡಿತ್ತು. ಪ್ರತಿಪಕ್ಷಗಳನ್ನು ಕೆಣಕುವುದರಿಂದ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ದೇಶವು ನಿಮ್ಮನ್ನು ನೋಡುತ್ತಿದೆ ಮತ್ತು ಮುಂದಿನ ಚುನಾವಣೆಯಲ್ಲಿ ಜನರು ಉತ್ತರ ನೀಡುತ್ತಾರೆ ಎಂದು ಬಿಆರ್‍‌ಎಸ್‌ ನಾಯಕಿ ಕವಿತಾ ಕಲ್ವಕುಂಟ್ಲ ಹೇಳಿದರು.

ಪ್ರಧಾನಿ ಮೋದಿಯವರ ಭಾಷಣದಿಂದ ತೃಪ್ತರಾಗಿಲ್ಲ, ಪ್ರತಿಪಕ್ಷಗಳು ಎತ್ತುವ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಹೇಳಿದ್ದಾರೆ.

”ನನಗೆ (ಪ್ರಧಾನಿ ಭಾಷಣ) ​​ತೃಪ್ತಿ ಇಲ್ಲ. ಅದಾನಿ ವಿರುದ್ಧದ ತನಿಖೆ ಬಗ್ಗೆ ಏನೂ ಮಾತನಾಡಲಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತರಲ್ಲದಿದ್ದರೆ ಪ್ರಧಾನ ಮಂತ್ರಿಯವರು ತನಿಖೆ ನಡೆಸಲು ಸೂಚಿಸಿಬೇಕು. ಪ್ರಧಾನಿ ಅವರನ್ನು (ಗೌತಮ್ ಅದಾನಿ) ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.” ಪ್ರಧಾನಿ ಭಾಷಣದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ರಾಹುಲ್ ಗಾಂಧಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...